ಬೃಹತ್‌ ಮರಗಳ ಹನನ: ಪರಿಸರ ಪ್ರೇಮಿಗಳ ಆಕ್ರೋಶ

ಸಾರ್ವಜನಿಕರು, ವಾಹನ ಸವಾರರ ಪರದಾಟ ಕರೆಂಟ್‌ ಇಲ್ಲದೇ ಕುಡಿಯುವ ನೀರಿಗಾಗಿ ಪರದಾಟ

Team Udayavani, Sep 23, 2021, 6:35 PM IST

ಬೃಹತ್‌ ಮರಗಳ ಹನನ: ಪರಿಸರ ಪ್ರೇಮಿಗಳ ಆಕ್ರೋಶ

ಕುದೂರು: ಒಂದೆಡೆ ಕುಡಿಯುವ ನೀರಿಗಾಗಿ ಜನ ಜಾನುವಾರುಗಳು ತ್ತತ್ತರಿಸುತ್ತಿದ್ದರೆ. ಇನ್ನೊಂದೆಡೆ ರೈತರು ಮಳೆಗಾಗಿ ಮುಗಿಲು ನೋಡುತ್ತಿದ್ದಾರೆ. ಇವೆರಡರ ಮಧ್ಯೆ ಮಳೆ, ಪ್ರಕೃತಿ ಸಮತೋಲನ ಕಾಪಾಡುವುದಕ್ಕೆ ಇದ್ದ ಬೃಹತ್‌ ಮರಗಳ ಹನನವಾಗಿದೆ. ಮರಗಳ ಮಾರಣ ಹೋಮದಿಂದ ಕುದೂರು ರಸ್ತೆಯ ಅಂದ ಹಾಳಾಗಿದೆ. ರಸ್ತೆಯ ಪಕ್ಕದಲ್ಲಿ ಹಸಿರ ಸಿರಿಯಂತೆ ಬೆಳೆದು ನಿಂತಿದ್ದ ರೈಟ್ರೀ ಮರಗಳು ಗರಗಸಕ್ಕೆ ಆಹುತಿಯಾಗಿ ಧರೆಗುರುಳುತ್ತಿರುವುದು ಪರಿಸರ ಪ್ರೇಮಿಗಳಿಗೆ ಬೇಸರ ತರಿಸಿದೆ.

ಶಾಲೆ ಮಕ್ಕಳ ಪರದಾಟ: ಬಸ್‌ ನಿಲ್ದಾಣದ ಪಕ್ಕದಲ್ಲಿರುವ ಬೃಹತ್‌ ಮರಗಳನ್ನು ಕಡಿದಿದ್ದು, ರಸ್ತೆ ಮಧ್ಯೆ ಹಾಕಿರುವುದರಿಂದ ಸಾರ್ವಜನಿಕರಿಗೆ ಮತ್ತು ಶಾಲೆ ಮಕ್ಕಳಿಗೆ ತೀವ್ರ ತೊಂದರೆಯಾಗುತ್ತಿದೆ. ವ್ಯಾಪಾರಸ್ಥರಿಗೂ ತೊಡಕಾಗಿದೆ. ರಸ್ತೆ ಮಧ್ಯೆ ಇರುವ ಮರದ ಕೊಂಬೆಗಳನ್ನು ತೆರವುಗೊಳಿಸಿ ಸಾರ್ವಜನಿಕರ ಓಡಾಟಕ್ಕೆ ಅನುವು ಮಾಡಿಕೊಡಬೇಕಿದೆ.

ನೀರಿಗಾಗಿ ಪರದಾಟ: ಮೂರು ದಿನಗಳಿಂದ ಮರಕಡಿಯುವ ಸಲುವಾಗಿ ವಿದ್ಯುತ್‌ ಕಡಿತಗೊಳಿಸಿದ್ದು, ಸಾರ್ವಜನಿಕರು ಕುಡಿಯುವ ನೀರಿಗಾಗಿ ಕ್ಯೂ ನಿಂತು ಪರದಾಡಬೇಕಿದೆ. ಇದೇ ಸಮಯದಲ್ಲಿ ಬೈಪಾಸ್‌ ರಸ್ತೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೂಡ ದುರಸ್ತಿಗೊಂಡಿದೆ. ಇದರಿಂದ ಕುಡಿಯುವ ನೀರಿಲ್ಲದೇ ಜನ ಪರದಾಡುತ್ತಿದ್ದಾರೆ. ಕಗ್ಗತ್ತಲೆಯಲ್ಲಿ ಕುದೂರು: 3-4 ದಿನಗಳಿಂದ ಮರ ಕಡಿಯುವ ಸಲುವಾಗಿ ವಿದ್ಯುತ್‌ ಕಡಿತಗೊಳಿಸಿದ್ದು ಕಗ್ಗತ್ತಲೆಯಲ್ಲಿ ಜನರು ಕಾಲ ಕಳೆಯುವಂತಾಗಿದೆ. ಶಾಲೆಯಲ್ಲಿ ನಡೆಯುವ ಟೆಸ್ಟ್‌ಗಳಿಗೆ ಮಕ್ಕಳು ತಯಾರಿ ನಡೆಸಲು ಕಷ್ಟಸಾಧ್ಯವಾಗಿದೆ.

ಇದನ್ನೂ ಓದಿ:ದಿಢೀರ್ ರದ್ದಾದ ಪಂದ್ಯ; 27 ಲಕ್ಷ ರೂ. ಬಿರಿಯಾನಿ ಬಿಲ್…ಕಂಗಾಲಾದ ಪಾಕ್ ಕ್ರಿಕೆಟ್ ಮಂಡಳಿ

ಮರಗಳ ಹನನ ಬೇಸರದ ಸಂಗತಿ
ಕಳೆದ ವರ್ಷಗಳ ಹಿಂದೆ ಮರಗಳನ್ನು ಕಡಿಯಬೇಕು ಎಂಬ ಸುದ್ದಿ ಕೇಳಿ ನಾನು ಅದನ್ನು ವಿರೋಧಿಸಿದ್ದೆ. ಈಗ ವಾಹನಗಳು ಒಡಾಡಲು ತೊಂದರೆಯಾಗುತ್ತಿದೆ ಎಂದು ಮರ ಕಡಿಯುತ್ತಿರುವುದು ತುಂಬಾ ಬೇಸರ ತಂದಿದೆ ಎಂದು ರಾಷ್ಟ್ರಪ್ರಶಸ್ತಿ ವಿಜೇತೆ, ಪರಿಸರ ಪ್ರೇಮಿ ಸಾಲು ಮರದ ತಿಮ್ಮಕ್ಕ ಹೇಳಿದರು

ಮೂರು ದಿನಗಳಿಂದ ಮಂದಿಗತಿ ಯಲ್ಲಿ ಮರ ತೆರವು ಕಾರ್ಯ ನಡೆದಿದೆ. ಇದರಿಂದ ವ್ಯಾಪಾರ ನಡೆಸಲು ಕಷ್ಟವಾಗುತ್ತಿದೆ. ಟ್ರಾಫಿಕ್‌ ಸಮಸ್ಯೆ ಹೆಚ್ಚಿದೆ. ಗ್ರಾಹಕರು ಬರುವುದಕ್ಕೆ ತೊಂದರೆಯಾ ಗುತ್ತಿದ್ದು, ಅದಷ್ಟು ಬೇಗ ಮರ ತೆರವುಗೊಳಿಸಿದರೇ ವ್ಯಾಪಾರಕ್ಕೆ ಅನುಕೂಲವಾಗುವುದು.
-ರಾಜಣ್ಣ, ಹಣ್ಣಿನ ವ್ಯಾಪಾರಿ

3-4 ದಿನದಿಂದ ಕರೆಂಟ್‌ ಇಲ್ಲ. ಶುದ್ಧ ನೀರಿನ ಘಟಕ ಬೇರೆ ಕೆಟ್ಟು ಹೋಗಿದೆ. ಗ್ರಾಪಂಯವರು ಬೈಪಾಸ್‌ನಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಸರಿಪಡಿಸಿ ನೀರಿನ ಬವಣೆ ತಪ್ಪಿಸಬೇಕೆಂದರು.
-ಸುಭಾಷ, ಗ್ರಾಮಸ್ಥ,
ಕುದೂರು

 

 

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.