ಕೋವಿಡ್ನ ಆತಂಕದಲ್ಲಿಉಪ ಚುನಾವಣೆ ಏಕೆ?
Team Udayavani, Apr 13, 2021, 3:48 PM IST
ರಾಮನಗರ: ಕೋವಿಡ್ ಸೋಂಕು ನಿಯಂತ್ರಣಕ್ಕೆ ಸರ್ಕಾರ ಹಲವಾರು ನಿಯಮಗಳನ್ನು ಜಾರಿಗೆ ತಂದಿದೆ, ಆದರೂ ಉಲ್ಲಂಘಿಸಿ, ಲೋಕಸಭೆ, ವಿಧಾನಸಭೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸುತ್ತಿದೆ ಎಂದು ಚನ್ನಪಟ್ಟಣ ಶಾಸಕ ಹಾಗೂ ಮಾಜಿ ಸಿಎಂ ಎಚ್.ಸಿ.ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದರು.
ತಾಲೂಕಿನ ಬಿಡದಿ ಬಳಿಯ ಕೇತಗನಹಳ್ಳಿಯ ತಮ್ಮ ತೋಟದ ಮನೆಯಲ್ಲಿ ರಾಮನಗರ ಮತ್ತು ಚನ್ನಪಟ್ಟಣ ನಗರಸಭೆಗಳ ಚುನಾವಣೆ ಆಕಾಂಕ್ಷಿಗಳ ಸಭೆಗೂ ಮುನ್ನ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕೋವಿಡ್ 2ನೇಅಲೆ ತೀವ್ರವಾಗುತ್ತಿದ್ದರೂ ರಾಜ್ಯ ಸರ್ಕಾರ ಚುನಾವಣೆಗಳನ್ನು ಮುಂದೂಡಲಿಲ್ಲವೇಕೆ ಎಂದು ಪ್ರಶ್ನಿಸಿದರು. ಚುನಾವಣಾಪ್ರಚಾರದಲ್ಲಿ ಸಹಸ್ರಾರು ಮಂದಿ ಜನ ಸೇರುತ್ತಿದ್ದಾರೆ. ಆತಂಕದ ನಡುವೆ ಚುನಾವಣೆ ಏಕೆ ಎಂದು ವಿವರಿಸಿದರು.
ರಾಜ್ಯ ಸರ್ಕಾರದ ಬೇಜವಾಬ್ದಾರಿ ನಡವಳಿಕೆ ಹಾಗೂ ಅವೈಜ್ಞಾನಿಕ ಕ್ರಮಗಳಿಂದಾಗಿ ಕೋವಿಡ್ ಸೋಂಕು ಉಲ್ಬಣಗೊಳ್ಳಲು ಕಾರಣ ಎಂದು ಟೀಕಾಪ್ರಹಾರ ನಡೆಸಿದರು. ಜನ ಸಾಮಾನ್ಯರಿಗೆ ಎಚ್ಚರಿಕೆಯಿಂದ ಇರುವಂತೆ ನಾವು ಹೇಳುತ್ತಿದ್ದೇವೆ. ಆದರೆ, ನಮ್ಮ ಹಣೆಬರಹ ಏನಾಗುತ್ತದೆಯೋ ಎಂಬ ಭಯ ನಮಗೂ ಕಾಡುತ್ತಿದೆ ಎಂದು ವಿವರಿಸಿದರು.
ರಾತ್ರಿ ಕರ್ಫ್ಯೂದಿಂದ ಏನು ಉಪಯೋಗ?: ಜನರ ಜೊತೆ ಜನಪ್ರತಿನಿಧಿಗಳು ಚೆಲ್ಲಾಟ ಆಡುತ್ತಿದ್ದೇವೆ. ರಾತ್ರಿ ಕರ್ಫ್ಯೂ, ಲಾಕ್ಡೌನ್ ಮಾಡುವುದರಿಂದ ಯಾರಿಗೆ ಉಪಯೋಗವಾಗುತ್ತದೆ? ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರಿಗೆ ಆಸ್ಪತ್ರೆಯಲ್ಲಿ ಹಾಸಿಗೆ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಸೋಂಕಿತರಿಗೆ ನೀಡುವ ಚುಚ್ಚು ಮದ್ದಿನ ಕೊರತೆ ಕಾಡುತ್ತಿರುವುದು ಗಮನಕ್ಕೆ ಬಂದಿದೆ. ರಾಜ್ಯ ಸರ್ಕಾರವೇ ತನ್ನಲ್ಲಿ ನ್ಯೂನತೆಗಳನ್ನಿಟ್ಟುಕೊಂಡು ಜನದ ಜೀವದ ಜತೆ ಚೆಲ್ಲಾಟ ಆಡುತ್ತಿದೆ ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಂಗಳೂರು : ಹುಟ್ಟುವಾಗಲೇ ನವಜಾತ ಶಿಶುವಿನಲ್ಲಿ ಹಲ್ಲು! ವೈದ್ಯರು ಹೇಳಿದ್ದೇನು ಗೊತ್ತೆ ?
10 ಲಕ್ಷ ಮಕ್ಕಳಿಗಿಲ್ಲ ಶಿಕ್ಷಣ: ಕೋವಿಡ್ ತಂದಿಟ್ಟ ಆಘಾತ ಸಮೀಕ್ಷೆ ವಿವರ ಹೈಕೋರ್ಟ್ಗೆ
ಅಡುಗೆ ಎಣ್ಣೆ ಬೆಲೆ ಪ್ರತಿ ಲೀಟರ್ಗೆ 10 ರೂ.ಗಳಿಂದ 15 ರೂ. ವರೆಗೆ ಇಳಿಕೆ
ಡಿಕೆಶಿ ಶಕ್ತಿ ಪ್ರದರ್ಶನ? ನಾನು ಹೈಕಮಾಂಡ್ ಆದೇಶದಂತೆ ನಡೆದುಕೊಳ್ಳುತ್ತೇನೆ ಎಂದ ಡಿಕೆಶಿ
ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಬೋರಿಸ್ ಜಾನ್ಸನ್