ರೇಷ್ಮೆ ಗೂಡು ಮಾರುಕಟ್ಟೆ ಎಷ್ಟು ಸುರಕ್ಷಿತ?


Team Udayavani, Mar 21, 2020, 5:51 PM IST

rn-tdy-1

ರಾಮನಗರ: ನಗರದ ರೇಷ್ಮೆ ಗೂಡು ಮಾರುಕಟ್ಟೆಯಲ್ಲಿ ನಿತ್ಯ ಸಾವಿರಾರು ಮಂದಿ ಸೇರುವ ಸ್ಥಳವಾಗಿದ್ದು , ಕೋವಿಡ್ 19 ವೈರಸ್‌ ಸೋಂಕು ಹರಡುವ ಎಲ್ಲಾ ಸಾಧ್ಯತೆಗಳಿದ್ದು, ರೈತರಿಗೆ ಇದು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ನಾಗರೀಕ ವಲಯದಲ್ಲಿ ವ್ಯಕ್ತವಾಗಿದೆ.

ದಿನನಿತ್ಯ ಈ ಮಾರುಕಟ್ಟೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ, ನೆರೆಹೊರೆಯ ರಾಜ್ಯಗಳಿಂದಲೂ ರೇಷ್ಮೆ ಕೃಷಿಕರು ಗೂಡು ಮಾರಲು ಬರುತ್ತಾರೆ. ಗೂಡು ಖರೀದಿಸಲು ರೀಲರ್‌ಗಳು ಸಂಖ್ಯೆಯೂ ಕಡಿಮೆ ಏನಿಲ್ಲ. ಹೀಗಾಗಿ ಇಲ್ಲಿ ನಿತ್ಯ ಸಾವಿರಾರು ಮಂದಿ ಸೇರುವ ತಾಣವಾಗಿದೆ. ಜಿಲ್ಲಾಡಳಿತ ಮತ್ತು ಮಾರುಕಟ್ಟೆಯ ಅಧಿಕಾರಿಗಳು ತಕ್ಷಣ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಾರ್ವಜಿಕರು ಆಗ್ರಹಿಸಿದ್ದಾರೆ.

ಕೋವಿಡ್ 19 ಸೋಂಕು ಹರಡುವುದನ್ನು ತಡೆಯಲು ವ್ಯಕ್ತಿಗಳ ನಡುವೆ ಕನಿಷ್ಠ 2 ಮೀಟರ್‌ ಅಂತರ ಕಾಯ್ದುಕೊಳ್ಳಲು ಸರ್ಕಾರ ಸೂಚಿಸುತ್ತಲೇ ಇದೆ. ಆದರೆ ರೇಷ್ಮೆ ಗೂಡು ಮಾರುಕಟ್ಟೆಯಲ್ಲಿ ಈ ವ್ಯವಸ್ಥೆ ಕಷ್ಟ ಸಾಧ್ಯ. ಮೇಲಾಗಿ ರೇಷ್ಮೆ ಕೃಷಿಕರು ಅಕ್ಷರ ಕಲಿತವರಲ್ಲ. ಇಲ್ಲಿ ಬಹುತೇಕರಿಗೆ ಕೊರೊನಾ ಸೋಂಕಿನ ಬಗ್ಗೆ ಅರಿವಿಲ್ಲ. ದೂರದ ಊರುಗಳಿಂದ ಸಾರ್ವಜನಿಕರ ವ್ಯವಸ್ಥೆಯಲ್ಲೇ ಇಲ್ಲಿಗೆ ಬರುತ್ತಾರೆ. ಇಲ್ಲಿ ತಂಗಲು ವಿಶೇಷ ವ್ಯವಸ್ಥೆ ಇಲ್ಲ. ಶೌಚಾಲಯ ಹೊರತುಪಡಿಸಿ ಸ್ನಾನ ಮಾಡಲು ಅವಕಾಶವಿಲ್ಲ. ಹೀಗಾಗಿ ವೈಯಕ್ತಿಕ  ಸ್ವಚ್ಛತೆ ಇಲ್ಲಿ ಮರೀಚಿಕೆ.

ಸೌಕರ್ಯ ಕಲ್ಪಿಸಲು ಮುಂದಾಗಿಲ್ಲ: ರೇಷ್ಮೆ ಗೂಡು ಹರಾಜು ಬೆಳಗ್ಗೆ ಮುಗಿದರೂ, ರೈತರು ಸಂಜೆವರೆಗೆ ಕೆಲವೊಮ್ಮೆ ಎರಡು ಮೂರು ದಿನಗಳವರೆಗೂ ಹರಾಜು ಮೊತ್ತವನ್ನು ಪಡೆಯಲು ಕಾಯಬೇಕಾಗುತ್ತದೆ. ಇಲ್ಲಿ ರೈತರು ತಂಗುವ ವ್ಯವಸ್ಥೆ ಇಲ್ಲ. ಪರಿಸ್ಥಿತಿ ಹೀಗಿರುವಾಗ ಅವರ ಆರೋಗ್ಯ ಹತ್ತಾರು ಬಗೆಯಲ್ಲಿ ಕೆಡುವ ಸಾಧ್ಯತೆ ಇದ್ದು, ಇವರ ರಕ್ಷಣೆಗೆ ಸ್ಥಳೀಯ ಆಡಳಿತ ಮತ್ತು ಗೂಡು ಮಾರುಕಟ್ಟೆಯ ಅಧಿಕಾರಿಗಳೇ ನಿರ್ವಹಿಸ ಬೇಕಾಗಿದೆ. ಆದರೆ ದುರಾದೃಷ್ಠವಶಾತ್‌ ಈ ವಿಚಾರದಲ್ಲಿ ಈ ಅಧಿಕಾರಿಗಳು ಸ್ವತಂತ್ರವಾಗಿ ಕ್ರಮಗಳನ್ನು ಕೈಗೊಳ್ಳುವ ಅಧಿಕಾರ ಇಲ್ಲ. ಎಲ್ಲದಕ್ಕೂ ಸರ್ಕಾರದ ಅನುಮತಿಯೇ ಬೇಕಾಗಿದೆ. ಈ ವಿಚಾರಗಳು ಸ್ಥಳೀಯ ಘಟಾನುಘಟಿ ರಾಜಕೀಯ ನಾಯಕರಿಗೆಗೊತ್ತಿದ್ದರೂ, ಯಾವುದೊಂದು ಸೌಕರ್ಯ ಕಲ್ಪಿಸಲು ಮುಂದಾಗಿಲ್ಲ.

ಮಾರುಕಟ್ಟೆ ಮುಚ್ಚಿದರೆ? : ರೇಷ್ಮೆ ಕೃಷಿ ಮತ್ತು ರೀಲಿಂಗ್‌ ಉದ್ಯಮ ಜಿಲ್ಲೆಯ ಆರ್ಥಿ ಕತೆಯ ಮೇಲೆ ಪರಿಣಾಮ ಬೀರುವ ಪ್ರಮುಖ ಉದ್ಯಮ. ಹಾಗೊಮ್ಮೆ ರೇಷ್ಮೆ ಗೂಡು ಮಾರುಕಟ್ಟೆಯನ್ನು ಮುಚ್ಚಿಬಿಟ್ಟರೆ ಜಿಲ್ಲೆಯ ಆರ್ಥಿಕತೆಯ ಮೇಲೆ ಪರಿಣಾಮ ಬೀರಿ ಜನಜೀವನ ಅಸ್ತ್ಯವ್ಯಸ್ತವಾಗುವುದು ನಿಸ್ಸಂಶಯ. ಕಳೆದೊಂದು ವಾರದಿಂದ ರೇಷ್ಮೆ ಗೂಡು ದರಗಳು ಕುಸಿಯುತ್ತಿದ್ದು, ಆರ್ಥಿಕ ವ್ಯವಹಾರದ ಮೇಲೆ ಪರಿಣಾಮ ಬೀರುತ್ತಿದೆ.

ರೇಷ್ಮೆ ಫಿಲೇಚರ್‌ಗಳು ಸುರಕ್ಷಿತವಲ್ಲ! :  ಕೋವಿಡ್ 19  ವೈರಸ್‌ ಸೋಂಕು ಮಾನವ ದೇಹದ ಉಸಿರಾಟದ ವ್ಯವಸ್ಥೆಯನ್ನೇ ಹಾಳಗೆಡುವ ಮಹಾಮಾರಿ. ರೇಷ್ಮೆ ಗೂಡಿನಿಂದ ನೂಲು ತೆಗೆಯುವ ವೇಳೆ ಉತ್ಪತ್ತಿಯಾಗುವ ಅಲೆರ್ಜನ್‌ಗಳು ( ಅಲರ್ಜಿ ಉಂಟು ಮಾಡುವ ವೈರಾಣು) ಕೆಮ್ಮು, ಆಸ್ತಮಾಗಳಿಗೆ ಕಾರಣವಾಗುವುದು ಹೊಸ ವಿಚಾರವೇನಲ್ಲ. ಆಕಸ್ಮಿಕವಾಗಿ ಈ ಶ್ರಮಿಕ ಕಾರ್ಮಿಕ ವರ್ಗಕ್ಕೆ ಸೋಂಕು ತಗುಲಿದರೆ ದೇಹದ ಮೇಲಾಗುವ ಪರಿಣಾಮ ಘೋರ.

 

- ಬಿ.ವಿ.ಸೂರ್ಯ ಪ್ರಕಾಶ್‌

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Magadi; Mother-son passed away due to gas leak from geyser

Magadi; ಗೀಸರ್ ನಿಂದ ಅನಿಲ ಸೋರಿಕೆಯಿಂದ ಮೃತಪಟ್ಟ ತಾಯಿ – ಮಗ

Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ

Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ

Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

1-train

Train;ಬೆಂಗಳೂರು-ಮೈಸೂರು ಮಾರ್ಗದ ಎಲ್ಲಾ ರೈಲುಗಳು ಸ್ಥಗಿತ: ಪ್ರಯಾಣಿಕರಿಗೆ ಅನಾನುಕೂಲ

HD-Kumaraswamy

Bengaluru South; ನಾನು ಅಧಿಕಾರಕ್ಕೆ ಬಂದಾಗ ಇವರಿಟ್ಟ ಹೆಸರು ಕಿತ್ತೆಸೆಯುವೆ: ಎಚ್‌ಡಿಕೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.