ನಿತ್ಯಾನಂದ ಆಶ್ರಮದಿಂದ ವಿದೇಶಿ ಪ್ರಜೆ ನಾಪತ್ತೆ
Team Udayavani, Jul 12, 2021, 1:51 PM IST
ರಾಮನಗರ: ಬಿಡದಿ ಬಳಿಯ ನಿತ್ಯಾನಂದ ಸ್ವಾಮಿ ಧ್ಯಾನಪೀಠದಿಂದ ಮಲೇಷ್ಯಾ ಪ್ರಜೆ ಕ್ರಿಸ್ಟನ್ ಭಾಸ್ಕರನ್ (23) ಎಂಬ ವಿದೇಶಿ ಪ್ರಜೆ ನಾಪತ್ತೆಯಾಗಿದ್ದಾನೆ ಎಂಬ ದೂರು ಬಿಡದಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಧ್ಯಾನಪೀಠದಲ್ಲೇ ವಾಸವಾಗಿರುವ ನಾಪತ್ತೆಯಾಗಿರವ ವಿದೇಶಿ ಪ್ರಜೆಯ ತಾಯಿ ಪುಷ್ಪಾ ರಾಣಿ ಎಂಬುವರು ಪೊಲೀಸರಿಗೆ ದೂರು ನೀಡಿದ್ದಾರೆ. ಪಾಸ್ಪೋರ್ಟ್ಸಮೇತ ನಾಪತ್ತೆಯಾಗಿರುವ ತಮ್ಮ ಮಗನನ್ನು ಹುಡುಕಿಕೊಡುವಂತೆ ಅವರು ಪೊಲೀಸ ರನ್ನು ಕೋರಿದ್ದಾರೆ. ಮಾನಸಿಕ ಅಸ್ವಸ್ಥನಂತಾಗಿದ್ದ ತಮ್ಮ ಮಗನನ್ನು 8 ವರ್ಷಗಳ ಹಿಂದೆ ಚಿಕಿತ್ಸೆಗಾಗಿ ಮಲೇಷ್ಯಾದಿಂದ ಕರೆತಂದು ಬಿಡದಿಯ ಧ್ಯಾನಪೀಠದ ಆಶ್ರಮದಲ್ಲಿ ನೆಲೆಸಿದ್ದಾಗಿ. ಕಳೆದ ಜುಲೈ 9ರ ಬೆಳಗ್ಗೆ 11 ಗಂಟೆ ಸಮಯದಲ್ಲಿ ಶೌಚಾಲಯಕ್ಕೆ ಹೋಗಿ ಬರುವುದಾಗಿ ತೆರಳಿದ ಕ್ರಿಸ್ಟನ್ ಭಾಸ್ಕರನ್ ವಾಪಸ್ ಕೊಠಡಿಗೆ ವಾಪಸ್ ಬಂದಿಲ್ಲ ಎಂದು ಪುಷ್ಪಾರಾಣಿ ತಿಳಿಸಿದ್ದಾರೆ.
ಪೊಲೀಸರಿಗೆ ದೂರು ಕೊಡುವ ಮುನ್ನ ಆಶ್ರಮದ ಎಲ್ಲಾಕಡೆ ಹುಡುಕಿ ರುವುದಾಗಿ, ಆತನ ಲಾಕರ್ನಲ್ಲಿದ್ದ ಪಾಸ್ ಪೋರ್ಟ್ ಕಾಣೆಯಾ ಗಿದೆ. ತಮ್ಮ ಪುತ್ರ ತಕ್ಷಣವೇ ಕೋಪಗೊಳ್ಳುವುದು, ಎದು ರಿಗಿರುವ ವ್ಯಕ್ತಿಗಳ ಮೇಲೆ ಕೈಗೆ ಸಿಕ್ಕ ವಸ್ತುಗ ಳನ್ನು ಎಸೆಯುವುದು, ಸಿಕ್ಕ ವಸ್ತುಗಳನ್ನು ಒಡೆದು ಹಾಕುತ್ತಾನೆ ಎಂದು ಹೇಳಿಕೊಂಡಿ ದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಪತ್ತೆಯಾಗಿರುವ ವ್ಯಕ್ತಿಯ ಹುಡು ಕಾಟ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
MUST WATCH
ಹೊಸ ಸೇರ್ಪಡೆ
Kolkata Raiders ಕೋಚ್ ಬಗ್ಗೆ ಆಟಗಾರ ಡೇವಿಡ್ ವೀಸ್ ಆರೋಪ
India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್ ಹೇಳಿಕೆಗೆ ಆಕ್ರೋಶ
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Mumbai Indians: ಸೂರ್ಯಕುಮಾರ್ ಶೀಘ್ರ ಚೇತರಿಕೆ ಸಾಧ್ಯತೆ