ಫ್ರೀ ಬಸ್ ನಲ್ಲಿ ಜನವೋ ಜನ: ಬಸ್ ಇಲ್ಲದೇ ಶಾಲಾ ಮಕ್ಕಳು ಪರದಾಟ
Team Udayavani, Jul 27, 2023, 11:44 AM IST
ರಾಮನಗರ: ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೆಎಸ್ಆರ್ ಟಿಸಿ ಬಸ್ ಗಳು ತುಂಬಿ ತುಳುಕುತ್ತಿವೆ. ಹೀಗಾಗಿ ಬಸ್ ಇಲ್ಲದೇ ಶಾಲಾ ಮಕ್ಕಳು ಪರದಾಟ ನಡೆಸುವಂತಾಗಿದೆ.
ಮಾಗಡಿ ತಾಲೂಕಿನ ನೇತೇನಹಳ್ಳಿ ಗ್ರಾಮದಲ್ಲಿ ಜನರು ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಶಕ್ತಿ ಯೋಜನೆ ಜಾರಿಯಾದಾಗಿದ್ದಾಗಿನಿಂದ ವಿದ್ಯಾರ್ಥಿಗಳು ಬಸ್ಸಿಲ್ಲದೆ ಪರದಾಡುತ್ತಿದ್ದಾರೆ. ರಾಮನಗರ – ಏಳಗೇಹಳ್ಳಿ ಮಾರ್ಗದಲ್ಲಿ ಶಾಲಾ ಸಮಯದಲ್ಲಿ ಸಂಚರಿಸುವ ಏಕೈಕ ಬಸ್ ನಲ್ಲಿ ಇಂದು ಸಿಬ್ಬಂದಿ 120 ಕ್ಕೂ ಹೆಚ್ಚು ಜನರನ್ನು ಹತ್ತಿಸಿಕೊಂಡಿದ್ದಾರೆ. ಇದರಿಂದ ರೋಸಿಹೋದ ನೇತೇನಹಳ್ಳಿ ಗ್ರಾಮಸ್ಥರು ಕೆಎಸ್ಆರ್ ಟಿಸಿ ಸಿಬ್ಬಂದಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.
ಇದನ್ನೂ ಓದಿ:Seema Haider: ಸಚಿನ್-ಸೀಮಾ ಹೈದರ್ ವಿವಾಹವಾಗಲು ನೆರವಾಗಿದ್ದ ಇಬ್ಬರನ್ನು ಬಂಧಿಸಿದ ಪೊಲೀಸರು
ಮಾಗಡಿ ಡಿಪೋ ಮ್ಯಾನೇಜನರ್, ತಹಶೀಲ್ದಾರ್ ಸ್ಥಳಕ್ಕೆ ಬರುವಂತೆ ಗ್ರಾಮಸ್ಥರು ಪಟ್ಟು ಹಿಡಿದರು. ಬಳಿಕ ದೂರವಾಣಿ ಮೂಲಕ ತಹಶೀಲ್ದಾರ್ ಅವರು ಸಮಸ್ಯೆ ಬಗೆಯರಿಸುವುದಾಗಿ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tourist spot: ಪ್ರವಾಸಿಗರ ಡೆತ್ಸ್ಪಾಟ್ ಆಗಿರುವ ಸಂಗಮ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ