ವಿಮಾನ ನಿಲ್ಲಿಸಿದ್ದರೆ ಕಷ್ಟದ ದಿನ ಬರುತ್ತಿರಲಿಲ್ಲ


Team Udayavani, May 24, 2020, 6:06 AM IST

vimana

ಕುದೂರು: ಭಾರತದಲ್ಲಿ ಕೋವಿಡ್‌ 19 ವ್ಯಾಪಕವಾಗಿ ಹರಡಲು ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಯಡಿಯೂರಪ್ಪ ಕಾರಣ. ಶೀಘ್ರ ವಿಮಾನ ಹಾರಾಟ ನಿಲ್ಲಿಸಿದ್ದರೆ ದೇಶಕ್ಕೆ ಇಷ್ಟು ಕಷ್ಟದ ದಿನಗಳು ಬರುತ್ತಿರಲಿಲ್ಲ ಎಂದು  ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ಬಗ್ಗೆ ವಾಗ್ಧಾಳಿ ನಡೆಸಿದರು.  ಶ್ರೀರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್‌ ನಿಂದ ರಂಜಾನ್‌ ಹಬ್ಬದ ಪ್ರಯುಕ್ತ ಮುಸ್ಲಿಮ ರಿಗೆ ದಿನಸಿ ಕಿಟ್‌ ವಿತರಿಸಿ ಮಾತನಾಡಿದರು.

ರಾಜ್ಯದಲ್ಲಿ ಕೋವಿಡ್‌ 19 ನಿಯಂತ್ರಣ  ದಲ್ಲಿರಲು ಸರ್ಕಾರವನ್ನು ಸಕಾಲದಲ್ಲಿ ಎಚ್ಚರಿ ಸಿದ್ದೇ ಕಾರಣ. ಬಿಜೆಪಿ ಪಕ್ಷವನ್ನು ನಂಬಬೇಡಿ. ಜೆಡಿಎಸ್‌ ಪಕ್ಷದಿಂದ ಎಚ್ಚರದಿಂದಿರಬೇಕು. ಮಾಗಡಿ ಮಾಜಿ ಶಾಸಕ ಎಚ್‌.ಸಿ. ಬಾಲಕೃಷ್ಣ  ಅವರನ್ನು ಮುಂದಿನ ಚುನಾವಣೆಯಲ್ಲಿ ಗೆಲ್ಲಿಸಿ ಎಂದು ಹೇಳಿದರು. ಮಾಜಿ ಶಾಸಕ ಎಚ್‌.ಸಿ.ಬಾಲಕೃಷ್ಣ ಮಾತ ನಾಡಿ, ಮಾಗಡಿ ತಾಲೂಕಾದ್ಯಂತ ರೈತರ  ಹೊಲ, ತೋಟಗಳಲ್ಲಿ ಬೆಳೆದಿದ್ದ ತರಕಾರಿ ಖರೀದಿಸಿ ತಾಲೂಕಿನ ಜನರಿಗೆ  ಹಂಚುವ  ಕೆಲಸ ಮಾಡಿದ್ದೇವೆ.

ರಾಜ್ಯದಲ್ಲೇ ಮೊಟ್ಟ ಮೊದಲು ಸರ್ಕಾರ ಜಾರಿಗೆ ಬರುವ  ಮುನ್ನವೇ ಸವಿತಾ ಸಮಾಜದವರಿಗೆ ಮಾಸಿಕ 500 ರೂ ತಲುಪುವಂತೆ ಮಾಡಲಾಗಿದೆ ಎಂದರು. ಸಂಸದ ಡಿ.ಕೆ.ಸುರೇಶ್‌ ಮಾತನಾಡಿ, ಮುಸ್ಲಿಮರು ಕೋವಿಡ್‌ 19ದಿಂದಾಸಗಿ ಅತ್ಯಂತ  ಸರಳವಾಗಿ ರಂಜಾನ್‌ ಆಚರಣೆ ಮಾಡುತ್ತಿ ದ್ದಾರೆ. ಅವರಿಗೆ ಪ್ರತಿ ವರ್ಷ ಆಹಾರದ ಕಿಟ್‌ ವಿತರಿಸುತ್ತ ಬಂದಿದ್ದು, ಈ ಬಾರಿಯೂ ಅದೇ ಸಂಪ್ರದಾಯ ಮುಂದುವರಿಸಿದ್ದೇನೆ ಎಂದರು.  ಮಾಜಿ ಸಚಿವ ಜಮೀರ್‌ ಅಹಮದ್‌, ವಿಧಾನ ಪರಿಷತ್‌ ಸದಸ್ಯ ಎಚ್‌.ಎಂ.ರೇವಣ್ಣ ಮಾತನಾಡಿದರು.

ಕುದೂರು ಹೋಬಳಿ ಆಶಾ ಕಾರ್ಯಕರ್ತೆಯರಿಗೆ 3000 ರೂ.ಗಳ  ಸಹಾಯ ಧನ, ನಂದಿನಿ ಸಿಹಿ ಕಿಟ್‌ ವಿತರಿಸಲಾಯಿತು.  ಮಾಜಿ ಸಚಿವ ಚಲುವರಾಯಸ್ವಾಮಿ, ಜಿಪಂ ಸದಸ್ಯ ಎಚ್‌.ಎನ್‌.ಅಶೋಕ್‌, ಅಣ್ಣೇ ಗೌಡ, ಬಮೂಲ್‌ ಅಧ್ಯಕ್ಷ ನರಸಿಂಹಮೂರ್ತಿ, ನಿರ್ದೇಶಕ ಡಾ.ರಾಜಣ್ಣ, ಕುದೂರು ಗ್ರಾಪಂ ಅಧ್ಯಕ್ಷ ಕೆ.ಟಿ. ವೆಂಕಟೇಶ್‌, ಯುವ ಮುಖಂಡ ಯತೀಶ್‌, ಚಂದ್ರುಶೇಖರ್‌, ಹನುಮಂತರಾಯಪ್ಪ, ಶ್ರೀಗಿರಿಪುರ  ಪ್ರಕಾಶ್‌,ಸಿದ್ದಲಿಂಗಪ್ಪ, ಶಿವಪ್ರಸಾದ್‌, ಹೊನ್ನಪ್ಪ, ಅಬ್ದುಲ್‌ ಜಾವಿದ್‌ ಇತರರು ಇದ್ದರು.

ಪೊಲೀಸರ ಹರಸಾಹಸ, ಸಾರ್ವಜನಿಕರ ಆಕ್ರೋಶ: ಜನರನ್ನು ನಿಯಂತ್ರಿಸಲು ಪೊಲೀಸರು ಉರಿಬಿಸಿಲಿನಲ್ಲಿ ಹರಸಾಹಸ ಪಡುವಂತಾಯಿತು. ಕೋವಿಡ್‌ 19ದಂತಹ ಸಂಕಷ್ಟದ ಸಂದರ್ಭದಲ್ಲಿ ಹೀಗೆ ಕಾರ್ಯಕ್ರಮ ಮಾಡಿ ಜನಸಂದಣಿ  ಮಾಡದೆ ಮುಸ್ಲಿಮರ ಮನೆಗಳಿಗೆ ಕಿಟ್‌ ನೀಡಿದ್ದರೆ ಸರಿಹೋಗು ತ್ತಿತ್ತು. ಚುನಾವಣೆ ಗಿಮಿಕ್‌ ರೀತಿ ದೊಂಬಿ ಕಾರ್ಯಕ್ರಮ ಮಾಡಿದ್ದು, ಸಾರ್ವಜನಿಕ ರಲ್ಲಿ ಆಕ್ರೋಶ ಮೂಡಿಸಿತು.

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Getting good response from people in constituency: D.K. Suresh

Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.