ನಮ್ಮ ಭವಿಷ್ಯಕ್ಕೆ ಹಸಿರು ಬಳುವಳಿ ಕೊಟ್ಟಿರಿ

ಸಾಲು ಮರದ ನಿಂಗಣ್ಣರ ಕಾರ್ಯಕ್ಕೆವಾಸವಿ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳಿಂದ ಕೃತಜ್ಞತೆ

Team Udayavani, Jun 8, 2019, 11:36 AM IST

ramanagar-tdy-1

ರಾಮನಗರ: ನಗರದ ವಾಸವಿ ವಿದ್ಯಾನಿಕೇತನ ಶಾಲೆಯ ಹಿರಿಯ ಪ್ರಾಥಮಿಕ ತರಗತಿಗಳ ವಿದ್ಯಾರ್ಥಿಗಳು ತಾಲೂಕಿನ ಅರೇಹಳ್ಳಿ ಗ್ರಾಮಕ್ಕೆ ಭೇಟಿ ಕೊಟ್ಟು ಸಾಲು ಮರದ ನಿಂಗಣ್ಣ ಪೋಷಿಸಿದ 950 ಮರಗಳನ್ನು ಪ್ರತ್ಯಕ್ಷ ವೀಕ್ಷಿಸಿ ತಮ್ಮ ಭವಿಷ್ಯಕ್ಕೆ ಹಸಿರು ಬಳುವಳಿ ಕೊಟ್ಟ ನಿಂಗಣ್ಣರನ್ನು ಅಭಿನಂದಿಸಿ ವಿಶ್ವ ಪರಿಸರ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಿದರು.

ನಿಂಗಣ್ಣ ನೆಟ್ಟಿದ್ದ ಮರದ ಸಾಲು ನೋಡಿದ ವಿದ್ಯಾರ್ಥಿಗಳು: ತಾಲೂಕಿನ ಕೂಟಗಲ್‌ ಹೋಬಳಿಯ ಬಿಳಗುಂಬ-ಅರೇಹಳ್ಳಿ ರಸ್ತೆಯ ಎರಡೂ ಬದಿ ಗಳಲ್ಲಿ ಸಸಿ ನೆಟ್ಟು ಮರಗಳನ್ನು ಪೋಷಿಸಿದ್ದಾರೆ. 20 ವರ್ಷಗಳ ಸತತ ಕಾಯಕದಿಂದಾಗಿ ಈ ರಸ್ತೆಯಲ್ಲಿ ಹಸಿರು ನಳನಳಿಸುತ್ತಿದೆ. ಸಂಘ-ಸಂಸ್ಥೆಗಳು ನಿಂಗಣ್ಣರನ್ನು ಸನ್ಮಾನಿಸಿವೆ. ಸಾಲು ಮರದ ತಿಮ್ಮಕ್ಕ ಅವರಂತೆ, ಅರೇಹಳ್ಳಿಯ ನಿಂಗಣ್ಣ ಸಹ ಮರಗಳನ್ನು ಪೋಷಿಸಿರುವುದನ್ನು ಪ್ರತ್ಯಕ್ಷ ಕಾಣಲು ಶಾಲೆಯ ಆಡಳಿತ ಮಂಡಳಿ ನಿಶ್ಚಯಿಸಿ ವಿದ್ಯಾರ್ಥಿಗಳನ್ನು ಪ್ರವಾಸ ಕರೆದೊಯ್ದಿತ್ತು.

ಮರಗಳ ಮಾಹಿತಿ ಪಡೆದ ವಿದ್ಯಾರ್ಥಿಗಳು: ಬಿಳಗುಂಬ-ಅರೇಹಳ್ಳಿ ರಸ್ತೆಯಲ್ಲಿ ಸಾಲು ಮರಗಳನ್ನು ಕಂಡ ವಿದ್ಯಾರ್ಥಿಗಳು ಪುಳಕಿತರಾದರು. ಹಸಿರು ಸಿರಿ ಕಂಡು ಹರ್ಷಗೊಂಡರು. 2019ನೇ ಸಾಲಿನ ವಿಶ್ವ ಪರಿಸರದ ಘೋಷವಾಕ್ಯ “ವಾಯು ಮಾಲಿನ್ಯ”ದವಿಷಯ ಮತ್ತು ವಾಯು ಮಾಲಿನ್ಯ ತಡೆಗಟ್ಟುವ ವಿಚಾರದಲ್ಲಿ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳಿಗೆ ಅಗತ್ಯ ಮಾಹಿತಿ ಕೊಟ್ಟರು.

ನಮ್ಮ ಭವಿಷ್ಯಕ್ಕೆ ಬಳವಳಿ ಕೊಟ್ಟಿರಿ: ಈ ವೇಳೆ ಹಾಜರಿದ್ದ ಸಾಲುಮರದ ನಿಂಗಣ್ಣರನ್ನು ವಿದ್ಯಾರ್ಥಿಗಳು ಪರಿಸರ ಕಾಪಾಡುವ ನಿಟ್ಟನಲ್ಲಿ ಪರಿಶ್ರಮ ವಹಿಸಿದ್ದೀರಿ ಎಂದು ಕೈಮುಗಿದರು. ಸಾಲು ಮರದ ತಿಮ್ಮಕ್ಕ, ನಿಂಗಣ್ಣ ಸೇರಿದಂತೆ ಹಲವರು ಮರಗಳನ್ನು ಪೋಷಿಸಿ ತಮ್ಮ ಭವಿಷ್ಯಕ್ಕೆ ಹಸಿರು ಬಳುವಳಿ ಕೊಟ್ಟಿದ್ದೀರಿ ಎಂದು ಕೃತಜ್ಞತೆ ಅರ್ಪಿಸಿದರು.

ಗಿಡ ಬೆಳೆಸಲು ವಿದ್ಯಾರ್ಥಿಗಳಿಗೆ ಸಲಹೆ: ವಾಸವಿ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳು ಸಲ್ಲಿಸಿದ ಕೃತಜ್ಞತೆಯನ್ನು ವಿನಯಪೂರ್ವಕವಾಗಿ ಸ್ವೀಕರಿಸಿದ ನಿಂಗಣ್ಣ, ಪ್ರತಿಯೊಬ್ಬ ವಿದ್ಯಾರ್ಥಿಯು ಕನಿಷ್ಠ ಒಂದು ಸಸಿ ನೆಟ್ಟು ಪೋಷಿಸಬೇಕು ಎಂದು ಕರೆ ನೀಡಿದರು. ಪ್ರಕೃತಿಯನ್ನು ರಕ್ಷಿಸಿದರೆ, ಪ್ರಕೃತಿ ಜೀವ ಸಂಕುಲವನ್ನು ರಕ್ಷಿಸುತ್ತದೆ. ಎಲ್ಲೆಂದರಲ್ಲಿ ಕಸ ಬೀಸಾಡ ಬೇಡಿ,ವೈಯಕ್ಷಿಕ ಸ್ವಚ್ಚತೆ ಕಾಪಾಡಿ ಎಂದು ತಿಳಿ ಹೇಳಿದರು.

ಶಾಲೆಯ ಕಾರ್ಯದರ್ಶಿ ಪಿ.ವಿ.ಬದರಿನಾಥ್‌ ಸಂಸ್ಥೆಯ ಪರವಾಗಿ ನಿಂಗಣ್ಣ ಅವರಿಗೆ 5 ಸಾವಿರ ರೂ ಆರ್ಥಿಕ ಸಹಾಯ ನೀಡಿದರು. ಮುಖ್ಯ ಶಿಕ್ಷಕಿ ವಿ.ಕೆ. ವಿಜಯಪ್ರಭಾ, ಸಹ ಶಿಕ್ಷಕಿಯರಾದ ಕೆ.ಆರ್‌. ಚಾರುಮತಿ, ಎ.ಎಂ.ಶ್ರೀ ಲಕ್ಷ್ಮಿ, ಪವಿತ್ರ ಹಾಜರಿದ್ದರು.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Getting good response from people in constituency: D.K. Suresh

Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.