ಜಂಬು ನೇರಳೆ ಹಣ್ಣಿಗೆ ಅಧಿಕ ಬೇಡಿಕೆ

ಕೆ.ಜಿ ಹಣ್ಣು 200- 250 ರೂ.ಗೆ ಮಾರಾಟ • ಬೇಡಿಕೆಯಿಂದ ರೈತರಲ್ಲಿ ಮಂದಹಾಸ

Team Udayavani, Jun 20, 2019, 2:39 PM IST

rn-tdy-1..

ಮಾಗಡಿ ತಾಲೂಕಿನ ಹಾರೋಹಳ್ಳಿಯಲ್ಲಿ ಬಿಟ್ಟಿರುವ ಜಂಬು ನೇರಳೆ.

ಮಾಗಡಿ: ಇತ್ತೀಚೆಗೆ ಜಂಬು ನೇರಳೆ ಹಣ್ಣಿಗೆ ಭಾರೀ ಬೇಡಿಕೆ ಉಂಟಾಗಿದೆ. ವರ್ಷಕ್ಕೊಮ್ಮೆ ಸಿಗುವ ಅಪರೂಪದ ಜಂಬು ನೇರಳೆ ಹಣ್ಣು ತಿನ್ನುವುದರಿಂದ ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರಲಿದೆ. ಔಷಧಿ ಗುಣ ಇದೆ ಎಂಬ ಹಿನ್ನೆಲೆಯಲ್ಲಿ ಜಂಬು ನೇರಳೆಗೆ ಭಾರೀ ಬೇಡಿಕೆ ಕಂಡು ಬಂದಿದ್ದು, ಕೆ.ಜಿ.ಗೆ 200ರಿಂದ 250 ರೂ.ಗೆ ಮಾರಾಟವಾಗುತ್ತಿದೆ.

ಈಗ ಮಾರುಕಟ್ಟೆಯಲ್ಲಿ ಜಂಬು ನೇರಳೆಗೆ ಭಾರೀ ಬೇಡಿಕೆ ಕಂಡು ಬಂದಿದ್ದು, ಮಾವಿನ ಫ‌ಸಲಿನ ಜೊತೆ ನೇರಳೆ ಹಣ್ಣಿಗೂ ಭಾರೀ ಬೇಡಿಕೆ ಬಂದಿದೆ. ನೇರಳೆ ಹಣ್ಣಿ ಸುಗ್ಗಿ ಆರಂಭವಾಗಿದ್ದು, ರೈತರಲ್ಲಿ ಮಂದಹಾಸ ಮೂಡಿಸಿದೆ. ಸಾಮಾಜಿಕ ಅರಣ್ಯ ಇಲಾಖೆಯವರು ತಾಲೂಕಿನ ಪ್ರಮುಖ ರಸ್ತೆ ಬದಿಗಳಲ್ಲಿ ಜಂಬು ನೇರಳೆ ಹಾಕಿದ್ದಾರೆ. ಜೊತೆಗೆ ಸಾವನದುರ್ಗ ಅರಣ್ಯ ಪ್ರದೇಶದಲ್ಲೂ ಕೂಡ ಜಂಬು ನೇರಳೆ ಮರಗಳಿದೆ. ಅಲ್ಲದೆ, ಕೃಷಿಕರು ತಮ್ಮ ಜಮೀನಿನಲ್ಲಿ ಉತ್ತಮ ಕಸಿಯ ನೇರಳೆ ಗಿಡಗಳನ್ನು ಹಾಕಿದ್ದು, 3 ವರ್ಷಕ್ಕೆ ಫ‌ಸಲು ಬಿಡಲು ಆರಂಭವಾಗಿರುವುದರಿಂದ ಹಣ್ಣಿಗೆ ಹೆಚ್ಚಿನ ಬೇಡಿಕೆಯಿದೆ. ಮೊದಲು ಉಚಿತವಾಗಿ ಹಣ್ಣುಗಳು ಸಿಗುತ್ತಿತ್ತು. ಆದರೆ, ಈಗ ಔಷಧಿ ಗುಣ ಇರುವುದು ಪತ್ತೆಯಾಗಿರುವುದರಿಂದ ಹಣ್ಣಿಗೆ ಬೇಡಿಕೆ ಹೆಚ್ಚಾಗಿದೆ.

ರೈತರು ನೇರಳೆ ಗಿಡ ಬೆಳೆಸುತ್ತಿದ್ದಾರೆ: ಜಂಬು ನೇರಳೆ ಹಣ್ಣು ವ್ಯಾಪಾರಿಗಳು ಖಾಸಗಿ ವ್ಯಕ್ತಿಗಳಿಂದ ಫ‌ಸಲು ಖರೀದಿಸಿ, ಹಗಲು- ರಾತ್ರಿ ಕಾವಲಿದ್ದು ಉದ್ದನೆಯ ಬಿದಿರಿನ ಕಡ್ಡಿ ಸಹಾಯದಿಂದ ಮರ ಹತ್ತಿ ಹಣ್ಣು ಬಿಡಿಸಿ ಮಾರುಕಟ್ಟೆಗೆ ಕೊಂಡೋಯ್ದು ಮಾರಾಟ ಮಾಡುತ್ತಿದ್ದಾರೆ. ದೊಡ್ಡ ಗಾತ್ರದ ಒಂದು ಮರದ ಫ‌ಸಲು 60ರಿಂದ 80 ಸಾವಿರ ಮಾರಾಟವಾಗಿದ್ದು, ಕೆಲವು ರೈತರು ಮಾವು ಹಾಗೂ ಹುಣಸೆಗೆ ಪರ್ಯಾಯವಾಗಿ ಜಂಬು ನೇರಳೆ ಗಿಡ ನೆಟ್ಟು ಬೆಳೆಸುತ್ತಿದ್ದಾರೆ.

ಜಂಬು ನೇರಳೆ ಬೇಸಾಯ ಸುಲಭ: ಮಳೆಗಾಲದಲ್ಲಿ ಗಿಡ ನೆಟ್ಟು ಜಾನುವಾರ ಬಾಯಿ ಹಾಕದಂತೆ ನೋಡಿಕೊಂಡರೆ 2-3 ವರ್ಷಗಳಲ್ಲಿ ಬೆಳೆದು ನಿಲ್ಲುತ್ತದೆ. ವರ್ಷದಿಂದ ವರ್ಷಕ್ಕೆ ಫ‌ಸಲು ಕೂಡ ಹೆಚ್ಚಾಗುತ್ತಿದ್ದು, ಹುಳು ಬಾಧೆಗೆ ಒಂದೆರಡು ಸಲ ಔಷಧಿ ಸಿಂಪಡಿಸಿದರೆ ಸಾಕು ಉತ್ತಮ ಬೆಳೆ ಬರುತ್ತದೆ ಎಂದು ತೋಟಗಾರಿಕೆ ಸಹಾಯಕ ನಿರ್ದೇಶಕ ನಾಗರಾಜು ತಿಳಿಸಿದ್ದಾರೆ.

ಜಂಬು ನೇರಳೆ ಹಣ್ಣನ್ನು ನೋಡುತ್ತಿದ್ದಂತೆ ಬಾಯಲ್ಲಿ ನೀರೂರುತ್ತದೆ, ನೇರಳೆ ಹಣ್ಣು ಜ್ಯೂಸ್‌ ತಯಾರಿಕೆಯಲ್ಲೂ ಈ ಹಣ್ಣನ್ನು ಬಳಸಲಾಗುತ್ತದೆ. ಔಷಧಿ ಗುಣ ಹೆಚ್ಚಾಗಿರುವುದರಿಂದ ಮಧುಮೇಹ ಇರುವ ವ್ಯಕ್ತಿಗಳು ಈ ಹಣ್ಣನ್ನು ಹೆಚ್ಚಾಗಿ ಬಳಸುತ್ತಾರೆ. ಮಾಗಡಿ ಮಾರುಕಟ್ಟೆಯಲ್ಲಿ ಜಂಬು ನೇರಳೆ ಹಣ್ಣು ಭರ್ಜರಿಯಾಗಿ ವ್ಯಾಪಾರವಾಗುತ್ತಿದ್ದು, ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಲೇ ಇದೆ.

 

● ತಿರುಮಲೆ ಶ್ರೀನಿವಾಸ್‌

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.