ಆರ್ಥಿಕ ಅಭಿವೃದ್ಧಿಗಾಗಿ ಬಿದಿರು ಮೆಳೆ ಬೆಳೆಯಿರಿ
Team Udayavani, Sep 23, 2019, 3:50 PM IST
ಮಾಗಡಿ: ಗ್ರಾಮೀಣ ಜನರ ಆರ್ಥಿಕ ಅಭಿವೃದ್ಧಿಗೆ ಬಿದಿರು ಮೆಳೆ ಬೆಳೆಯುವುದು ಅವಶ್ಯವಿದೆ ಎಂದು ಕೃಷಿಕ ಸಮಾಜದನವದೆಹಲಿ ಪ್ರತಿನಿಧಿ ಬೆಳಗವಾಡಿ ಸತೀಶ್ ಸಲಹೆ ನೀಡಿದರು.
ಬೆಂಗಳೂರಿನ ಲಾಲ್ಬಾಗ್ನಲ್ಲಿ ಭಾರತೀಯ ಗಂಧ ಮತ್ತು ಬಿದಿರು ಸೊಸೈಟಿ ಏರ್ಪಡಿಸಿದ್ದ ವಿಶ್ವ ಬಿದಿರು ದಿನಾಚರಣೆ ಪ್ರಯುಕ್ತ ಬಿದಿರು ಉತ್ಪನ್ನಗಳ ಬಿಡುಗಡೆ ಮಾಡಿ ಮಾತನಾಡಿದ ಅವರು, ಬಿದಿರಿನಿಂದ ಕಲಾ ಕೌಶಲ್ಯಗಳನ್ನೇ ಧರೆಗಿಳಿಸುವಂತ ಶಕ್ತಿ ಹೊಂದಿದೆ. ಬಿದಿರಿನಿಂದ ಆಟೋಟ ವಸ್ತುಗಳನ್ನು ಪೂಜಾ ಸಾಮಗ್ರಿ, ಬುಟ್ಟಿ, ಬ್ಯಾಗ್, ಕುರ್ಚಿ, ಮನೆಯಲ್ಲಿಡುವ ಅಲಂಕಾರಿಕ ವಸ್ತುಗಳನ್ನು ತಯಾರಿಸ ಬಹುದು ಎಂದರು.
ಕೇಂದ್ರದಿಂದ ಸಾಲ ಸೌಲಭ್ಯ: ಬಿದಿರು ಮೆಳೆ ಬೆಳೆಯಲು, ಉತ್ಪನ್ನಗಳ ತಯಾರಿಕೆಗೆ ಕೇಂದ್ರ ಸರ್ಕಾರ ಸಹಾಯ ಧನದಲ್ಲಿ ಸಾಲ ಸೌಲಭ್ಯಗಳನ್ನು ನೀಡುತ್ತದೆ. ಗ್ರಾಮೀಣ ಜನತೆ ಯೋಜನೆಯ ಸಹಾಯಧನವನ್ನು ಪಡೆದು ಅರಣ್ಯ ಇಲಾಖೆ ಉಚಿತವಾಗಿ ನೀಡುವ ಬಿದಿರು ಮೆಳೆ ಬೆಳಸಿ, ಆರ್ಥಿಕ ಅಭಿವೃದ್ಧಿಯಾಗಬೇಕು ಎಂದು ಹೇಳಿದರು. ಈ ವೇಳೆ ಬಿದಿರು ಸೊಸೈಟಿ ಅಧ್ಯಕ್ಷ ಸುಂದರ್ ನಾಯಕ್, ನರಸಿಂಹಯ್ಯ, ಶಾಂತಕುಮಾರ್, ಮರಿಮಲ್ಲಪ್ಪ ಮತ್ತು ರೈತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್ಡಿಕೆ ಸ್ಪರ್ಧೆ ಸುಳಿವು
Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ ಕಬ್ಬಿಣದ ಕಡಲೆ
Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್ ವಾಗ್ಧಾಳಿ
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA