ಸಮಸ್ಯೆಗಳಿಗೆ ಸ್ಪಂದಿಸದಿದ್ರೆ ಜಾಗ ಖಾಲಿ ಮಾಡಿ


Team Udayavani, Jun 7, 2019, 8:21 AM IST

ramanagar-tdy-2..

ರಾಮನಗರದಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ಶಾಸಕಿ ಅನಿತಾ ಕುಮಾರಸ್ವಾಮಿ ನಾಗರಿಕರಿಂದ ಅಹವಾಲು ಸ್ವೀಕರಿಸಿದರು.

ರಾಮನಗರ: ನಾಗರಿಕರ ಸಮಸ್ಯೆಗಳಿಗೆ ಸ್ಪಂದಿಸಲು ಸಾಧ್ಯವಾಗದ ಅಧಿಕಾರಿಗಳು ಜಾಗ ಖಾಲಿ ಮಾಡಿ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ನಗರದ ಶಾಸಕರ ಭವನದಲ್ಲಿ ಗುರುವಾರ ನಡೆದ ಜನಸ್ಪಂದನಾ ಸಭೆಯಲ್ಲಿ ನಾಗರಿಕರಿಂದ ಕೇಳಿ ಬಂದ ಅಧಿಕಾರಿಗಳ ನಿರ್ಲಕ್ಷ್ಯ, ವಿನಾಕಾರಣ ವಿಳಂಬ ಮುಂತಾದ ದೂರುಗಳಿಗೆ ಕೆಂಡಮಂಡಳರಾದ ಶಾಸಕರು ನಾಗರಿಕರ ಸಮಸ್ಯೆಗಳಿಗೆ ಸ್ಪಂದಿಸಲು ಇಚ್ಚಾಶಕ್ತಿ ಇಲ್ಲದ ಅಧಿಕಾರಿಗಳು ಜಾಗ ಖಾಲಿ ಮಾಡಿ ಎಂದರು.

ಆಡಳಿತ ವ್ಯವಸ್ಥೆಯ ಬಗ್ಗೆ ಜನರಿಗೆ ಬೇಸರವಾಗಿದೆ. ತಮ್ಮ ಬಳಿ ನೇರವಾಗಿಯೇ ಹೇಳಿಕೊಳ್ಳುತ್ತಿದ್ದಾರೆ. ಇದಕ್ಕೆಲ್ಲ ಅವಕಾಶ ನೀಡದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕಾಗಿದೆ. ಹಾಗೊಮ್ಮೆ ಆಗದಿದ್ದರೆ ಇಲ್ಲಿಂದ ತೆರಳಿ ಎಂದು ತಿಳಿಸಿದರು.

ಕುಡಿಯುವ ನೀರು ಸಮಸ್ಯೆ ಬಗ್ಗೆಯೇ ಹೆಚ್ಚು ನಾಗರಿಕರು ಆರೋಪಿಸಿದರು. ಈ ವಿಚಾರದಲ್ಲಿಯೂ ಆಕ್ರೋಶಗೊಂಡ ಶಾಸಕರು ಸಂಬಂದಿಸಿದ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಐಜೂರು ಭಾಗದಲ್ಲಿ ನೀರಿನ ಸಮಸ್ಯೆ ದಿನೇ ದಿನೆ ತೀವ್ರಗೊಳ್ಳುತ್ತಿದೆ. ಅಧಿಕಾರಿಗಳು ಸಾರ್ವಜನಿಕರ ಹೋರಾಟ, ಮನವಿಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆ ಭಾಗದ ನಾಗರಿಕರು ಅಲವತ್ತುಕೊಂಡರು.

ರಸ್ತೆ ಅಭಿವೃದ್ಧಿ, ಆರೋಗ್ಯ ಸಂಬಂಧಿತ ಕಾಯಿಲೆಗಳಿಗೆ ಕೆಲವರು ನೆರವು ಕೋರಿದರು. ಕೆಲವರು ತಮ್ಮ ಗ್ರಾಮಗಳಲಿ ಕೊಳವೆ ಬಾವಿಗಳಿಗೆ ಮನವಿ ಮಾಡಿದರು. ಕಸ ವಿಲೇವಾರಿ ಸಮಸ್ಯೆ ಬಗ್ಗೆಯೂ ನಾಗರಿಕರು ದೂರಿದರು. ಮಿನಿ ವಿಧಾನಸೌಧದಲ್ಲಿ ಸಾರ್ವಜನಿಕ ಶೌಚಾಲಯ ವ್ಯವಸ್ಥೆ ಬೇಕಾಗಿದೆ ಎಂದು ಕೆಲವರು ಶಾಸಕರ ಗಮನ ಸೆಳೆದರು.

ಜನಸ್ಪಂದನ ಸಭೆಯಲ್ಲಿ ಜೆಡಿಎಸ್‌ ಮುಖಂಡರು ಮತ್ತು ಕಾರ್ಯಕರ್ತರ ದೊಡ್ಡ ಗುಂಪು ಶಾಸಕರ ಬಳಿ ತಮ್ಮ ಅಹವಾಲು ತೋಡಿಕೊಳ್ಳುತ್ತಿದ್ದ ನಡುವೆಯೇ ಶಾಸಕರು ನಾಗರಿಕರು ತಮ್ಮ ಸಮಸ್ಯೆ ಆಲಿಸಿ ಎಂದು ಅಲವತ್ತುಕೊಂಡರು. ಕೆಲವು ನಾಗರಿಕರು ಪಕ್ಷದ ಕಾರ್ಯಕರ್ತರನ್ನು ಆಮೇಲೆ ಮಾತನಾಡಿಸಿ ಮೊದಲು ನಮ್ಮ ಅಹವಾಲು ಸ್ವೀಕರಿಸಿ ಎಂದು ಮನವಿ ಮಾಡಿದರು. ನಂತರ ಸಾರ್ವಜನಿಕರಿಗೆ ಅವಕಾಶ ದೊರೆಯಿತು. ತಹಶೀಲ್ದಾರ್‌ ರಾಜು, ನಗರಸಭೆ ಆಯುಕ್ತೆ ಬಿ.ಶುಭಾ, ತಾಲೂಕು ಪಂಚಾಯ್ತಿ ಇಓ ಎಂ.ಬಾಬು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಮಾಧ್ಯಮಗಳ ವಿರುದ್ಧ ಕಿಡಿಕಿಡಿ: ಜನಸ್ಪಂದನ ಸಭೆಗೆ ಆಗಮಿಸಿದ ಮಾಧ್ಯಮ ಪ್ರತಿನಿಧಿಗಳವಿರುದ್ಧ ಶಾಸಕಿ ಅನಿತಾ ಕುಮಾರಸ್ವಾಮಿ ಹರಿಹಾಯ್ದರು. ಮನಸ್ಸಿಗೆ ಬಂದಂತೆ ಪ್ರಶ್ನೆಗಳನ್ನು ಕೇಳುವುದಿದ್ದರೆ ತಾವು ಮಾತನಾಡೋದಿಲ್ಲ ಎಂದು ಷರತ್ತು ಹಾಕಿದರು. ನೀಡಿದ ಎಲ್ಲ ಭರವಸೆಗಳನ್ನು ತಕ್ಷಣ ಈಡೇರಿ ಸಲು ಸಾಧ್ಯಲ್ಲ. ಕಾಲಾವಕಾಶ ಬೇಕಾಗುತ್ತದೆ. ದೂರದಲ್ಲಿ ನಿಂತು ಸಮಸ್ಯೆಗಳಿವೆ ಎಂದು ಹೇಳುವುದು ಸುಲಭ. ಆದರೆ ಮಡುವುದು ಎಷ್ಟು ಕಷ್ಟ . ಅದು ತಿಳಿಯಬೇಕಾದರೆ ಮಾಧ್ಯಮ ಪ್ರತಿನಿಧಿಗಳು ಗ್ರಾಮಪಂಚಾಯ್ತಿ ಚುನಾವಣೆಯಲ್ಲಿ ಆಯ್ಕೆಯಾಗಿ ಬಂದು ಜನರ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಿ, ಆಗ ನಿಮಗೆ ಕಷ್ಟ ಏನೆಂದು ಗೊತ್ತಾಗುತ್ತೆ ಎಂದು ಸವಾಲು ಎಸೆದರು.

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Getting good response from people in constituency: D.K. Suresh

Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.