ಜಿಲ್ಲೆಯಲ್ಲಿ ಅಂತರ್ಜಲ ಬಳಕೆ ಹೆಚ್ಚು

ಬೋರ್‌ವೆಲ್‌ ಕೊರೆಯಲು ಅನುಮತಿ ಕಡ್ಡಾಯ

Team Udayavani, Oct 24, 2020, 2:35 PM IST

rn-tdy-1

ರಾಮನಗರ: ಜಿಲ್ಲೆಯ ರಾಮನಗರ ಮತ್ತು ಕನಕಪುರ ತಾಲೂಕುಗಳಲ್ಲಿ ಅಂತರ್ಜಲ ಬಳಕೆ ಅತಿ ಹೆಚ್ಚು ಎಂದು ಅಂತರ್ಜಲ ನಿರ್ದೇಶನಾಲಯ ತಿಳಿಸಿದ್ದು, ಈ ತಾಲೂಕುಗಳಲ್ಲಿ ಕೊಳವೆ ಬಾವಿ ಕೊರೆಸುವುದಕ್ಕೆ ಅನು ಮತಿ ಕಡ್ಡಾಯ ಎಂದು ಮತ್ತೂಮ್ಮೆ ಹೇಳಿದೆ.

ಜಿಲ್ಲೆಯ ಮಾಗಡಿ ಮತ್ತು ಚನ್ನಪಟ್ಟಣ ತಾಲೂಕುಗಳಲ್ಲಿ ಅಂತರ್ಜಲ ಬಳಕೆ ಆಪತ್ತಿನಅಂಚಿನಲ್ಲಿದೆ ಎಂದು ಕೇಂದ್ರ ಅಂತರ್ಜಲ ಮಂಡಳಿಯ ವರದಿ ತಿಳಿಸಿದೆ. ವರದಿಯ ಪ್ರಕಾರ ಎರಡೂ ತಾಲೂಕುಗಳಲ್ಲಿ ನಿಗದಿಗಿಂತ ಹೆಚ್ಚು ಅಂದರೆ ಶೇ.100ಕ್ಕೂ ಹೆಚ್ಚು ಅಂತರ್ಜಲವನ್ನು ಈ ಎರಡೂ ತಾಲೂಕುಗಳಲಿ ಕೊಳವೆ ಬಾವಿಗಳಿಂದ ಹೀರಿಕೊಳ್ಳಲಾಗುತ್ತಿದೆ. ಹೀಗಾಗಿ ಅಂತರ್ಜಲವನ್ನು ಕಾಪಾಡಿಕೊಳ್ಳಲು ಅನುಮತಿ ಕಡ್ಡಾಯಗೊಳಿಸಲಾಗುತ್ತದೆ. ಹಾಗೊಮ್ಮೆ ನಿಯಮಗಳನ್ನು ಉಲ್ಲಂಘಿಸಿದರೆ, ಕಾನೂನು ಪ್ರಕಾರ ದಂಡ ಕಟ್ಟುವುದು ಸೇರಿದಂತೆ ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

ಅಂತರ್ಜಲ ಮೌಲೀಕರಣ ಸಮಿತಿ 1997ರ ಮಾರ್ಗಸೂಚಿಯಂತೆ ಹಾಗೂ ಕೇಂದ್ರ ಜಲ ಸಂಪನ್ಮೂಲ ಮಂತ್ರಾಲಯದ ಸೂಚನೆಯಂತೆ ಅಂತರ್ಜಲ ಪ್ರಮಾಣದ ಮೌಲೀಕರಣ ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ನಡೆಯುತ್ತದೆ.

ಜಿಲ್ಲಾಡಳಿತಕ್ಕೆ ಚಾಟಿ!: 2017ರ ಅಂತ್ಯಕ್ಕೆ ಮೌಲೀಕರಿಸಿದ ವರದಿ ಅನ್ವಯ ಜಿಲ್ಲೆಯಲ್ಲಿ ರಾಮನಗರ ಮತ್ತು ಕನಕಪುರ ಅಂತರ್ಜಲಅತಿ ಬಳಕೆ ಎಂದು ಘೋಷಣೆ ಮಾಡಲಾಗಿದೆ. ಮಾಗಡಿ ತಾಲೂಕಿನಲ್ಲಿ ಗಂಭೀರ ಸ್ಥಿತಿ ಮತ್ತು ಚನ್ನಪಟ್ಟಣದಲ್ಲಿ ಅರೆ ಗಂಭೀರ ಸ್ಥಿತಿ ಇರುವುದಾಗಿ ವರದಿ ತಿಳಿಸಿದೆ. ರಾಮನಗರ ಜಿಲ್ಲೆಯಲ್ಲಿ ನೀರು ಮರು ಪೂರಣಕ್ಕಿಂತ, ಬಳಕೆಯ ಪ್ರಮಾಣವೇ ಹೆಚ್ಚಾಗಿದೆ ಎಂದು ಜಿಲ್ಲಾಡಳಿತಕ್ಕೆ ಚಾಟಿ ಬೀಸಿದೆ.

ಈ ಎರಡು ತಾಲೂಕುಗಳಲ್ಲಿ ಅಂತರ್ಜಲ ಬಳಕೆಯು ವಾರ್ಷಿಕ ಮರು ಪೂರಣ ಪ್ರಮಾಣದ ಶೇ.100ಕ್ಕಿಂತ ಹೆಚ್ಚು ಬಳಕೆ ಮಾಡಲಾಗುತ್ತಿದೆ. ಮಾಗಡಿತಾಲೂಕಿನಲ್ಲಿ ಅಂತರ್ಜಲ ಮಟ್ಟ ಕ್ಲಿಷ್ಟಕರ ಪರಿಸ್ಥಿತಿಯಲ್ಲಿದ್ದು, ಅಂತರ್ಜಲ ಬಳಕೆ ಶೇ.90, ಚನ್ನಪಟ್ಟಣದಲ್ಲಿ ಅರೇ ಕ್ಲಿಷ್ಟಕರ ಅಂದರೆ ಶೇ. 90ಕ್ಕಿಂತ ಕಡಿಮೆ ಇದೆ.

ಕೊಳವೆ ಬಾವಿಗೆ ಅನುಮತಿ: ಅ.5 ರಿಂದ ಅಕ್ರಮ ಸಕ್ರಮ ಚಾಲ್ತಿಯಲ್ಲಿದ್ದು, ಅನುಮತಿ ಪಡೆಯದೆ ಕೊಳವೆ ಬಾವಿಗಳನ್ನು ಕೊರೆದಿದ್ದಲ್ಲಿ, ಅಕ್ರಮ-ಸಕ್ರಮ ಅವಕಾಶದಲ್ಲಿ ಪಡೆಯಲು ಸಾಧ್ಯವಿದ್ದು, 120 ದಿನಗಳ ಅವಕಾಶವಿದೆ. ನಂತರ ಅನುಮತಿ ಪಡೆಯಲು 5 ಸಾವಿರ ರೂ. ದಂಡ ಪಾವತಿಸಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿಯಮಗಳು ಪಾಲನೆಯಾಗುತ್ತಿದೆಯೇ?: ಕರ್ನಾಟಕ ಅಂತರ್ಜಲ 2004ರ ಅಧಿನಿಯಮದ ಪ್ರಕಾರ ಸಾರ್ವಜನಿಕ ಕುಡಿಯುವ ನೀರಿನ ಮೂಲಗಳಿಂದ 500 ಮೀಟರ್‌ ಅಂತರದೊಳಗೆ ಬಾವಿ, ಕೊಳವೆಬಾವಿ ಕೊರೆಯಲು ಅವಕಾಶವಿಲ್ಲ.ಎಂಬ ನಿಯಮಗಳು ಜಿಲ್ಲೆಯಲ್ಲಿ ಪಾಲಿಸಲಾಗುತ್ತಿದೆ ಎಂಬ ಬಗ್ಗೆ ಅಧಿಕಾರಿಗಳು ಸ್ಪಷ್ಟ ಮಾಹಿತಿಯನ್ನು ಬಹಿರಂಗ ಪಡೆಸಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ.

ಅಂತರ್ಜಲ ಮೌಲೀಕರಣ ವರದಿ ಬಿಡುಗಡೆಯಾಗಿದೆ. ಅಂತರ್ಜಲ ನಿರ್ವಹಣೆಯ ನಿಯಮಗಳ ಪ್ರಕಾರ ಕೊಳವೆ ಬಾವಿಗಳನ್ನು ಕೊರೆಸಲು ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಅನುಮತಿ ಪಡೆಯದೆ ಕೊಳವೆಬಾವಿ ಕೊರೆಸಿದ್ದಲ್ಲಿ, ಮನೆ ಬಳಕೆಗೆ50 ರೂ, ವಾಣಿಜ್ಯ ಬಳಕೆಗೆ 500ಪಾವತಿಸಿ ಅಕ್ರಮ ಸಕ್ರಮದಡಿ ಅನುಮತಿ ಪಡೆಯಬಹುದು -ಎಸ್‌.ಆರ್‌.ರಾಜಶ್ರಿ, ಹಿರಿಯ ಭೂ ವಿಜ್ಞಾನಿ, ಜಿಲ್ಲಾ ಅಂತರ್ಜಲ ನಿರ್ದೇಶನಾಲಯ

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.