ಕೊರೊನಾ ಎದುರಿಸಲು ಸಿದ್ದರಾಗಿ
Team Udayavani, Jun 2, 2021, 4:23 PM IST
ರಾಮನಗರ: ಎರಡನೇ ಅಲೆಗಿಂತಲೂಮೂರನೇ ಅಲೆ ಇನ್ನೂ ಗಂಭೀರವಾಗಿರುತ್ತದೆಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.ಹೀಗಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಮತ್ತು ಆರೋಗ್ಯ ಇಲಾಖೆ ಪರಿಸ್ಥಿತಿ ಎದುರಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಬೇಕುಎಂದು ರಾಮನಗರ ವಿಧಾನಸಭಾ ಕ್ಷೇತ್ರದಶಾಸಕಿ ಅನಿತಾ ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಮ್ಮ ಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯ್ತಿಗಳ ಪಿಡಿಒಗಳು, ತಾಪಂ, ಜಿಪಂ ಅಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸೋಮವಾರ ವಚ್ಯುಯಲ್ ಸಭೆನಡೆಸಿದ ಅವರು ಮಾತನಾಡಿ, ಮೂರನೇಅಲೆಯ ತೀವ್ರತೆಯ ಬಗ್ಗೆ ತಜ್ಞರ ಚರ್ಚೆಗಳಾಗುತ್ತಿವೆ. ನಾವು ಸಿದ್ಧರಾಗಬೇಕಾಗಿದೆ.ಮುಂಜಾಗ್ರತೆಗೆ ಬೇಕಾದ ಎಲ್ಲಾ ಕ್ರಮಗಳನ್ನುಕಲೆ ಹಾಕಿ ಎಂದು ಸಲಹೆ ನೀಡಿದರು.ವಿಶೇಷವಾಗಿ ಗ್ರಾಮೀಣ ಭಾಗದಲ್ಲಿಕೋವಿಡ್ ಸೋಂಕಿನ ಬಗ್ಗೆ ನಿರಂತರ ಜಾಗೃತಿವಹಿಸಬೇಕಾಗಿದೆ. ಮೂರನೇ ಅಲೆಯಬಗ್ಗೆಯೂ ಅರಿವು ಮೂಡಿಸಿ ಎಂದುಹೇಳಿದರು.
ಆಹಾರ ಕಿಟ್ ವಿತರಿಸಿ: ಕೋವಿಡ್ ತುರ್ತುನಿಧಿ ಮತ್ತು 15ನೇ ಹಣಕಾಸು ಯೋಜನೆಯಡಿಯಲ್ಲಿನ ಅನುದಾನವನ್ನು ಬಳಸಿಕೊಂಡುಕ್ಷೇತ್ರದಲ್ಲಿನ ಬಡವರನ್ನು ಗುರುತಿಸಿ, ವಿಶೇಷಸಂದರ್ಭ ಎಂದು ಪರಿಗಣಿಸಿ ಆಹಾರ ವಿತರಿಸಬೇಕು ಎಂದು ಜಿಲ್ಲಾ ಪಂಚಾಯ್ತಿ ಸಿಇಒಇಕ್ರಂ ಅವರಿಗೆ ಸೂಚಿಸಿದರು.
ಕೋವಿಡ್ ಕೇರ್ ಸೆಂಟರ್ಗಳಿಗೆ ಆಗಾಗ್ಗೆಭೇಟಿ ನೀಡಿ ಪರಿಶೀಲಿಸಿ, ಕ್ರಮವಹಿಸುವಂತೆಸಿಇಒ ಇಕ್ರಂ ಅವರಿಗೆ ಸೂಚಿಸಿದರು. ನರೇಗಯೋಜನೆಯಡಿ ಕಾಮಗಾರಿಗಳ ಬಗ್ಗೆಮಾಹಿತಿ ಪಡೆದುಕೊಂಡ ಅವರು, ಟಾರ್ಗೆಟ್ರೀಚ್ ಮಾಡಿ ಎಂದರು.ಸಭೆಯಲ್ಲಿ ರಾಮನಗರ ತಹಶೀಲ್ದಾರ್ ನರಸಿಂಹಮೂರ್ತಿ, ಕನಕಪುರ ತಹಶೀಲ್ದಾರ್(ಪ್ರಭಾರ) ಹರ್ಷವರ್ಧನ, ಡಿಎಚ್ಒ ಡಾ.ನಿರಂಜನ್, ಆರ್ಸಿಎಚ್ ಅಧಿಕಾರಿ ಡಾ.ಪದ್ಮಾ,ಮಹಿಳಾ ಮತ್ತು ಮಕ್ಕಳ ಇಲಾಖೆ ಸಹಾಯಕನಿರ್ದೇಶಕ ಸಿ.ವಿ.ರಾಮನ್, ರಾಮನಗರ ಇಒಶಿವಕುಮಾರ್, ಪಿಎಚ್ಸಿಗಳ ವೈದ್ಯರು,ರಾಮನಗರನಗರಸಭೆಕಮೀಷನರ್ ನಂದಕುಮಾರ್ ಮತ್ತು ವಿವಿಧ ಇಲಾಖೆ ಅಧಿಕಾರಿಗಳು, ಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾಪಂಗಳ ಪಿಡಿಒಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್ಡಿಕೆ ಸ್ಪರ್ಧೆ ಸುಳಿವು
Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ ಕಬ್ಬಿಣದ ಕಡಲೆ
Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್ ವಾಗ್ಧಾಳಿ
MUST WATCH
ಹೊಸ ಸೇರ್ಪಡೆ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್