ಸಮಗ್ರ ಕೃಷಿ ಪದ್ಧತಿಯಿಂದ ಅಧಿಕ ಆದಾಯ

ನರೇಗಾ ಯೋಜನೆ ಸಮರ್ಪಕ ಬಳಕೆಯಿಂದ ಆರ್ಥಿಕ ಮಟ್ಟ ಸುಧಾರಣೆ: ಭಾಗ್ಯ ಗಂಗಾಧರ್‌

Team Udayavani, Jul 20, 2019, 5:24 PM IST

rn-tdy-3

ಮಾಗಡಿ: ರೈತರು ಸಮಗ್ರ ಕೃಷಿ ಪದ್ಧತಿಯಿಂದ ಅಧಿಕ ಆದಾಯ ಗಳಿಸಬಹುದು ಎಂದು ನೇತೇನಹಳ್ಳಿ ಗ್ರಾಪಂ ಅಧ್ಯಕ್ಷೆ ಭಾಗ್ಯ ಗಂಗಾಧರ್‌ ತಿಳಿಸಿದರು.

ತಾಲೂಕಿನ ನೇತೇನಹಳ್ಳಿ ಗ್ರಾಪಂ ನಡೆದ ಗ್ರಾಮ ಸಭೆಯಲ್ಲಿ ಮಾತನಾಡಿದ ಅವರು, ರೈತರು ಸರ್ಕಾರಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ನರೇಗಾ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ತಮ್ಮ ಆರ್ಥಿಕ ಮಟ್ಟವನ್ನು ಸುಧಾರಣೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ನರೇಗಾ ಯೋಜನೆ ರೈತರಿಗೆ ವರದಾನ: ತಾಪಂ ಸದಸ್ಯ ವೆಂಕಟೇಶ್‌ ಮಾತನಾಡಿ, ನರೇಗಾ ಯೋಜನೆ ರೈತರಿಗೆ ವರದಾನವಾಗಿದೆ. ಆದರೆ, ಹೆಚ್ಚು ಮಂದಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ನರೇಗಾ ಯೋಜನೆ ಹಳ್ಳ ಹಿಡಿಯುವ ಹಂತಕ್ಕೆ ತಲುಪಲಿದೆ ಎಂದು ಆತಂಕ ವ್ಯಕ್ತಪಡಿಸಿದ ಅವರು, ನರೇಗಾ ಯೋಜನೆ ಸಮರ್ಪಕವಾಗಿ ಅನುಷ್ಠಾನಕ್ಕೆ ಅನುಮೋದನೆ ನೀಡುವಂತೆ ಮನವಿ ಮಾಡಿದರು.

ಇದೇ ವೇಳೆ ವಿವಿಧೆಡೆ ಕಾಮಗಾರಿಗಳ ವಿವರಗಳನ್ನು ಪಿಡಿಒ ಎಸ್‌.ವಿ. ಶಿವಕುಮಾರ್‌ ಅವರಿಂದ ಪಡೆದುಕೊಂಡರು.

ರೇಷ್ಮೆಯಿಂದ ರೈತರ ಬದುಕು ಹಸನು: ರೇಷ್ಮೆ ಸಹಾಯಕ ನಿರ್ದೇಶಕ ಕೃಷ್ಣಬಾಬು ಮಾತನಾಡಿ, ರೇಷ್ಮೆ ಬೆಳೆಯಿಂದ ರೈತರ ಬದುಕು ಹಸನಾಗುತ್ತದೆ. ರೇಷ್ಮೆ ಬೆಳೆ ಬೇಸಾಯ ಮತ್ತು ರೇಷ್ಮೆ ಹುಳು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ ಸಹಾಯಧನ ಸಿಗಲಿದೆ. ಇದರಲ್ಲೂ ಹನಿ ನೀರಾವರಿ ಯೋಜನೆ ಅಳವಡಿಸಿಕೊಂಡರೆ ಶೇ.90ರಷ್ಟು ಸಹಾಯ ಧನ ಸಿಗಲಿದೆ ಎಂದು ತಿಳಿಸಿದರು.

ಎಲ್ಲಾ ಉತ್ಪನ್ನಕ್ಕೂ ಅವಕಾಶ: ತೋಟಗಾರಿಕೆ ಇಲಾಖೆಯ ಚಂದ್ರಿಕಾ ಮಾತನಾಡಿ, ಹೂ, ಸೊಪ್ಪು, ತಕರಾರಿ, ಮಾವು, ತೆಂಗು, ಸಪೋಟ, ಬಾಳೆ, ಸೀಬೆ, ನುಗ್ಗೆ, ಕರಿಬೇವು ಜೊತೆಗೆ ಹೈನುಗಾರಿಕೆ, ರೇಷ್ಮೆ, ಮೀನುಗಾರಿಕೆ ಎಲ್ಲವನ್ನು ರೈತರು ಉತ್ಪನ್ನ ಮಾಡುವ ಅವಕಾಶಗಳಿವೆ. ಅಲ್ಲದೆ, ನರೇಗಾ ಸಹ ನಮ್ಮ ಬೆಳೆಗಳಿಗೆ ಕೂಲಿಯನ್ನು ಪಡೆಯುವ ಅವಕಾಶಗಳು ಹೆಚ್ಚಿವೆ. ಸದ್ಬಳಕೆ ಮಾಡಿಕೊಂಡು ಉತ್ತಮ ಬೆಳೆ ಬೆಳೆದು, ಹೆಚ್ಚು ಆದಾಯ ಗಳಿಸಬೇಕು ಎಂದರು.

ಹನಿ ನೀರಾವರಿ ಯೋಜನೆ ಪರಿಣಾಮಕಾರಿ: ಗ್ರಾಮ ಪಂಚಾಯ್ತಿ ಪಿಡಿಒ ಎಸ್‌.ವಿ.ಶಿವಕುಮಾರ್‌ ಮಾತನಾಡಿ, ಶೇ.90ರ ಸಹಾಯಧನದಲ್ಲಿ ಹನಿನೀರಾವರಿ ಯೋಜನೆ ನಿಜಕ್ಕೂ ಕೃಷಿ, ತೋಟಗಾ ರಿಕೆಯಲ್ಲಿ ಹೆಚ್ಚು ಪರಿಣಾಮಕಾರಿಯಾಗಿದೆ. ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊ ಳ್ಳುವುದು ಪ್ರತಿಯೊಬ್ಬ ರೈತರ ಕರ್ತವ್ಯವಾಗಬೇಕು. ಎಲ್ಲದಕ್ಕೂ ಉದ್ಯೋಗ ಚೀಟಿ ಕಡ್ಡಾಯವಾಗಿರಬೇಕು ಎಂದು ವಿವಿಧ ಇಲಾಖೆಗಳ ಯೋಜನೆಗಳ ಪಟ್ಟಿಯನ್ನು ತಿಳಿಸಿದರು. ಸಾಮಾಜಿಕ ಲೆಕ್ಕ ಪರಿಶೋಧಕ ನಾಗರಾಜು, ನೇತೇನಹಳ್ಳಿ ಗ್ರಾಪಂ ಸದಸ್ಯರಾದ ಪ್ರಕಾಶ್‌, ಪಿ.ವಿ.ಶಾಂತರಾಜು, ಶಾಂತಮ್ಮ, ಬಸವರಾಜು, ನಾಗರಾಜು, ಲಕ್ಷ್ಮಮ್ಮ, ಸುಧಾ, ಸರಸ್ವತಿ, ಗಂಗಾಧರಯ್ಯ, ಮಂಜುನಾಥ್‌, ಕಾರ್ಯದರ್ಶಿ ಕೆ.ಹನುಮಂತಯ್ಯ ಹಾಗೂ ಗ್ರಾಮಸ್ಥರು ಹಾಜರಿದ್ದರು.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.