ಶಾಲಾ ಕಾಲೇಜುಗಳಲ್ಲಿ ಜಾನಪದ ಪಠ್ಯ ಅವಶ್ಯ

ವಿಧಾನಪರಿಷತ್‌ ಸದಸ್ಯ ಸಿ.ಎಂ.ಲಿಂಗಪ್ಪ ಪ್ರತಿಪಾದನೆ

Team Udayavani, Jul 30, 2019, 4:21 PM IST

rn-tdy-2

ರಾಮನಗರ ತಾಲೂಕಿನ ಕೈಲಾಂಚ ಹೋಬಳಿಯ ಕೆರೆಮೇಗಳದೊಡ್ಡಿಯ ಮುದ್ದುಶ್ರೀ ದಿಬ್ಬದಲ್ಲಿ ಶಾಲಾ ಕಾಲೇಜುಗಳಲ್ಲಿ ಜಾನಪದ ಅಧ್ಯಯನವನ್ನು ಕಡ್ಡಾಯಗೊಳಿಸಲು ಕುರಿತು ಚಿಂತನಾ ಸಭೆ ನಡೆಯಿತು.

ರಾಮನಗರ: ಶಿಕ್ಷಣ ಪಠ್ಯಕ್ರಮದಲ್ಲಿ ಜಾನಪದವನ್ನು ಒಂದು ಕಡ್ಡಾಯ ಪಠ್ಯವನ್ನಾಗಿಸುವುದು ಅಗತ್ಯವಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಎಂ.ಲಿಂಗಪ್ಪ ಹೇಳಿದರು.

ತಾಲೂಕಿನ ಕೈಲಾಂಚ ಹೋಬಳಿಯ ಕೆರೆಮೇಗಳದೊಡ್ಡಿಯ ಮುದ್ದುಶ್ರೀ ದಿಬ್ಬದಲ್ಲಿ ಕೆ.ಎಸ್‌.ಮುದ್ದಪ್ಪ ಸ್ಮಾರಕ ಟ್ರಸ್ಟ್‌, ಇಂಡಿಯನ್‌ ಫೋಕ್ಲೋರ್‌ ರಿಸರ್ಚ್‌ ಆರ್ಗನೈಸೇಷನ್‌, ಇಫ್ರೊ ಜಾನಪದ ಮಹಾವಿದ್ಯಾಲಯ, ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಹಾಗೂ ಕನ್ನಡ ಅಧ್ಯಯನ ಸಂಸ್ಥೆ, ಬೆಂಗಳೂರು ವಿಶ್ವವಿದ್ಯಾಲಯಗಳ ಸಹಯೋಗದಲ್ಲಿ ನಡೆದ ಶಾಲಾ ಕಾಲೇಜುಗಳಲ್ಲಿ ಜಾನಪದ ಅಧ್ಯಯನವನ್ನು ಕಡ್ಡಾಯಗೊಳಿಸಲು ಕುರಿತು ನಡೆದ ಚಿಂತನಾ ಸಭೆಯಲ್ಲಿ ಅವರು ಮಾತನಾಡಿದರು.

ಶಾಲಾ, ಕಾಲೇಜುಗಳ ಪಠ್ಯಕ್ರಮದಲ್ಲಿ ಜಾನಪದ ಒಂದು ಪಠ್ಯ ಕ್ರಮವಾದರೆ ಆಯಾ ಭಾಗದ ಜಾನಪದ ಕಲೆಯನ್ನು ಕಲಿಯುವ ಆ ಮೂಲಕ ಹೊಸ ತಲೆಮಾರಿನಲ್ಲಿ ಜಾನಪದವನ್ನು ಉಳಿಸಿ, ಕಲಾವಿದರನ್ನು ಹುಟ್ಟುಹಾಕಬಹುದು ಎಂದರು.

ಜಾನಪದ ಕಲಾವಿದರಿಗೆ ಗೌರವ ನೀಡಿ: ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಡಾ.ಎಂ.ಎನ್‌. ವೆಂಕಟೇಶ್‌ ಮಾತನಾಡಿ, ಜಾನಪದ ಕಲಾವಿದರಿಗೆ ನಮ್ಮಲ್ಲಿ ಗೌರವ ಕಡಿಮೆ. ಹಾಗಾಗಿ ಜಾನಪದ ಕಲಾವಿದರಿಗೆ ಗೌರವ ಸಿಗುವ ವಾತಾವರಣವನ್ನು ನಿರ್ಮಿಸಬೇಕಿದೆ. ಕಲಾವಿದರು ತಮ್ಮ ಕಲೆಯನ್ನೇ ನಂಬಿ ಬದುಕಬಹುದೆಂಬ ಆತ್ಮವಿಶ್ವಾಸವನ್ನು ಮೂಡಿಸಬೇಕಿದೆ ಎಂದು ತಿಳಿಸಿದರು.

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಚಂದ್ರಶೇಖರ್‌ ಮಾತನಾಡಿ, ಇಂದಿನ ಜಾನಪದ ಅಧ್ಯಯನದ ತುರ್ತು ಬೇರೆಯೇ ಆಗಿದೆ. ಹಾಗಾಗಿ ಇದನ್ನು ಗಮನದಲ್ಲಿಟ್ಟುಕೂಂಡು ಈ ಕಾಲಕ್ಕೆ ಹೊಂದಿಕೆಯಾಗುವಂತಹ ಅಧ್ಯಯನ ವಿಧಾನಗಳನ್ನು ಕಂಡುಕೊಳ್ಳಬೇಕಾಗಿದೆ ಎಂದು ಸಲಹೆ ನೀಡಿದರು.

ಜಾನಪದ ಸಾಹಿತ್ಯ ಅನುವಾದ ಅವಶ್ಯ: ಇಫ್ರೋ ಪ್ರಧಾನ ಕಾರ್ಯದರ್ಶಿ ಡಾ.ಎಂ.ಬೈರೇಗೌಡ ಮಾತನಾಡಿ, ಕನ್ನಡ ಜಾನಪದವನ್ನು ಇಂಗ್ಲಿಷ್‌ಗೆ ಮತ್ತು ಭಾರತೀಯ ಇತರೆ ಭಾಷೆಗೆ ಅನುವಾದ ಮಾಡುವ ಅಗತ್ಯವಿದೆ. ಹಾಗಾಗಿ ವಿಶ್ವವಿದ್ಯಾಲಯಗಳಲ್ಲಿ ಭಾಷಾಂತರ ವಿಭಾಗವನ್ನು ತೆರೆಯಬೇಕು. ಅನುವಾದವಾದ ಸಾಹಿತ್ಯವನ್ನು ಅಂತರ್ಜಾಲದಲ್ಲಿ ಲಭ್ಯವಾಗುವಂತೆ ಅಂತರ್ಜಾಲ ತಾಣವೊಂದನ್ನು ಅಭಿವೃದ್ಧಿಪಡಿಸುವ ಅಗತ್ಯವಿದೆ ಎಂದು ಹೇಳಿದರು.

ಇಂಡಿಯನ್‌ ಫೋಕ್ಲೋರ್‌ ರಿಸರ್ಚ್‌ ಆರ್ಗನೈಸೇಷನ್‌ ಖಜಾಂಚಿ ಕೆ.ಎಸ್‌. ರಂಗೇಗೌಡ ಮಾತನಾಡಿದರು. ಇಫ್ರೋ ಅಧ್ಯಕ್ಷ ಡಾ.ಇ.ಕೆ.ಗೋವಿಂದ ವರ್ಮರಾಜ, ಡಾ.ರತಿ ತಂಬಟ್ಟಿ, ತಮಿಳು ಜಾನಪದ ವಿದ್ವಾಂಸ ಡಾ.ರಾಮಾನುಜನ್‌, ಜಾನಪದ ವಿದ್ವಾಂಸ ಡಾ.ಕ್ಯಾತನಹಳ್ಳಿ ರಾಮಣ್ಣ, ಸಂಶೋಧನಾ ವಿದ್ಯಾರ್ಥಿಗಳಾದ ಜಿ.ಸಣ್ಣಯ್ಯ, ರಜಿಯಾ ನದಾಫ್, ಡಾ.ಬಸವರಾಜು, ದ್ರಾವಿಡ ವಿಶ್ವವಿದ್ಯಾಲಯದ ಡಾ.ನರಸಿಂಹ ಪ್ರಸಾದ್‌, ಟಿ. ಲಕ್ಷ್ಮೀನಾರಾಯಣ, ಕೇರಳದ ಕ್ಯಾಲಿಕಟ್ ವಿಶ್ವವಿದ್ಯಾಲದ ಡಾ.ವಿಜಿಶಾ, ಡಾ.ಧನ್ಯಾ, ಮೈಸೂರಿನ ದಿನೇಶ್‌, ಡಾ.ಯು.ಎಂ. ರವಿ ಸೇರಿದಂತೆ ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.