ನೆರೆ ಸಂತ್ರಸ್ತರಿಗೆ ಪರಿಹಾರ ಕೊಡಿ
ಜಿಲ್ಲಾಧಿಕಾರಿ ಕಚೇರಿ ಬಳಿ ರೈತಸಂಘ-ಹಸಿರು ಸೇನೆ ಪ್ರತಿಭಟನೆ
Team Udayavani, Aug 27, 2019, 5:19 PM IST
ನೆರೆ ಸಂತ್ರಸ್ತರಿಗೆ ಕೂಡಲೇ ಅಗತ್ಯ ಪರಿಹಾರ, ಸೌಲಭ್ಯ ಕಲ್ಪಿಸಲು ರಾಮನಗರದ ಜಿಲ್ಲಾ ಕಚೇರಿಗಳ ಸಂಕೀರ್ಣದ ಮುಂಭಾಗ ಸಾಂಕೇತಿಕವಾಗಿ ಪ್ರತಿಭಟನೆ ನಡೆಯಿತು.
ರಾಮನಗರ: ರಾಜ್ಯದ 17 ಜಿಲ್ಲೆಗಳ ನೆರೆ ಸಂತ್ರಸ್ತರಿಗೆ ಶೀಘ್ರ ಪರಿಹಾರ ನೀಡುವ ಜತೆಗೆ ಪುನರ್ವಸತಿ ಕಲ್ಪಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ನಗರದ ಜಿಲ್ಲಾ ಕಚೇರಿಗಳ ಸಂಕೀರ್ಣದ ಮುಂಭಾಗ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಮುಖಡರು, ಪ್ರವಾಹ ಗಂಭೀರ ಪರಿಸ್ಥಿತಿಯನ್ನು ಉಂಡು ಮಾಡಿ ಜನ, ಜಾನುವಾರುಗಳ ಸಾವಿಗೆ ಕಾರಣವಾಗಿದೆ, ಆಸ್ತಿ ನಷ್ಟವಾಗಿದೆ ಎಂದು ಹೇಳಿದರು.
ಪರ್ಯಾಯ ವ್ಯವಸ್ಥೆ ಕಲ್ಪಿಸಿ: ಕೇಂದ್ರ ಸರ್ಕಾರ ತಕ್ಷಣ ರಾಜ್ಯ ಸರ್ಕಾರದ ಮೂಲಕ ನೆರವು ನೀಡಬೇಕಾಗಿದೆ. ಮುಳುಗಡೆಯಾ ಗಿರುವ ಹಳ್ಳಿಗಳನ್ನು ತೆರವು ಮಾಡಿ ಪುನರ್ ನಿರ್ಮಾಣ ಮಾಡಬೇಕು, ಜಾನುವಾರು ಗಳನ್ನು ಕಳೆದುಕೊಂಡವರಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದರು.
ಸಾಲ ವಸೂಲಾತಿ ನಿಲ್ಲಿಸಿ: ಮನೆ ಕಳೆದುಕೊಂಡವರಿಗೆ ಸರ್ಕಾರ ತಲಾ 10 ಲಕ್ಷ ರೂ ನೆರವು ಕೊಟ್ಟು ಮನೆ ನಿರ್ಮಿಸಿಕೊಳ್ಳಲು ಅವಕಾಶ ಕೊಡಬೇಕು. ಮೃತಪಟ್ಟವರ ಕುಟುಂಬಕ್ಕೆ ತಲಾ 25 ಲಕ್ಷ ರೂ., ಪರಿಹಾರ ನೀಡಬೇಕು. ರೈತರು ಮತ್ತು ಮಹಿಳಾ ಸಂಘಟನೆಗಳ ಯಾವುದೇ ಸಾಲಗಳ ವಸೂಲಾತಿ ನಿಲ್ಲಿಸಬೇಕು ಎಂದರು.
ಏಕಾಏಕಿ ಹರಿದ ನೀರು, ಯಾರ ಹೊಣೆ?: ಜಲಾಶಯಗಳ ನಿರ್ವಹಣೆ ಹೊಣೆ ಹೊತ್ತವರ ನಿರ್ಲಕ್ಷ್ಯದಿಂದ ಉತ್ತರ ಕರ್ನಾಟಕದ ನೂರಾರು ಹಳ್ಳಿಗಳು ಜಲಾವೃತ್ತವಾಗಿದ್ದವು. ಅಲ್ಲಿನ ಕಬ್ಬಿನ ತೋಟ ಸೇರಿದಂತೆ ನೀರು ಆವೃತ್ತವಾಗಿದ್ದ ತೋಟಗಳೆಲ್ಲಾ ಕೊಳೆತು ನಾರುತ್ತಿವೆ. 10 ನದಿ ನೀರು ಒಮ್ಮೆಲೆ ದಿನಗ ಟ್ಟಲೆ ಹರಿದರೆ ಏನಾದರೂ ಉಳಿದೀತೆ ಎಂದು ಪ್ರಶ್ನಿಸಿದ ಪ್ರತಿಭಟನಾಕಾರರು, ಇದೀಗ ರಾಜ್ಯದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ, 17 ಜಿಲ್ಲೆಗಳಿಗೂ ಒಬ್ಬಬ್ಬ ಸಚಿವರನ್ನು ಕಳುಹಿಸಿ ಪರಿಹಾರ ನೀಡುವ ಪ್ರಕ್ರಿಯೆ ಆರಂಭಿಸಬೇಕು ಎಂದು ಒತ್ತಾಯಿಸಿದರು.
ಬೀದಿಗಿಳಿದು ಹೋರಾಟ: ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಲಕ್ಷ್ಮಣಸ್ವಾಮಿ ಮಾತನಾಡಿ, ಇಂದು ಸಾಂಕೇತಿಕ ಹೋರಾಟ ನಡೆದಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಕ್ಷಣ ಸ್ಪಂದಿಸದಿದ್ದರೆ, ಇಡೀ ರಾಜ್ಯದಲ್ಲಿ ರೈತರು ಬೀದಿಗಿಳಿದು ಹೋರಾಟ ಮಾಡುವುದಾಗಿ ಎಚ್ಚರಿಸಿದರು.
ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ನೀಡಿದ ಮನವಿಯನ್ನು ಅಪರ ಜಿಲ್ಲಾಧಿಕಾರಿ ಬಿ.ಪಿ.ವಿಜಯ್ ಸ್ವೀಕರಿಸಿದರು. ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಬೈರೇಗೌಡ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ದಾಸೇಗೌಡ, ಜಿಲ್ಲಾ ಹಸಿರು ಸೇನೆ ಸಂಚಾಲಕ ಶ್ರೀನಿವಾಸ್ ನಲ್ಲಹಳ್ಳಿ, ರೈತ ಸಂಘದ ಚನ್ನಪಟ್ಟಣ ತಾಲೂಕು ಅಧ್ಯಕ್ಷ ಪಿ.ರಮೇಶ್, ಕನಕಪುರ ತಾಲೂಕು ಅಧ್ಯಕ್ಷ ಅನಂತ್ರಾಮ್ ಪ್ರಸಾದ್, ಜಿಲ್ಲೆಯ ಮಹಿಳಾ ಪದಾಧಿಕಾರಿಗಳಾದ ನಾಗಮ್ಮ, ಸುಕನ್ಯಾ, ಮಾಗಡಿ ತಾಲೂಕು ಅಧ್ಯಕ್ಷ ಗೋವಿಂದರಾಜು, ಪ್ರಮುಖರಾದ ರೇಣುಕಯ್ಯ, ನಂದಿನಿ, ಗಿರೀಶ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ