ಸರ್ಕಾರಿ ಆಸ್ಪತ್ರೆ ಕಟ್ಟಡ ಕಾಮಗಾರಿ ಕಳಪೆ


Team Udayavani, Jun 18, 2019, 12:39 PM IST

rn-tdy-1..

ಕುದೂರು ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಸರ್ಕಾರಿ ಆಸ್ಪತ್ರೆ.

ಕುದೂರು: ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸುಸಜ್ಜಿತ ಸರ್ಕಾರಿ ಆಸ್ಪತ್ರೆ ಕಟ್ಟಡ ಕಾಮಗಾರಿ ಕಳಪೆಯಿಂದ ಕೂಡಿದೆ. ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಅಸಡ್ಡೆಯೇ ಇದಕ್ಕೆ ಕಾರಣ ಎಂದು ಕುದೂರು ಗ್ರಾಮಸ್ಥರಿಂದ ಆರೋಪ ಕೇಳಿ ಬರುತ್ತಿದೆ.

ಕುದೂರು ಗ್ರಾಮದ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ, ಸಮುದಾಯ ಆರೋಗ್ಯ ಕೇಂದ್ರವನ್ನು ಮಂಜೂರು ಮಾಡಲಾಗಿದೆ. ಆರೋಗ್ಯ ಕೇಂದ್ರದಲ್ಲಿ 30 ಹಾಸಿಗೆಗಳ ಕೊಠಡಿ, ಶಸ್ತ್ರ ಚಿಕಿತ್ಸಾ ಕೊಠಡಿ, ಶವಗಾರ ಎಲ್ಲವೂ ಸುಸಜ್ಜಿತವಾಗಿರಬೇಕು ಎಂದು ಸರ್ಕಾರ 2 ಕೋಟಿ ರೂ. ಹಣ ಬಿಡುಗಡೆ ಮಾಡಿದೆ. ಆದರೆ, ಕಟ್ಟಡಕ್ಕೆ ಬಳಸುತ್ತಿರುವ ಕಂಬಿಗಳು ಕಳಪೆಯಾಗಿದೆ. ಅಲ್ಲದೆ, ನೂತನ ಆಸ್ಪತ್ರೆಯ ಕಟ್ಟಡದ ಕಾಮಗಾರಿಯೂ ಕಳಪೆಯಾಗಿದೆ.

ದೂರು ಸಲ್ಲಿಸಿದ್ದರೂ ಪ್ರಯೋಜನವಿಲ್ಲ: ಈ ಹಿಂದೆ ತಳಪಾಯ ಕಟ್ಟುವಾಗ ಕಳಪೆ ವಸ್ತುಗಳನ್ನು ಬಳಸಲಾಗುತ್ತಿದೆ ಎಂದು ಗ್ರಾಪಂ ಸದಸ್ಯರು ಹಾಗೂ ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದರು. ಆದರೆ, ಆಸ್ಪತ್ರೆ ಕಾಮಗಾರಿ ಮಾಡುವವರು ರಾಜಕೀಯವಾಗಿ ಪ್ರಭಾವಿ ವ್ಯಕ್ತಿಯಗಿರುವುದರಿಂದ ಗ್ರಾಮಸ್ಥರ ಮಾತುಗಳನ್ನು ಗಣನೆಗೆ ತೆಗೆದುಕೊಳ್ಳದೇ ಕಾಮಗಾರಿ ಮುಂದುವರಿ ಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ದೂರು ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಪ್ರಸ್ತುತ ಆಸ್ಪತ್ರೆಯ ಕಟ್ಟಡ ಮೋಲ್ಡ್, ಪ್ಲಾಸ್ಟಿಂಗ್‌ ಆಗಿ ಟೈಲ್ಸ್ ಮತ್ತು ಬಣ್ಣ ಬಳಿಯುವ ಕಾಮಗಾರಿವರೆಗೆ ಬಂದು ನಿಂತಿದೆ.

ಮಳೆ ಬಂದರೆ ನೂತನ ಕಟ್ಟಡದಲ್ಲಿ ಸೋರಿಕೆ: ಸರ್ಕಾರಿ ಆಸ್ಪತ್ರೆಯ ಕಟ್ಟಡ ಶೇ.80ರಷ್ಟು ಕೆಲಸ ಮುಗಿದು ಬಣ್ಣ ಬಳಿಯುವ ಹಂತಕ್ಕೆ ತಲುಪಿದೆ. ಆಸ್ಪತ್ರೆಯ ಕೊಠಡಿಗಳು ಕಳಪೆಯಿಂದ ಈಗಾಗಲೇ ಸೋರಲಾರಂಭಿಸಿವೆ ಎಂದು ಗ್ರಾಮದ ಯುವಕರು ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಅಧಿಕಾರಿಗಳ ಜತೆ ಪ್ರತಿನಿಧಿಗಳು ಶಾಮೀಲಾಗಿದ್ದಾರೆಯೇ?: ಕಳಪೆ ಕಾಮಗಾರಿ ಎಂದು ವರ್ಷದ ಮುಂಚೆಯ ಸುದ್ದಿ ಪ್ರಕಟವಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಸ್ಥಳೀಯರು ಶಾಸಕರಿಗೆ ಹಾಗೂ ಸಂಸದರಿಗೆ ಮನವಿ ಸಲ್ಲಿಸಿದ್ದರು. ಆದರೆ, ಇದುವರೆವಿಗೂ ಶಾಸಕ ಮಂಜುನಾಥ್‌ ಆಗಲಿ, ಸಂಸದ ಡಿ.ಕೆ.ಸುರೇಶ್‌ ಆಗಲಿ ಸ್ಥಳಕ್ಕೆ ಭೇಟಿ ನೀಡಿ, ಕಾಮಗಾರಿಯನ್ನು ಪರಿಶೀಲನೆ ಮಾಡಿಲ್ಲ. ಕಳಪೆ ಕಮಗಾರಿ ಮಾಡುವ ಗುತ್ತಿಗೆದಾರರನ್ನು ಗದರಿಕೊಳ್ಳುವ ಕೆಲಸವನ್ನು ಸಹ ಮಾಡಿಲ್ಲ. ಇನ್ನೂ ಹೆಸರಿಗಷ್ಟೇ ಇರುವಂತಿರುವ ಗ್ರಾಮ ಪಂಚಾಯ್ತಿ ಮತ್ತು ತಾಲೂಕು ಹಾಗೂ ಜಿಪಂ ಸದಸ್ಯರು ಕಳಪೆ ಕಾಮಗಾರಿಯನ್ನು ಖಂಡಿಸಿಲ್ಲ. ಇದೆಲ್ಲವನ್ನು ನೋಡಿದರೆ ಅಧಿಕಾರಿಗಳ ಜೊತೆಗೆ ಜನಪ್ರತಿನಿಧಿಗಳು ಶಾಮೀಲಾಗಿದ್ದಾರೆಯೇ ಎಂಬ ಅನುಮಾನ ಮೂಡಿಸಿದೆ.

ಆಗೊಮ್ಮೆ ಇಗೊಮ್ಮೆ ಬರುವ ಎಂಜಿನಿಯರ್‌ ಕಾಟಾಚಾರಕ್ಕೆ ಬಂದು ಹೋದಂತೆ ಕಾಣುತ್ತಿದೆ. ಸಾವಿರಾರು ವರ್ಷಗಳ ಕಾಲ ಗ್ರಾಮದ ಜನರಿಗೆ ಅನುಕೂಲ ಕಲ್ಪಿಸುವ ಆಸ್ಪತ್ರೆ ಗುಣಮಟ್ಟವಾಗಿರುವಂತೆ ನೋಡಿಕೊಳ್ಳುವುದು ಪ್ರತಿ ಗ್ರಾಮಸ್ಥರ ಕರ್ತವ್ಯವಾಗಿದೆ. ಈ ಬಗ್ಗೆ ಜನರು ಧಂಗೆ ಏಳುವ ಮೊದಲು ಸರಿಯಾದ ಕಾಮಗಾರಿ ನೆಡೆಸಿ ಎಂದು ಎಚ್ಚರಿಕೆ ನೀಡಿದ್ದಾರೆ.

ಕಳಪೆ ಕಾಮಗಾರಿ ವಿಡಿಯೋ ವೈರಲ್: ಕುದೂರು ಆಸ್ಪತ್ರೆಯ ಕಳಪೆ ಕಾಮಗಾರಿ ಕೇವಲ ಜನರ ಬಾಯಲ್ಲಿ ಹರಿದಾಡುತ್ತಿಲ್ಲ. ಬದಲಾಗಿ ಸಾಮಾಜಿಕ ಜಾಲತಾಣಗಳಲ್ಲಿಯೂ ವೈರಲ್ ಆಗಿದೆ. ವಾಟ್ಸಾಪ್‌ ಹಾಗೂ ಫೇಸ್‌ಬುಕ್‌ನಲ್ಲಿ ಯುವಕರ ಕೆಂಗಣ್ಣಿಗೆ ಗುರಿಯಾಗಿದೆ. ಈ ಬಗ್ಗೆ ಅನೇಕರು ಆಸ್ಪತ್ರೆ ಕಳಪೆ ಕಾಮಗಾರಿಯನ್ನು ಕುರಿತು ತೀವ್ರ ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಅದಷ್ಟು ಬೇಗ ಗುಣಮಟ್ಟವನ್ನು ಉತ್ತಮ ಪಡಿಸಿ, ಗುಣಮಟ್ಟದ ಕಾಮಗಾರಿಯನ್ನು ನಡೆಸುವಂತೆ ಆಗ್ರಹಿಸಿದ್ದಾರೆ. ಅಲ್ಲದೆ, ಅಧಿಕಾರಿಗಳು ಮತ್ತು ಎಂಜಿನಿಯರುಗಳ ಕಾರ್ಯವೈಖರಿ ಬಗ್ಗೆ ಪ್ರಶ್ನಿಸಿದ್ದಾರೆ.

● ಕೆ.ಎಸ್‌.ಮಂಜುನಾಥ್‌

ಟಾಪ್ ನ್ಯೂಸ್

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.