ಕಬ್ಬಾಳಮ್ಮ ದೇಗುಲದ ಎದುರೇ ಕಸ


Team Udayavani, Dec 8, 2021, 3:50 PM IST

ಕಬ್ಬಾಳಮ್ಮ ದೇಗುಲದ ಎದುರೇ ಕಸ

ಕನಕಪುರ: ಕಾರ್ತಿಕ ಮಾಸದಲ್ಲಿ ಭಕ್ತರ ದಂಡು ಹೆಚ್ಚಾದಂತೆ ಶಕ್ತಿ ದೇವತೆ ಕಬ್ಬಾಳಮ್ಮನ ಕ್ಷೇತ್ರ ಕಸದ ಗುಂಡಿಯಾಗಿ ಮಾರ್ಪಡುತ್ತಿದೆ.

ತಾಲೂಕಿನ, ಸಾತನೂರು ಹೋಬಳಿಯ, ಶಕ್ತಿ ದೇವತೆ ಕಬ್ಟಾಳು ಗ್ರಾಮದ ಕಬ್ಟಾಳಮ್ಮ ದೇವಾಲಯದ ಸುತ್ತಮುತ್ತ ಪ್ರದೇಶದಲ್ಲಿ ಕಣ್ಣುಹಾಯಿಸಿದ ಕಡೆಯಲೆಲ್ಲ ಕಸದ ರಾಶಿ ಮುಖಕ್ಕೆ ರಾಚುತ್ತಿದೆ. ಎಲ್ಲೆಂದರಲ್ಲಿ ತ್ಯಾಜ್ಯ ಕಸ ಸುರಿಯುವುದರಿಂದ ದೇವಾಲಯದ ಸುತ್ತಮುತ್ತ ಪ್ರದೇಶ ಮಲಿನಗೊಂಡು, ಗಬ್ಬುನಾರುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಎಲ್ಲೆಂದರಲ್ಲಿ ಕಸದ ರಾಶಿ: ಕಬ್ಬಾಳು ಗ್ರಾಮದ, ಕಬ್ಬಾಳಮ್ಮ ದೇವಾಲಯ ಜಿಲ್ಲೆಯ, ಶಕ್ತಿ ದೇವತೆಯಾಗಿದ್ದು ಕಬ್ಬಾಳು ಕ್ಷೇತ್ರಕ್ಕೆ ದಿನನಿತ್ಯ ಸಾವಿರಾರು ಭಕ್ತರು ಕಬ್ಟಾಳಮ್ಮನ ದರ್ಶನ ಪಡೆಯಲು ರಾಜ್ಯದ ಮೂಲೆಮೂಲೆಗಳಿಂದ ಭೇಟಿ ನೀಡುತ್ತಾರೆ. ಕಳೆದ ತಿಂಗಳು ಕಾರ್ತಿಕ ಮಾಸದ ಹಿನ್ನೆಲೆ ದೇಗುಲಕ್ಕೆ ಭೇಟಿ ನೀಡುವ ಭಕ್ತರ ದಂಡೂದುಪ್ಪಟ್ಟಾಗಿದೆ. ಸ್ಥಳೀಯ ಗ್ರಾಪಂ ಅಧಿಕಾರಿಗಳುಕಸ ಸಂಗ್ರಹಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸದೇ ಇರುವುದರಿಂದ ದೇವಾಲಯಕ್ಕೆ ಪ್ರತಿ ದಿನ ಸಾವಿರಾರು ಭಕ್ತರು ಭೇಟಿ ನೀಡುತ್ತಾರೆ. ಇದರಿಂದ ಪೂಜೆ ಸಾಮಗ್ರಿಗಳ ಖರೀದಿ ಮತ್ತು ಅಂಗಡಿ ಮಳಿಗಳ ವ್ಯಾಪಾರವೂ ಹೆಚ್ಚಾಗಿದೆ. ಅಂಗಡಿಗಳಲ್ಲಿ ಉತ್ಪತ್ತಿ ಯಾಗುವ ಪ್ಲಾಸ್ಟಿಕ್‌ ಮತ್ತು ತ್ಯಾಜ್ಯವನ್ನು ದೇವಾಲ ಯದ ಅಕ್ಕಪಕ್ಕದಲ್ಲೇ ತಂದು ಸುರಿಯುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ.

ದೇಗುಲದ ಎದುರೇ ಕಸ: ಅಂಗಡಿ ವ್ಯಾಪಾರಿಗಳು, ವ್ಯಾಪಾರ ಮಾಡಿ ಪ್ಲಾಸ್ಟಿಕ್‌, ಪೂಜ ಸಾಮಾಗ್ರಿ ವಸ್ತುಗಳು, ಹೂವಿನ ಹಾರಗಳನ್ನು ಎಲ್ಲೆಂದರಲ್ಲಿ ಎಸೆಯುವುದು ಹಾಗೂ ತ್ಯಾಜ್ಯದ ವಸ್ತುಗಳನ್ನು ಮೂಟೆ ಕಟ್ಟಿ ಎಲ್ಲೆಂದರಲ್ಲಿ ತಂದು ಬಿಸಾಡಿದ್ದಾರೆ. ಕಬ್ಟಾಳಮ್ಮನ ದೇವಾಲಯದ ಕಾಂಪೌಂಡ್‌ ಎದುರೇ ಕಸದ ರಾಶಿಯೇ ಬಿದ್ದಿದೆ. ಹಾಗೂ, ಕಬ್ಟಾಳ ಗ್ರಾಪಂ ಮುಂಭಾಗದ ಬೆಸ್ಕಾಂ, ಕಚೇರಿ ಮುಂಭಾಗದ ಖಾಲಿ ಜಾಗದಲ್ಲಿ ರಾಶಿಗಟ್ಟಲೆ, ಪ್ಲಾಸ್ಟಿಕ್‌ ವಸ್ತುಗಳು ತ್ಯಾಜ್ಯವನ್ನು ಮೂಟೆಗಟ್ಟೆಲೆ ಸುರಿಯಲಾಗಿದೆ.

ವರ್ತಕರ ಬೇಜವಾಬ್ದಾರಿ: ಸ್ಥಳೀಯ ಸಂಸ್ಥೆ ಅಧಿಕಾರಿಗಳು ದೇವಾಲಯದ ಮುಂಭಾಗದ, ಅಂಗಡಿ ತೆರವುಗೊಳಿಸಿ, ದೇವಾಲಯದ ಕಾಂಪೌಂಡ್‌, ಮುಂಭಾಗ ಸ್ವಚ್ಛಗೊಳಿಸಿದರು.ಆದರೆ, ಸ್ಥಳೀಯ ರಾಜಕಾರಣಿಗಳು, ಮಧ್ಯ  ಪ್ರವೇಶಿಸಿ, ದೇವಾಲಯದ, ಮುಂಭಾಗದಲ್ಲೇ ಅಂಗಡಿಗಳಿದ್ದು ವ್ಯಾಪಾರ ವಹಿವಾಟಿಗೆ ಅವಕಾಶ ಕೊಟ್ಟಿದ್ದಾರೆ. ಇದರಿಂದ ವ್ಯಾಪಾರಿಗಳು ಅಂಗಡಿಗಳನ್ನು ಇಟ್ಟು, ಎಲ್ಲೆಂದರಲ್ಲಿ, ತ್ಯಾಜ್ಯಎಸೆದು ಶಕ್ತಿ ದೇವತೆ ಕಬ್ಟಾಳಮ್ಮನ ಕ್ಷೇತ್ರವನ್ನು ಮಲಿನ ಮಾಡಿದ್ದಾರೆ. ಶಕ್ತಿ ದೇವತೆಯಾದ ಹಾಗೂ ಪವಿತ್ರ ಸ್ಥಳವಾದ ಕಬ್ಬಾಳಮ್ಮ ದೇಗುಲದ ಪರಿಸರವನ್ನು ಸ್ವಚ್ಛವಾಗಿ ಇಡಬೇಕು. ಕಸದ ರಾಶಿ ತೆರವುಗೊಳಿಸಿ, ಸ್ವಚ್ಛತೆ ಕಾಪಾಡಬೇಕು ಎಂದು ಕಬ್ಟಾಳಮ್ಮನ. ಭಕ್ತರು, ಹಾಗೂ, ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕಬ್ಟಾಳಮ ದೇವಾಲಯದ ಸುತ್ತಮುತ್ತ ಪ್ರದೇಶದಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯ, ಕಸ ಎಸೆದು ಕಬ್ಟಾಳಮ್ಮ ದೇವಾಲಯದ ಸುತ್ತಮುತ್ತಲಿನ ಪ್ರದೇಶ ಮಲಿನ ಗೊಳಿಸಲಾಗಿದೆ.ದಿನನಿತ್ಯ, ದೇವಾಲಯಕ್ಕೆ ಬರುವ ಭಕ್ತರು ಮೂಗು ಮುಚ್ಚಿ ಕೊಂಡು ಓಡಾಡು ಸ್ಥಿತಿ ನಿರ್ಮಾಣವಾಗಿದೆ. ಸಂಬಂಧ ಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು– ಶಂಕರೇಗೌಡ, ಸಮಾಜ ಸೇವಕ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.