ಜಿಲ್ಲೆಯಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮ

ಸ್ವಾತಂತ್ರ್ಯ ಹೋರಾಟಗಾರರಿಗೆ ನಮನ | ಶಾಲೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ

Team Udayavani, Aug 16, 2019, 3:08 PM IST

rn-tdy-1

ಕನಕಪುರದ ಮುನ್ಸಿಪಲ್ ಹೈಸ್ಕೂಲ್ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 73ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಯಿತು.

ಕನಕಪುರ: ಭಾರತಕ್ಕೆ ಸ್ವಾತಂತ್ರ್ಯ ಸಿಗಲು ಅನೇಕ ಹೋರಾಟಗಾರರ ಶ್ರಮವಿದೆ. ಗಾಂಧೀಜಿ, ಸುಭಾಷ್‌ ಚಂದ್ರ ಬೋಸ್‌, ಸರ್ದಾರ್‌ ವಲ್ಲಭಬಾಯಿ ಪಟೇಲ್ ಸೇರಿದಂತೆ ಆಯಾ ಪ್ರಾಂತ್ಯಗಳ ರಾಜ ಮನೆತನಗಳ ತ್ಯಾಗ ಮತ್ತು ಬಲಿದಾನವಿದೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದರು.

ನಗರದ ಮುನ್ಸಿಪಲ್ ಹೈಸ್ಕೂಲ್ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ 73ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಸ್ವಾತಂತ್ರ್ಯ ಹೋರಾಟದ ಸ್ವರೂಪ ಬೇರೆ ಬೇರೆಯಾದರೂ, ಅವರ ತ್ಯಾಗ ಮತ್ತು ಬಲಿದಾನ ದೇಶವಾಸಿಗಳಿಗೆ ಎಂದು ಮರೆಯಲು ಸಾಧ್ಯವಿಲ್ಲ. ಕೆಲವರ ಸ್ವಾರ್ಥದಿಂದ ನೂರಾರು ವರ್ಷಗಳ ಕಾಲ ಈ ದೇಶ ಪರಕೀಯರ ಆಳ್ವಿಕೆಯಲ್ಲಿತ್ತು. ಪರಕೀಯರಿಂದ ದೇಶವನ್ನು ಮುಕ್ತವಾಗಲು ಅನೇಕ ಹೋರಾಟಗಾರರ ತ್ಯಾಗ, ಬಲಿದಾನವಿದೆ ಎಂದರು.

ಅನೇಕರಿಗೆ ಸ್ವಾತಂತ್ರ್ಯದ ಮಹತ್ವ ತಿಳಿದಿಲ್ಲ: ಇಂದಿಗೂ ಅನೇಕರಿಗೆ ಸ್ವಾತಂತ್ರ್ಯದ ಮಹತ್ವ ತಿಳಿಯುತ್ತಿಲ್ಲ. ಸ್ವತಂತ್ರ್ಯ ಭಾರತದಲ್ಲಿ ಬ್ರಿಟಷರು ಬಿಟ್ಟುಹೋದ ಗುಲಾಮಗಿರಿ ಪದ್ಧತಿಯನ್ನು ಅನುಸರಿಸುತ್ತಿದ್ದಾರೆ. ಸ್ವತಂತ್ರ ಭಾರತಕ್ಕೆ ವಲ್ಲಭಾಯ್‌ ಪಟೇಲ್, ಲಾಲ್ ಬಹುದ್ದೂರ್‌ ಶಾಸ್ತ್ರಿ, ಅಟಲ್ ಬಿಹಾರಿ ವಾಜಪೇಯಿಯಂತ ಆನೇಕ ಮಹನೀಯರು ಈ ದೇಶಕ್ಕೆ ಬದ್ರಬುನಾದಿ ಹಾಕಿ ಕೊಟ್ಟಿದ್ದಾರೆ. ಒಗ್ಗಟ್ಟಿನ ಮಂತ್ರ ಪಠಿಸಿ ಈ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಬೇಕಾಗಿದೆ ಎಂದು ತಿಳಿಸಿದರು.

ಸ್ವಾತಂತ್ರ್ಯ ದಿನಾಚರಣೆ ಏಕತೆ ಬೆಸೆಯುವ ಹಬ್ಬ: ತಹಶೀಲ್ದಾರ್‌ ಆನಂದಯ್ಯ ಮಾತನಾಡಿ, ಜಾತಿ, ಧರ್ಮ, ಪಂಗಡ, ಭಾಷೆಗಳನ್ನು ಹೊರತು ಪಡಿಸಿ ದೇಶವಾಸಿಗಳನ್ನೆಲ್ಲ ಒಗ್ಗೂಡಿಸುವ, ಸಹೋದರತ್ವವನ್ನು ಸಾರುವ ಮತ್ತು ಏಕತೆಯನ್ನು ಬೆಸೆಯುವ ಹಬ್ಬ ಸ್ವಾತಂತ್ರ್ಯ ದಿನಾಚರಣೆ. ಎರಡು ಶತಮಾನಗಳ ಕಾಲ ಆಂಗ್ಲರ ಆಳ್ವಿಕೆಯಲ್ಲಿ ಬಲಿಪಶುಗಳಾಗಿ, ನಮ್ಮ ತನವನ್ನು ಕಳೆದುಕೊಂಡು ಬದುಕುತ್ತಿದ್ದ ನಮಗೆ ದೂರೆತ ಸ್ವಾತಂತ್ರ್ಯ ಬಹಳ ಮಹತ್ವದ್ದು. ಆನೇಕ ಹೋರಾಟಗಾರರ ಶ್ರಮವನ್ನು ಇಂದಿನ ಯುವಕರು ಅರಿತುಕೊಳ್ಳಬೇಕು. ಸ್ವಾಂತಂತ್ರ್ಯ ದಿನಾಚರಣೆ ಎಂಬ ಹಬ್ಬವನ್ನು ಮನೆಯ ಹಬ್ಬವನ್ನಾಗಿ ಆಚರಿಸಬೇಕು ಎಂದು ಹೇಳಿದರು.

ಈ ವೇಳೆ ತಾಲೂಕಿನ ಅನೇಕ ಶಾಲೆಗಳ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೃಷ್ಣಮೂರ್ತಿ, ತಾಪಂ ಅಧ್ಯಕ್ಷ ಧನಂಜಯ್‌, ನಗರಸಭೆ ಮಾಜಿ ಅಧ್ಯಕ್ಷ ದಿಲೀಪ್‌, ತಾಪಂ ಇಒ ಶಿವರಾಮು, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಕುಮಾರ್‌ ಸೇರಿದಂತೆ ಸಾರ್ವಜನಿಕರು, ವಿವಿಧ ಶಾಲೆ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.