ಬಿಜೆಪಿಗೆ ಲೈಫ್ ಕೊಟ್ಟೋನೆ ನಾನು – ಹೆಚ್.ಡಿಕೆ

ಬಿಜೆಪಿ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಾಗ್ಧಾಳಿ

Team Udayavani, Feb 27, 2021, 11:49 AM IST

ಬಿಜೆಪಿಗೆ ಲೈಫ್ ಕೊಟ್ಟೋನೆ ನಾನು

ಚನ್ನಪಟ್ಟಣ: ರಾಜ್ಯದಲ್ಲಿ ಬಿಜೆಪಿಗೆ ಲೈಫ್‌ ಕೊಟ್ಟಿದ್ದು ನಾನೇ, ಅವರಿಂದ ನನ್ನನ್ನು ಏನೂ ಮಾಡಲು ಆಗುವುದಿಲ್ಲ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಪಟ್ಟಣದ ಶತಮಾನೋತ್ಸವ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಉದ್ಯೋಗ ಮೇಳ ಕಾರ್ಯಕ್ರಮ ಉದ್ಘಾಟಿಸಲು ಆಗಮಿಸಿದ್ದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2006ರಲ್ಲಿ ಬಿಜೆಪಿಯವರೆಲ್ಲ ಮಂಗನ ತರ ಇನ್ನೊಂದು ಪಕ್ಷಕ್ಕೆ ಹಾರಲು ರೆಡಿಯಾಗಿದ್ದರು. ಸ್ವತಃ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ನನ್ನನ್ನು ಮಂತ್ರಿ ಮಾಡಿ. ಬಿಜೆಪಿಗೆ ರಾಜೀನಾಮೆ ಕೊಡುತ್ತೇನೆ ಎಂದು ಅಂಗಲಾಚಿದ್ದರು ಎಂದು ಕುಟುಕಿದರು.

ರಾಮನಗರ ಜಿಲ್ಲೆಯಿಂದ ನನ್ನನ್ನು ಖಾಲಿ ಮಾಡಿಸಲು ಬಂದವರೆಲ್ಲಾ ಕೊನೆಗೆ ಅವರೇ ಇಲ್ಲಿಂದ ಜಾಗ ಖಾಲಿ ಮಾಡಿಕೊಂಡು ಹೋಗಿದ್ದಾರೆ. ಜನತೆಯ ಪ್ರೀತಿ ನನ್ನ ಮೇಲೆ ಇರುವವರೆಗೂ ಯಾರೂ ನನ್ನನ್ನು ಏನು ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

ದೇವೆಗೌಡ ಕುಟುಂಬದ ಕೊಡುಗೆ ಜನರಿಗೆ ಗೊತ್ತಿದೆ: ದೇವೇಗೌಡರ ಕುಟುಂಬದವರ ಕೊಡುಗೆ ಏನೆಂಬುದು ಜಿಲ್ಲೆಯ ಜನರಿಗೆ ಗೊತ್ತಿದೆ. ನಾನು ಬಂಡೆ ಒಡೆದಿಲ್ಲ. ಜನರ ಹಣ ಲೂಟಿ ಮಾಡಿಲ್ಲ. ನಾನು ಈ ಮಣ್ಣಿನ ಮಗ, ಕೊನೆಯುಸಿರೆಳೆಯುವುದು, ಅಂತ್ಯವಾಗುವುದು ರಾಮನಗರದ ಮಣ್ಣಿನಲ್ಲಿಯೇ ಎಂದರು.

ಯಾರ ಜತೆನೂ ಹೊಂದಾಣಿಕೆ ಮಾಡಿಕೊಂಡಿರಲಿಲ್ಲ: ಮೈಸೂರು ಮೇಯರ್‌ ಚುನಾವಣೆಯಲ್ಲಿ ನನ್ನ ಪಕ್ಷದ ಶಕ್ತಿ ಪ್ರದರ್ಶನ ಮಾಡಲೆಂದೇ ಅಭ್ಯರ್ಥಿಯನ್ನು ನಿಲ್ಲಿಸಿದ್ದೆ. ಅಲ್ಲಿ ಬಿಜೆಪಿ ಜೊತೆಗೂ ಹೊಂದಾಣಿಕೆ ಮಾಡಿಕೊಂಡಿರಲಿಲ್ಲ. ಇದರಿಂದ ಜೆಡಿಎಸ್‌ ಭವಿಷ್ಯ ಏನಾಗಲಿದೆ ಎಂಬ ಸಂದೇಶವನ್ನು ಚಾಮುಂಡೇಶ್ವರಿ ನೀಡಿದ್ದಾಳೆ ಎಂದರು. ಇದಕ್ಕೂ ಮುನ್ನ ತಾಲೂಕಿನ ವೈ.ಟಿ.ಹಳ್ಳಿ ಗ್ರಾಮದಲ್ಲಿ ಮಾರಮ್ಮ ದೇವಿ ದೇವಸ್ಥಾನವನ್ನು ಕುಮಾರಸ್ವಾಮಿ ಉದ್ಘಾಟಿಸಿದರು. ತಾಲೂಕು ಜೆಡಿಎಸ್‌ ಮುಖಂಡರು ಹಾಜರಿದ್ದರು.

ಚನ್ನಪಟ್ಟಣಕ್ಕೆ ನಾನಿದ್ದೇನೆ:

ಎಚ್‌ಡಿಡಿ ಇಗ್ಗಲೂರು ಜಲಾಶಯ ಕಟ್ಟಿಸಿದಾಗ ಈತ ಹುಟ್ಟಿದ್ದನೋ ಇಲ್ಲವೋ ಗೊತ್ತಿಲ್ಲ. ಆದರೆ, ಅದೇ ಜಲಾಶಯದಿಂದ ನೀರು ತುಂಬಿಸಿ ಆಧುನಿಕ ಭಗೀರಥ ಎಂದು ಬೋರ್ಡು ಹಾಕಿಸಿಕೊಂಡಿದ್ದಾನೆ. ಕಲಾವಿದರ ಕೋಟಾದಲ್ಲಿ ಆಯ್ಕೆ ಆಗಿದ್ದೀಯಾ. ರಾಜ್ಯದಲ್ಲಿ ಸಾಕಷ್ಟು ಕಲಾವಿದರು ಸಂಕಷ್ಟದಲ್ಲಿ ಇದ್ದಾರೆ. ಅವರ ಕಷ್ಟ ನೋಡಿಕೋ. ಚನ್ನಪಟ್ಟಣ ನೋಡಿಕೊಳ್ಳಲು ನಾನಿದ್ದೇನೆ ಎಂದು ಎಚ್‌ಡಿಕೆ ಹರಿಹಾಯ್ದರು.

 

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.