ರೇಷ್ಮೆ ಹಣಕ್ಕಾಗಿ ಬೆಳೆಗಾರರ ಪ್ರತಿಭಟನೆ


Team Udayavani, Sep 18, 2019, 1:52 PM IST

rn-tdy-2

ರಾಮನಗರ ರೇಷ್ಮೆ ಗೂಡು ಮಾರುಕಟ್ಟೆಯಲ್ಲಿ ಪ್ರತಿಭಟನೆ ನಡೆಸಿದ ಬೆಳೆಗಾರರು ರೇಷ್ಮೆ ಹರಾಜು ಮೊತ್ತವನ್ನು ತಮ್ಮ ಬ್ಯಾಂಕ್‌ ಖಾತೆಗೆ ಜಮೆ ಮಾಡಲು ಒತ್ತಾಯಿಸಿದರು.

ರಾಮನಗರ: ರೇಷ್ಮೆ ಗೂಡು ಹರಾಜಾಗಿ 15 ದಿನಗಳು ಕಳೆದಿದೆ. ಆದರೂ ತಮ್ಮ ಖಾತೆಗೆ ಹಣ ಜಮೆ ಆಗಿಲ್ಲ ಎಂದು ಆರೋಪಿಸಿ ಸ್ಥಳೀಯ ರೇಷ್ಮೆ ಗೂಡು ಮಾರುಕಟ್ಟೆಯಲ್ಲಿ ರೇಷ್ಮೆ ಬೆಳೆಗಾರರು ಪ್ರತಿಭಟನೆ ನಡೆಸಿದರು.

ಈ ವೇಳೆ ಕರ್ನಾಟ ರೈತ ಸಂಘದ ಅಧ್ಯಕ್ಷ ತುಂಬೇನಹಳ್ಳಿ ಶಿವಕುಮಾರ್‌ ಮಾತನಾಡಿ, ರೇಷ್ಮೆ ಗೂಡು ಹರಾಜು ಆದ ನಂತರ ಗೂಡು ಬೆಳೆಗಾರರ ಬ್ಯಾಂಕ್‌ ಖಾತೆಗೆ ಹಣ ಜಮೆ ಮಾಡುವ ಹೊಣೆ ಗೂಡು ಮಾರುಕಟ್ಟೆಯ ಉಪನಿರ್ದೇಶಕರದ್ದಾಗಿದೆ. ಆದರೆ, ಎರಡು ವಾರ ಕಳೆದರೂ ಬೆಳೆಗಾರರ ಖಾತೆಗೆ ಹಣ ವರ್ಗಾವಣೆ ಆಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆನ್‌ಲೈನ್‌ ವ್ಯವಸ್ಥೆ ಕುಂಠಿತ: ಆನ್‌ಲೈನ್‌ ಮೂಲಕ ಹಣ ವರ್ಗಾವಣೆ ಪ್ರಕ್ರಿಯೆಗೂ ಮುನ್ನ ಗೂಡು ಖರೀದಿದಾರರು ನಗದು, ಚೆಕ್‌ ಮೂಲಕ ಹರಾಜು ಮೊತ್ತವನ್ನು ಪಾವತಿಸುತ್ತಿದ್ದರು. ಚೆಕ್‌ಗಳು ಬೌನ್ಸ್‌ ಆಗುತ್ತಿತ್ತು. ನಗದು ಕೊಡಲು ತಡವಾಗುತ್ತಿತ್ತು. ದೂರದಿಂದ ಬಂದ ರೈತರಿಗೆ ಇದರಿಂದ ಅತೀವ ತೊಂದರೆಯಾಗುತ್ತಿತ್ತು. ಹೀಗಾಗಿ ಸರ್ಕಾರ ಆನ್‌ಲೈನ್‌ ಮೂಲಕ ಬೆಳೆಗಾರರ ಖಾತೆಗೆ ಹರಾಜು ಮೊತ್ತವನ್ನು ತುಂಬುವ ವ್ಯವಸ್ಥೆ ಜಾರಿ ಮಾಡಿದೆ. ನೂತನ ವ್ಯವಸ್ಥೆಯಲ್ಲಿ 48 ಗಂಟೆಗಳಲ್ಲಿ ಹಣ ಪಾವತಿಯಾಗುತ್ತಿತ್ತು. ಆದರೆ, ವ್ಯವಸ್ಥೆ ಮತ್ತೆ ಕುಂಠಿತವಾಗಿದೆ. ಬೆಳೆಗಾರರು ಮತ್ತೆ ಮೋಸ ಹೋಗುತ್ತಿದ್ದಾರೆ. 15 ದಿನಗಳಾದರು ಬೆಳೆಗಾರರ ಬ್ಯಾಂಕ್‌ ಖಾತೆಗೆ ಹಣ ಜಮೆಯಾಗುತ್ತಿಲ್ಲ. ಇದಕ್ಕೆ ಗೂಡು ಮಾರುಕಟ್ಟೆಯ ಉಪನಿರ್ದೆಶಕರೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಮನಗರ ಮಾರುಕಟ್ಟೆಯಲ್ಲಿ ಹೆಚ್ಚು ವಹಿವಾಟು: ರಾಮನಗರ ರೇಷ್ಮೆ ಗೂಡು ಮಾರುಕಟ್ಟೆಯಲ್ಲಿ ಅತಿ ಹೆಚ್ಚು ವಹಿವಾಟು ಆಗುವ ಮಾರುಕಟ್ಟೆ. ಮಹಾರಾಷ್ಟ್ರ, ಆಂಧ್ರ ಪ್ರದೇಶ ರಾಜ್ಯಗಳಿಂದ, ಕರ್ನಾಟಕದ ಹಾವೇರಿ, ಬೆಳಗಾವಿ, ದಾವಣಗೆರೆ, ಬಳ್ಳಾರಿ, ಗದಗ, ಮಂಡ್ಯ ಜಿಲ್ಲೆ ಸೇರಿ ವಿವಿಧ ಜಿಲ್ಲೆಗಗಳಿಂದ ರೇಷ್ಮೆ ಬೆಳೆಗಾರರು ತಮ್ಮ ಗೂಡನ್ನು ಇಲ್ಲಿ ತಂದು ಮಾರುತ್ತಾರೆ. ಮಾರಾಟವಾದ ಕೂಡಲೇ ಹಣ ಜಮೆ ಮಾಡುವ ಉದ್ದೇಶ ಈಡೇರುತ್ತಿಲ್ಲ. ಬೆವರು ಸುರಿಸಿ ಬೆಳೆದ ಗೂಡು ಮಾರಿ ವಾರಗಟ್ಟಲೆ ಕಾದರು ಬೆಳೆಗಾರರಿಗೆ ಹಣ ಸಿಗುತ್ತಿಲ್ಲ ಎಂದು ದೂರಿದರು.

ತೂಕದಲ್ಲೂ ಮೋಸ: ಹರಾಜಾದ ಗೂಡಿಗೆ ಹಣಕ್ಕಾಗಿ ಕಾಯುವುದು ಒಂದೆಡೆಯಾದರೆ, ಮಾರುಕಟ್ಟೆಯಲ್ಲಿ ಗೂಡು ತೂಕ ಮಾಡುವುದರಲ್ಲೂ ಬೆಳೆಗಾರ ಮೋಸ ಹೋಗುತ್ತಿದ್ದಾನೆ ಎಂದು ತುಂಬೇನಹಳ್ಳಿ ಶಿವಕುಮಾರ್‌ ದೂರಿದರು.

ಸ್ಯಂಪಲ್ ನೋಡುವ ನೆಪದಲ್ಲಿ ಕೆಲವು ರೀಲರ್‌ಗಳು ಅರ್ಧ ಕೇಜಿಗೂ ಹೆಚ್ಚು ಪ್ರಮಾಣದ ಗೂಡು ಲಪಟಾಯಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

48 ಗಂಟೆಯೊಳಗೆ ಹಣ ವರ್ಗಾವಣೆಯಾಗಲಿ: ರೇಷ್ಮೆ ಗೂಡು ನೀಡಿದ ರೈತರಿಗೆ 48 ಗಂಟೆ ಒಳಗಾಗಿ ಹಣ ಬ್ಯಾಂಕ್‌ ಖಾತೆಗೆ ವರ್ಗಾವಣೆಯಾಗಬೇಕು. ಸರಿಯಾದ ತೂಕ ಮಾಡಬೇಕು, ಗುಣಮಟ್ಟದ ಆಧಾರದಲ್ಲಿ ಗೂಡುಗಳಿಗೆ ಸರಿಯಾದ ಬೆಲೆ ನೀಡಬೇಕು ಎಂದ ಒತ್ತಾಯಿಸಿದ ಅವರು, ಮಾರುಕಟ್ಟೆಯಲ್ಲಿ ಅವ್ಯವಸ್ಥೆಗೆ ಕಾರಣವಾಗಿರುವ ಉಪನಿರ್ದೇಶಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಘಟಕದ ಅಧ್ಯಕ್ಷ ಎಂ.ಆರ್‌.ಶಿವಕುಮಾರ್‌, ರೇಷ್ಮೆ ಬೆಳೆಗಾರರಾದ ಎಸ್‌.ಎನ್‌.ದೇವರಾಜು, ಸಿ.ಎಂ.ಕೃಷ್ಣ, ಚಿಕ್ಕರಾಜು, ದೇವರ ಕಗ್ಗಲಹಳ್ಳಿಯ ವೆಂಕಟಮ್ಮ, ದಾವಣಗೆರೆ ಜಿಲ್ಲೆಯ ಹನುಮಂತಪ್ಪ, ನಾಗರಾಜು ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.