Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್
Team Udayavani, Mar 27, 2024, 5:43 PM IST
ರಾಮನಗರ: ನಾನು ನಿರಂತರವಾಗಿ ಜನರ ಮಧ್ಯೆ ಇದ್ದು ಕೆಲಸ ಮಾಡಿದ್ದು, ಈಗ ನನಗೆ ಕೂಲಿ ಕೊಡಿ ಎಂದು ಕೇಳುತ್ತಿದ್ದೇನೆ. ಜನರಿಂದ ನನಗೆ ಉತ್ತಮ ಸ್ಪಂದನೆ ಸಿಗುತ್ತಿದೆ ಎಂದು ಸಂಸದ ಡಿ.ಕೆ. ಸುರೇಶ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಟೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕರ್ತರು, ಸಾರ್ವಜನಿಕರು ಬಹಳ ಉತ್ಸಾಹದಿಂದ ನನಗೆ ಬೆಂಬಲ ನೀಡುತ್ತಿದ್ದಾರೆ. ಇದೇ ಕಾರಣಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಹಲವು ಕಾರ್ಯಕರ್ತರು ಆ ಪಕ್ಷಗಳನ್ನು ತೊರೆದು ನಮ್ಮ ಪಕ್ಷ ಸೇರುತ್ತಿದ್ದಾರೆ. ಇದರಿಂದಾಗಿ ನಮಗೆ ಮತ್ತಷ್ಟು ಶಕ್ತಿ ಹೆಚ್ಚಾಗಿದೆ ಎಂದರು.
ನಾಳೆ ನಾಮಪತ್ರ ಸಲ್ಲಿಕೆ: ನಾಮಪತ್ರ ಸಲ್ಲಿಕೆ ವಿಚಾರವಾಗಿ ಕೇಳಿದಾಗ, “ನಾಳೆ ಬೆಳಗ್ಗೆ 11 ಗಂಟೆಗೆ ರಾಮನಗರದಲ್ಲಿ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ, ಗೃಹ ಸಚಿವ ಪರಮೇಶ್ವರ್ ಅವರು ಕೂಡ ಆಗಮಿಸಲಿದ್ದಾರೆ. ಅದೇ ರೀತಿ ಸಾರ್ವಜನಿಕರಿಗೂ ಆಹ್ವಾನ ನೀಡಿ, ನನಗೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದ್ದೇನೆ” ಎಂದು ತಿಳಿಸಿದರು.
ಯೋಗೇಶ್ವರ್ ಅವರ ಪುತ್ರಿ ನಿಶಾ ಯೋಗೇಶ್ವರ್ ಅವರು ಪಕ್ಷ ಸೇರ್ಪಡೆಯಾಗುವ ಸುದ್ದಿ ಹರಿದಾಡುತ್ತಿದೆ ಎಂದು ಕೇಳಿದಾಗ, “ಈ ಬಗ್ಗೆ ಚರ್ಚೆ ನಡೆಯುತ್ತಿದ್ದು, ಪಕ್ಷದ ವರಿಷ್ಠರು ಈ ಬಗ್ಗೆ ತೀರ್ಮಾನ ಮಾಡಲಿದ್ದಾರೆ. ಅವರು ಬಹಳ ದಿನಗಳಿಂದ ಪಕ್ಷ ಸೇರುವುದಾಗಿ ಹೇಳುತ್ತಿದ್ದಾರೆ. ಅವರ ಸ್ವಯಂ ತೀರ್ಮಾನದ ಬಗ್ಗೆ ಜಿಲ್ಲೆಯ ಮುಖಂಡರು ಹಾಗೂ ನಾಯಕರ ಜತೆ ಚರ್ಚೆ ಮಾಡಿ ಅವರ ಅಭಿಪ್ರಾಯದ ಮೇರೆಗೆ ತೀರ್ಮಾನಿಸಲಾಗುವುದು” ಎಂದು ತಿಳಿಸಿದರು.
ಕೋಲಾರದಲ್ಲಿ ಮುನಿಯಪ್ಪ ಅವರ ಕುಟುಂಬಕ್ಕೆ ಟಿಕೆಟ್ ನೀಡಬಾರದು ಎಂಬ ಆಗ್ರಹದೊಂದಿಗೆ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ರಾಜೀನಾಮೆ ಬೆದರಿಕೆ ಬಗ್ಗೆ ಕೇಳಿದಾಗ, ಈ ವಿಚಾರವಾಗಿ ನನಗೆ ಮಾಹಿತಿ ಇಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ