ಆಲಿಕಲ್ಲು ಮಳೆಗೆ ಬೂದುಗುಂಬಳ ನಾಶ
, Apr 21, 2019, 8:56 PM IST
ಕೆ.ಆರ್.ಪೇಟೆ: ತಾಲೂಕಿನ ಹರಿಹರಪುರ ಗ್ರಾಮದಲ್ಲಿ ಸುರಿದ ಆಲಿಕಲ್ಲು ಸಹಿತ ಮಳೆಯಿಂದಾಗಿ ಕೊಯ್ಲಿಗೆ ಬಂದಿದ್ದ ಬೂದುಗುಂಬಳ
ಸಂಪೂರ್ಣ ಹಾಳಾಗಿ ರೈತರನಿಗೆ ಲಕ್ಷಾಂತರ ರೂಪಾಯಿ ನಷ್ಟ
ಸಂಭವಿಸಿದೆ. ಹರಿಹರಪುರ ಗ್ರಾಮದ ರೈತ ಸ್ವಾಮಿ ಅವರಿಗೆ ಸೇರಿದ ಜಮೀನಿನಲ್ಲಿ ಬೆಳೆದಿದ್ದ ಬೂದುಗುಂಬಳ ಬೆಳೆ ಇನ್ನೇನು ಒಂದೆರಡು ದಿನಗಳಲ್ಲಿ ಬೆಳೆ ಕೊಯ್ಲು ಮಾಡಿ ಮಾರಾಟಕ್ಕೆ ಸಿದ್ಧತೆ ಮಾಡಿಕೊಳ್ಳಬೇಕಿತ್ತು. ಅಷ್ಟರಲ್ಲಿ ಆಲಿಕಲ್ಲು
ಮಳೆ ಸುರಿದು ಕುಂಬಳಕಾಯಿಗೆ
ಹಾನಿಯಾಗಿ ಗದ್ದೆಗಳಲ್ಲಿಯೆ
ಕೊಳೆಯಲು ಆರಂಭಿಸಿದೆ.
ಸ್ವಾಮಿ ಎರಡು ಎಕರೆ ಜಮೀನಿನಲ್ಲಿ
ಬೂದುಗುಂಬಳ ಬೆಳದಿದ್ದರು. ನಾಟಿ
ಸೇರಿ ಬೆಳೆ ನಿರ್ವಹಣೆಗೆ 2 ಲಕ್ಷ ರೂ.
ಖರ್ಚು ಮಾಡಿ ಬೆಳೆದಿದ್ದರು. ಇನ್ನೂ
ಒಂದು ವಾರದಲ್ಲಿ ಕೊಯ್ಲು
ಮಾಡಬೇಕಿತ್ತು. ತಾಲೂಕಿನಲ್ಲಿ ಸುರಿದ
ಆಲಿಕಲ್ಲು ಮಳೆಗೆ ಬೂದುಗುಂಬಳ
ಕಾಯಿ ರಂದ್ರಾಕಾರದಲ್ಲಿ ಕೊರೆದಿದ್ದು,
ಸಂಪೂರ್ಣ ಬೆಳೆ ನಷ್ಟವಾಗಿದೆ. ಉತ್ತಮ
ಇಳುವರಿ ಕೂಡ ಬರಲಿದೆ ಎಂದು ರೈತ
ಭರವಸೆಯಲ್ಲಿದ್ದರು.
ಆದರೆ ಮಳೆಯಿಂದಾಗಿ ನಷ್ಟ
ಸಂಭವಿಸಿದ್ದು, ಕೈಗೆ ಬಂದ ತುತ್ತು
ಬಾಯಿಗೆ ಬಾರದಂತಾಗಿದೆ. ಇದರಿಂದ
ಸ್ವಾಮಿ ಕಂಗಲಾಗಿದ್ದು ತಾಲೂಕು ಆಡಳಿತ
ಬೆಳೆ ನಷ್ಟ ಪರಿಹಾರ ಕೊಡಬೇಕು ಎಂದು
ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tourist spot: ಪ್ರವಾಸಿಗರ ಡೆತ್ಸ್ಪಾಟ್ ಆಗಿರುವ ಸಂಗಮ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
MUST WATCH
ಹೊಸ ಸೇರ್ಪಡೆ
Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು
G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್ ನೀಡುತ್ತಿರಲಿಲ್ಲ
Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು
Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್ ಶೆಟ್ಟರ್
Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ