ಮುಂದುವರಿದ ಮುಷ್ಕರ: ರಸ್ತೆಗಿಳಿದ 9 ಸರ್ಕಾರಿ ಬಸ್‌


Team Udayavani, Apr 10, 2021, 12:13 PM IST

ಮುಂದುವರಿದ ಮುಷ್ಕರ: ರಸ್ತೆಗಿಳಿದ 9 ಸರ್ಕಾರಿ ಬಸ್‌

ರಾಮನಗರ: ಕೆ.ಎಸ್‌.ಆರ್‌.ಟಿ.ಸಿ. ನೌಕರರ ಮುಷ್ಕರ ಶುಕ್ರವಾರ 3ನೇ ದಿನಕ್ಕೆ ಕಾಲಿಟ್ಟಿದ್ದು,ಖಾಸಗಿ ಬಸ್‌, ಕ್ಯಾಬ್‌ಗಳ ಜೊತೆಗೆ ಜಿಲ್ಲೆಯಲ್ಲಿ 9 ಸರ್ಕಾರಿ ಬಸ್‌ಗಳು ಸಾರ್ವಜನಿಕರ ಸೇವೆಯಲ್ಲಿ ತೊಡಗಿಸಿ ಕೊಂಡಿದ್ದವು.

ಶುಕ್ರವಾರ ರಾಮನಗರ ವಿಭಾಗದಿಂದ ಒಟ್ಟು 9 ಸಾರಿಗೆ ಬಸ್‌ಗಳು 18 ಮಂದಿ ಸಿಬ್ಬಂ ದಿಯಿಂದ ಸಂಚಾರ ನಡೆಸಿದವು. ರಾಮನಗರ ಡಿಪೋದಿಂದ 5, ಆನೇಕಲ್‌ ಡಿಪೋದಿಂದ 2 ಹಾಗೂ ಹಾರೋಹಳ್ಳಿ, ಚನ್ನಪಟ್ಟಣ ಡಿಪೋಗಳಿಂದ ತಲಾ 1 ಬಸ್‌ ಸಂಚಾರ ನಡೆಸಿದವು.ಶುಕ್ರವಾರ ರಸ್ತೆಗಳಿದ ಸಾರಿಗೆ ಬಸ್‌ಗಳಲ್ಲಿ ನಿರ್ವಾಹಕರು, ಚಾಲಕರಾಗಿ ಸಂಸ್ಥೆಯಲ್ಲಿ ಸೆಕ್ಯೂರಿಟಿ ಗಾರ್ಡ್‌, ಸಂಚಾರ ನಿಯಂತ್ರಕರು,ಜೀಪ್‌ ಚಾಲಕರು ಸೇರಿದಂತೆ ಕಚೇರಿಯಲ್ಲಿ ಬೇರೆ ಬೇರೆ ಹುದ್ದೆಗಳನ್ನು ನಿಭಾಯಿಸುತ್ತಿದ್ದವರು ಸಾರ್ವಜನಿಕರ ಸೇವೆಯಲ್ಲಿ ತೊಡಗಿಸಿಕೊಂಡರು.

ರಾಮನಗರ ಬಸ್‌ ನಿಲ್ದಾಣದಿಂದ ಚನ್ನಪಟ್ಟಣ, ಮಾಗಡಿ, ಕನಕಪುರ, ಬಿಡದಿ ಹಾಗೂಆನೇಕಲ್‌ ಬಸ್‌ ನಿಲ್ದಾಣದಿಂದ ಹೊಸೂರುಮಾರ್ಗದಲ್ಲಿ ಬಸ್‌ಗಳು ಸಂಚರಿಸಿದವು. ಈ ಬಸ್‌ಗಳಲ್ಲಿ ಪ್ರಯಾಣಿಕರು ಸಂಖ್ಯೆ ವಿರಳವಾಗಿತ್ತು ಎಂದು ಗೊತ್ತಾಗಿದೆ.

ಗ್ರಾಮೀಣ ಭಾಗದ ಪ್ರಯಾಣಿಕರ ಪರದಾಟ: ಜಿಲ್ಲೆಯ ಗ್ರಾಮೀಣ ಭಾಗಗಳಸಾರ್ವಜನಿಕರು ಕೆ.ಎಸ್‌.ಆರ್‌.ಟಿ.ಸಿ ಬಸ್‌ಗಳನ್ನೇ ನೆಚ್ಚಿಕೊಂಡಿದ್ದಾರೆ. ಆದರೆ ಸಾರಿಗೆನೌಕರರ ಮುಷ್ಕರ ಕಾರಣ ಬಸ್‌ ಸಂಚಾರ ಸ್ಥಗಿತಗೊಂಡಿದೆ. ಗ್ರಾಮೀಣ ಭಾಗಗಳಲ್ಲಿ ಸಂಚಾರ ನಡೆಸುತ್ತಿದ್ದ ಖಾಸಗಿ ಬಸ್‌ಗಳು ಗ್ರಾಮೀಣ ಭಾಗಗಳಿಗಿಂತ ತಾಲೂಕು ಕೇಂದ್ರಗಳು ಮತ್ತು ಬೆಂಗಳೂರು, ಮಂಡ್ಯ ಮುಂತಾದನಗರಗಳ ಕಡೆ ಮುಖಮಾಡಿವೆ. ಹೀಗಾಗಿಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಸಾರಿಗೆ ವ್ಯವಸ್ಥೆ ಇಲ್ಲದೆ ಜನ ಪರದಾಡುತ್ತಿದ್ದಾರೆ.

ಖಾಸಗಿ ಬಸ್‌ಗಳು, ಕ್ಯಾಬ್‌ಗಳು ಲಭ್ಯವಿದ್ದರೂ, ಪ್ರಯಾಣಿಕರು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಖಾಸಗಿ ಬಸ್‌ಗಳಲ್ಲಿಜನ ತುಂಬುವವರೆಗೂ ನಿಲ್ದಾಣ ಬಡುತ್ತಿಲ್ಲ.ಹೀಗಾಗಿ ತಾವು ನಿಗದಿತ ಸ್ಥಳಗಳಿಗೆ ಹೋಗುವುದು ತಡವಾಗುತ್ತಿದೆ. ಬಸ್‌ ನಿಲ್ದಾಣದಲ್ಲಿದ್ದಾಗ ಒಂದು ದರ ಹೇಳುವ ಸಿಬ್ಬಂದಿ, ಬಸ್‌ಹೊರಟ ನಂತರ ಮತ್ತೂಂದು ದರ ವಿಧಿಸುವ ದೂರು ಕೇಳಿ ಬಂದಿವೆ.

ಎರಡನೇ ಶನಿವಾರ ಸರ್ಕಾರಿ ರಜಾ ದಿನತದನಂತರ ಭಾನುವಾರ ನಂತರ ಯುಗಾದಿಹಬ್ಬ ಹೀಗೆ ಸಾಲು ರಜೆ ಇರುವುದರಿಂದಶುಕ್ರವಾರ ಸಂಜೆ ಪ್ರಯಾಣಿಕರ ಸಂಖ್ಯೆಯಲ್ಲಿಹೆಚ್ಚಳವಾಗಿತ್ತು. ಬೆಂಗಳೂರಿನಿಂದ ಬರುತ್ತಿದ್ದಬಸ್‌, ಕ್ಯಾಬ್‌ಗಳು ಪ್ರಯಾಣಿಕರಿಂದ ತುಂಬಿದ್ದು ಕಂಡು ಬಂತು.

ಟಾಪ್ ನ್ಯೂಸ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.