ಕಾಂಗ್ರೆಸ್‌ ಕ್ರೂರ ದೃಷ್ಟಿ ನನ್ನ ಕ್ಷೇತ್ರದ ಮೇಲೆ ಬಿದ್ದಿದೆ


Team Udayavani, Apr 6, 2021, 12:31 PM IST

ಕಾಂಗ್ರೆಸ್‌ ಕ್ರೂರ ದೃಷ್ಟಿ ನನ್ನ ಕ್ಷೇತ್ರದ ಮೇಲೆ ಬಿದ್ದಿದೆ

ರಾಮನಗರ: ವಿಧಾನಸಭಾ ಕ್ಷೇತ್ರದ ಮೇಲೆ ಕಾಂಗ್ರೆಸ್‌ ಕ್ರೂರ ದೃಷ್ಟಿ ಬಿದ್ದಿದೆ. ಹೀಗಾಗಿ ನಗರಸಭೆ ಚುನಾವಣೆಯ ಹೊಣೆಯನ್ನು ಸ್ವತಃ ನಾನೇ ಹೊರುತ್ತೇನೆ ಎಂದು ಚನ್ನಪಟ್ಟಣ ಶಾಸಕ, ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ರಾಮನಗರ ನಗರಸಭೆಗೆ ಏ.27ಕ್ಕೆ ಚುನಾವಣೆ ಘೋಷಣೆ ಆಗಿರುವ ಹಿನ್ನೆಲೆಯಲ್ಲಿ ನಗರದ ನಾಸಿರ್‌ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಅಲ್ಪಸಂಖ್ಯಾತ ಸಮುದಾಯದ ಸಭೆಗೂ ಮುನ್ನ ಅವರು ಮಾಧ್ಯಮ ಪ್ರತಿನಿಧಿಗಳ ಬಳಿ ಮಾತನಾಡಿದರು.

ನಗರಸಭೆ ಸೇರಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ತಾವು ಎಂದೂ ನೇರವಾಗಿ ಪಾತ್ರ ವಹಿಸುತ್ತಿರಲಿಲ್ಲ.ಪಕ್ಷದ ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರುನಿಭಾಯಿಸುತ್ತಿದ್ದರು. ಆದರೆ, ಈ ಬಾರಿ, ರಾಮನಗರ ಕ್ಷೇತ್ರದ ಮೇಲೆ ಕಾಂಗ್ರೆಸ್‌ ನಾಯಕರ ಕ್ರೂರ ದೃಷ್ಟಿ ಬಿದ್ದಿದೆ. ಕ್ಷೇತ್ರದಲ್ಲಿ ಶಾಂತಿ ಕದಡಬಾರದು ಎಂಬ ಉದ್ದೇಶದಿಂದ ನಗರಸಭೆ ಚುನಾವಣೆ ಜವಾಬ್ದಾರಿಯನ್ನು ತಾವೇ ವಹಿಸಿಕೊಂಡಿರುವುದಾಗಿ ತಿಳಿಸಿದರು.

ಎಲ್ಲಾ ಪಕ್ಷಗಳ ಕೆಟ್ಟ ದೃಷ್ಟಿ, ಕಾಂಗ್ರೆಸ್‌ನದ್ದು ಕ್ರೂರ ದೃಷ್ಟಿ: ರಾಮನಗರದಿಂದ ತಮ್ಮ ರಾಜಕೀಯ ಜೀವನ ಆರಂಭವಾಗಿದೆ. ಅಂದಿನಿಂದಲೂ ಕ್ಷೇತ್ರದ ಜನರಲ್ಲಿಸಹೋದರತ್ವ ನೆಲೆಸಿದೆ. ಸಮಸ್ಯೆಗಳು ಕಾಡಲಿಲ್ಲ. ಇದೇ ವಾತಾವರಣ ಮುಂದುವರಿಯಬೇಕಾಗಿದೆ.ಆದರೆ, ಈ ಬಾರಿ ಎಲ್ಲಾ ರಾಜಕೀಯ ಪಕ್ಷಗಳುರಾಮನಗರದ ಮೇಲೆ ಕೆಟ್ಟ ದೃಷ್ಟಿ ಬೀರಿವೆ. ಅದರಲ್ಲೂ ಕಾಂಗ್ರೆಸ್‌ ನಾಯಕರ ಕ್ರೂರ ದೃಷ್ಟಿ ಕ್ಷೇತ್ರದ ಮೇಲೆ ಬಿದ್ದಿದೆ. ಅದರಿಂದಾಗಿ ಸಮಸ್ಯೆಗಳು ಉದ್ಭವಿಸಬಾರದು. ಹೀಗಾಗಿ ತಾವು ಪಕ್ಷದ ಕಾರ್ಯಕರ್ತರ ಜೊತೆ ಇದ್ದು ಚುನಾವಣೆ ನಡೆಸುವುದಾಗಿ ತಿಳಿಸಿದರು.

ಕಾಂಗ್ರೆಸ್‌ ಅಪಪ್ರಚಾರ: ನಗರದ ಜನರಿಗೆ ಮನೆ ಕಟ್ಟಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರದಿಂದ 30 ಕೋಟಿ ರೂ. ಅನುದಾನ ತಂದಿದ್ದೆ. ಸ್ಲಂ ಬೋರ್ಡ್‌ ನಿಂದ ಅರ್ಜಿ ಆಹ್ವಾನಿಸಿದಾಗ ಫ‌ಲಾನುಭವಿಗಳು ಅರ್ಜಿದಾರರು 5 ಸಾವಿರ ರೂ. ಠೇವಣಿ ಕಟ್ಟಿದ್ದಾರೆ.900 ರಿಂದ 1000 ಮಂದಿ ಅರ್ಜಿ ಹಾಕಿದ್ದರು. ಆ ಜನರು ಕಟ್ಟಿರುವ 5 ಸಾವಿರ ರೂ. ಹಣ ಸ್ಲಂ ಬೋರ್ಡ್‌ನಯಲ್ಲಿಯೇ ಇದೆ. ಆದರೆ, 2013ರಲ್ಲಿ ಕಾಂಗ್ರೆಸ್ಸಿಗರು ಮನೆಗಳ ವಿಚಾರವನ್ನೇ ಮುಖ್ಯವಾಗಿಟ್ಟು ಕೊಂಡು ಚುನಾವಣೆ ನಡೆಸಿದರು. ಅಪಪ್ರಚಾರ ಮಾಡಿದರು. ಆದರೆ, ಬಿಜೆಪಿ ಮತ್ತು ಕಾಂಗ್ರೆಸ್‌ ಆಡಳಿತದಲ್ಲಿ ಆದ ಸಮಸ್ಯೆಗಳಿಂದಾಗಿ ಮನೆ ನೀಡಲಾಗಲಿಲ್ಲ ಎಂದು ಹೇಳಿದರು.

ಯಾರೂ ಆತಂಕಪಡಬೇಕಿಲ್ಲ: ತಾವು ಪ್ರಥಮ ಬಾರಿಗೆ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಪ್ರಾಥಮಿಕ ಹಂತದಲ್ಲಿ ಕೆಲ ಮನೆ ನಿರ್ಮಿಸಿ ಫ‌ಲಾನುಭವಿಗಳಿಗೆ ವಿತರಿಸಲಾಗಿದೆ. ಈಗ ಸ್ಲಂ ಬೋರ್ಡ್‌ಗೆ 58 ಕೋಟಿ ರೂ.  ಬಿಡುಗಡೆ ಮಾಡಿಸುವ ಮೂಲಕ 1800 ಮನೆನಿರ್ಮಿಸುವ ನಿರ್ಧಾರವಾಗಿದೆ. ಯಾರೂ ಆತಂಕ ಪಡಬೇಕಾಗಿಲ್ಲ ಎಂದು ಭರವಸೆ ನೀಡಿದರು. ಮಾಜಿ ಶಾಸಕರೊಬ್ಬರು ತಮ್ಮನ್ನುದ್ದೇಶಿಸಿ ಜನರಿಗೆ ನಿವೇಶನ,ಮನೆಗಳಿಲ್ಲ ಎಂದು ಭಾಷಣ ಮಾಡಿದ್ದಾರೆ. ಆ ಮಾಜಿಶಾಸಕರು ಕ್ಷೇತ್ರದ ಅಭಿವೃದ್ಧಿ ಏನು ಕೊಡುಗೆನೀಡಿದ್ದಾರೊ ಗೊತ್ತಿಲ್ಲ ಎಂದು ಕುಮಾರಸ್ವಾಮಿ ಪರೋಕ್ಷವಾಗಿ ಸಿ.ಎಂ.ಲಿಂಗಪ್ಪ ವಿರುದ್ಧ ವ್ಯಂಗ್ಯವಾಡಿದರು. ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ, ಜೆಡಿಎಸ್‌ ಸ್ಥಳೀಯ ಮುಖಂಡರಾದರಾಜಶೇಖರ್‌, ಬಿ.ಉಮೇಶ್‌, ಪರ್ವಿಜ್‌ ಪಾಷ, ಜಕೀರ್‌ ಹುಸೇನ್‌, ಜಯಕುಮಾರ್‌ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.