ಕ್ಷೇತ್ರದ ಅಭಿವೃದ್ಧಿಗೆ ಅವಿರತ ಹೋರಾಟ


Team Udayavani, Jul 25, 2022, 3:28 PM IST

ಕ್ಷೇತ್ರದ ಅಭಿವೃದ್ಧಿಗೆ ಅವಿರತ ಹೋರಾಟ

ರಾಮನಗರ: ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಅವಿರತ ಹೋರಾಟ ನಡೆಸುತ್ತಿದ್ದೇನೆ. ನನಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ನೀವೆಲ್ಲರೂ ಕಂಕಣ ಬದ್ಧರಾಗಬೇಕು. ಮತ ದಾರರಿಗೆ ವಯಕ್ತಿಕವಾಗಿ ಆಸೆ, ಆಮಿಷಗಳನ್ನು ಒಡ್ಡುವ ಮೂಲಕರಾಜಕೀಯ ವಿರೋಧಿಗಳು ನಮ್ಮನ್ನು ಹಿಮ್ಮೆಟ್ಟಿಸಲುಅನೇಕ ಷಡ್ಯಂತ್ರ ಮಾಡುತ್ತಿದ್ದು, ಅದು ಫಲಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಎಂದು ಪರೋಕ್ಷವಾಗಿ ಕುಟುಕಿದರು.

ತಾಲೂಕಿನ ಹರೀಸಂದ್ರ ಗ್ರಾಪಂ ವ್ಯಾಪ್ತಿಯ ಕೆಂಪೇಗೌಡನದೊಡ್ಡಿ ಗ್ರಾಮದಲ್ಲಿ ಸ್ಮಾರ್ಟ್‌ ಅಂಗನವಾಡಿ ಕೇಂದ್ರ ಹಾಗೂ ಡಿಜಿಟಲ್‌ ಗ್ರಂಥಾಲಯಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಕಳೆದ 25 ವರ್ಷಗಳಿಂದ ಜಿಲ್ಲೆಯಲ್ಲಿ ಯಾವುದೇ ಗಲಭೆನಡೆದಿಲ್ಲ ಎಂಬುದು ಜನತೆಗೆ ಗೊತ್ತಿದೆ. ಅದರೆ, ಕಳೆದವಾರ ನಡೆದ ಚಾಮುಂಡೇಶ್ವರಿ ಕರಗ ಹಾಗೂ ಇನ್ನಿತರೆಹಬ್ಬ ಉತ್ಸವಗಳನ್ನು ಯಶಸ್ವಿಯಾಗಿ ನಿರ್ವಹಿಸಿದರು ಎಂದು ವಿರೋಧ ಪಕ್ಷವಾದ ಕಾಂಗ್ರೆಸ್‌ ಮುಖಂಡರು ಹಲವಾರು ಸಂಘಟನೆಗಳ ಹೆಸರಲ್ಲಿ ಜಿಲ್ಲಾಡಳಿತದ ಪ್ರಮುಖ ಅಧಿಕಾರಿಗಳನ್ನು ಮೆರವಣಿಗೆ ಹಾಗೂಅಭಿನಂದನೆ ಸಲ್ಲಿಸುವ ಮೂಲಕ ರಾಜಕೀಯ ಮಾಡಲು ಹೊರಟಿರುವುದರ ಹಿಂದಿನ ರಾಜಕೀಯಏನು ಎಂಬುದು ಗೊತ್ತಿದೆ ಎಂದು ಆಪಾದಿಸಿದರು.

ಡಿಕೆಶಿ ವಿರುದ್ಧ ಪರೋಕ್ಷ ವಾಗ್ಧಾಳಿ: ಎಚ್‌.ಡಿ.ದೇವೇ ಗೌಡರು, ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಅವಕಾಶನೀಡಿದಂತೆ ಮುಂಬರುವ ದಿನಗಳಲ್ಲಿ ಒಕ್ಕಲಿಗಸಮುದಾಯದ ಬಾಂಧವರು ನನಗೂ ಆಶೀರ್ವಾದಮಾಡಬೇಕು ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಚಾಮುಂಡೇಶ್ವರಿ ಕರಗ ಸಾಂಸ್ಕೃತಿಕಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದಾರೆ.ಆದರೆ, ಬಡವರ ಸೇವೆ ಮಾಡಲು ಯಾರುಮುಂದಾಗುತ್ತಾರೋ ಅಂತಹವರಿಗೆ ತಮ್ಮಆಶೀರ್ವಾದ ಬೆಂಬಲ ಇರಲಿ ಎಂದು ಪರೋಕ್ಷವಾಗಿ ಡಿಕೆಶಿ ವಿರುದ್ಧ ವಾಗ್ಧಾಳಿ ನಡೆಸಿದರು.

ಜೆಡಿಎಸ್‌ಗೆ ಬಹುಮತ ನೀಡಿ: ಶಾಸಕಿ ಅನಿತಾ ಕುಮಾರಸ್ವಾಮಿ ಮಾತನಾಡಿ, ಜಿಲ್ಲೆ ಹಾಗೂ ರಾಜ್ಯದಸರ್ವತೋಮುಖ ಅಭಿವೃದ್ಧಿಗಾಗಿ ಪಂಚರತ್ನ ಯೋಜ ನೆಗಳನ್ನು ಜಾರಿಗೆ ತರುವ ದಿಕ್ಕಿನಲ್ಲಿ ದುಡಿಯುತ್ತಿರುವ ಎಚ್‌.ಡಿ.ಕುಮಾರಸ್ವಾಮಿ ಅವರ ಬಲಪಡಿಸುವ ದಿಕ್ಕಿನಲ್ಲಿಮುಂಬರುವ ದಿನಗಳಲ್ಲಿ ನಡೆಯುವ ವಿಧಾನಸಭಾಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷ ಜೆಡಿಎಸ್‌ಗೆ ಬಹುಮತ ಕೊಡಬೇಕು ಎಂದರು. ಗ್ರಾಮೀಣಾಭಿವೃದ್ಧಿ ದೃಷ್ಟಿಯಿಂದ ಅನೇಕ ಮೂಲ ಸವಲತ್ತುಗಳನ್ನು ಒದಗಿಸುವ ದಿಕ್ಕಿನಲ್ಲಿ ನನ್ನ ಅನುದಾನದಡಿ ಅನೇಕ ಕಾರ್ಯಕ್ರಮ ಮಾಡಲಾಗಿದೆ ಎಂದರು.

ಹರೀಸಂದ್ರ ಗ್ರಾಪಂ ಅಧ್ಯಕ್ಷೆ ಆಶಾ ಮಂಚೇಗೌಡ, ಪಿಡಿಒ ದಯಾನಂದ್‌, ಜೆಡಿಎಸ್‌ ಮುಖಂಡ ಬಿ.ಉಮೇಶ್‌, ರಾಜಶೇಖರ್‌, ಪ್ರಾಣೇಶ್‌,ರಾಜಣ್ಣ, ಮಂಚೇಗೌಡ, ಸಂತೋಷ್‌ ಕಾಳೇಗೌಡನದೊಡ್ಡಿ, ಸಿ.ಎಸ್‌.ಜಯಕುಮಾರ್‌, ಕೆ.ಜಯರಾಮು ಇದ್ದರು.

ಜನರ ಆಶೀರ್ವಾದ ನಮಗೆ ಶ್ರೀರಕ್ಷೆ: ಕುಮಾರಸ್ವಾಮಿ :

ಬಡವರ ಒಡವೆ, ಆಸ್ತಿ ಲಪಟಾಯಿಸಿ ಕೋಟ್ಯಂತರ ಹಣ ಲೂಟಿ ಮಾಡುತ್ತಿದ್ದಾರೆ. ಅಂತಹವರ ಬಗ್ಗೆ ನಾನು ತಲೆಕೆಡಿಸಿಕೊಳ್ಳೋದಿಲ್ಲ. ನಾನು ಬಡಪರ ಕಾರ್ಯಕ್ರಮ ನೀಡುವ ಸಲುವಾಗಿ ಕಂಕಣ ಬದ್ಧನಾಗಿದ್ದೇನೆ. ಹಳ್ಳಿ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕಿಸುವ ಸದುದ್ದೇಶ ಹೊಂದಿದ್ದೇವೆ. ಅದರ ಫಲವಾಗಿ ಈ ಯೋಜನೆಗಳನ್ನರೂಪಿಸಿದ್ದೇವೆ. ಎಲ್ಲಾ ಮಕ್ಕಳು ಸದ್ಬಳಕೆ ಮಾಡಿಕೊಂಡು ಶಿಕ್ಷಣದಲ್ಲಿ ಉನ್ನತ ಸ್ಥಾನಕ್ಕರೆರಬೇಕೆಂಬ ಮಹಾದಾಸೆಯಿದೆ. ಪಂಚರತ್ನ ಯೋಜನೆಗಳು ನಿಮಗೆ ಎಲ್ಲಾ ರೀತಿಯ ಶಕ್ತಿ ತುಂಬುವಲ್ಲಿ ಸಹಕಾರಿಯಾಗಲಿವೆ. ನಿಮ್ಮಗಳ ಆಶೀರ್ವಾದ ನಮಗೆ ಶ್ರೀರಕ್ಷೆ. ನಿಮ್ಮ ಪ್ರೀತಿ ವಿಶ್ವಾಸ ನಿರಂತರವಾಗಿರಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಹರೀಸಂದ್ರ ಪಂಚಾಯ್ತಿಗೆ ನಾಲ್ಕುವರೆ ಕೋಟಿ ಅನುದಾನ ನೀಡಿದ್ದೇನೆ. ರಂಜಾನ್‌ ಮತ್ತು ಕರಗ ಮಹೋತ್ಸವ ಶಾಂತಿಯುತವಾಗಿ ನಡೆಸಿದ್ದಕ್ಕೆ ಅಭಿನಂದಿಸಿದ್ದಾರೆ. ನಾನು ತಾಲೂಕಿಗೆಬಂದ ಬಳಿಕ ಒಂದು ಸಣ್ಣ ಗಲಭೆಗೂ ಅವಕಾಶ ಕೊಟ್ಟಿಲ್ಲ. ಮುಂದಿನ ಐವತ್ತು ವರ್ಷದಮುಂದಾಲೋಚನೆಯ ಯೋಜನೆಗಳನ್ನ ನಾನು ಜಾರಿಗೆ ತಂದಿದ್ದೇನೆ. ಕ್ಷೇತ್ರದ ಯುವಕ ಮಿತ್ರರುಆರ್ಥಿಕ ಸಂಕಷ್ಠದಲ್ಲಿದ್ದಾರೆ. ಎಲ್ಲರೂ ನನ್ನ ಬಳಿ ಅಳಲು ತೋಡಿಕೊಂಡಿದ್ದು, ನಾನು ನಿಮ್ಮಜೊತೆಗಿದ್ದೇನೆ. ಯಾರ ಆಮಿಷಕ್ಕೂ ತಲೆಕೆಡಿಸಿಕೊಳ್ಳಬೇಡಿ. ಎಚ್‌.ಡಿ. ಕುಮಾರಸ್ವಾಮಿ, ಮಾಜಿ ಸಿಎಂ

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.