ಸಮರ್ಪಕ ಪರಿವರ್ತಕ ಅಳವಡಿಕೆಗೆ ಒತ್ತಾಯ
Team Udayavani, Jul 9, 2019, 1:25 PM IST
ಮಾಗಡಿ ಪಟ್ಟಣದ ಬೆಸ್ಕಾಂ ಎಂಜಿನಿಯರ್ಗೆ ರೈತ ಸಂಘದ ಅಧ್ಯಕ್ಷ ಹೊಸಪಾಳ್ಯದ ಲೋಕೇಶ್ ಮನವಿ ಪತ್ರ ಸಲ್ಲಿಸಿದರು.
ಮಾಗಡಿ: ರೈತರ ಪಂಪ್ ಸೆಟ್ಗಳಿಗೆ ಸಮರ್ಪಕವಾಗಿ ಪರಿವರ್ತಕ (ಟಿಸಿ) ಅಳವಡಿಸುವಂತೆ ಒತ್ತಾಯಿಸಿ ಬೆಸ್ಕಾಂ ಎಂಜಿನಿಯರ್ ಅವರಿಗೆ ತಾಲೂಕು ರೈತ ಸಂಘದ ಅಧ್ಯಕ್ಷ ಹೊಸಪಾಳ್ಯದ ಲೋಕೇಶ್ ಮನವಿ ಪತ್ರ ಸಲ್ಲಿಸಿದರು.
ಪಟ್ಟಣ ಬೆಸ್ಕಾಂ ಕಚೇರಿಗೆ ರೈತರೊಂದಿಗೆ ಭೇಟಿ ನೀಡಿದ ಲೋಕೇಶ್ ಅವರು, ತಾಲೂಕಿನಲ್ಲಿ ಮಳೆಯಿಲ್ಲ. ಬರಗಾಲ ಇರುವ ಪಂಪ್ಸೆಟ್ನಿಂದ ನೀರನ್ನು ತಮ್ಮ ಹೊಲಗದ್ದೆ ತೋಟಗಳಿಗೆ ಹಾಯಿಸಿಕೊಳ್ಳಲು ಕೂಡಲೇ ಪರಿವರ್ತಕ ಅಳವಡಿಸುವಂತೆ ಒತ್ತಾಯಿಸಿದರು. ಈ ಕುರಿತು ರೈತರ ಕುಂದು ಕೊರತೆ ಸಭೆ ಕರೆಯುವಂತೆ ಮನವಿ ಮಾಡಿದ್ದರೂ ಸಭೆ ನಡೆಸಿಲ್ಲ. ಸಭೆಗೂ ಬರುತ್ತಿಲ್ಲ ದಿನೇ ರೈತರ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ. ನೀರಿಗಾಗಿ ಆಹಾಕಾರ ಉಂಟಾಗುತ್ತಿದೆ ಎಂದು ಹೇಳಿದರು.
ಶೀಘ್ರದಲ್ಲಿಯೇ ಬೆಸ್ಕಾಂ ಎಂಜಿನಿಯರ್ಗಳು ರೈತರ ಪಂಪ್ ಸೆಟ್ಗಳಿಗೆ ಪರಿವರ್ತಕ ಅಳವಡಿಸದಿದ್ದರೆ ರೈತರೆಲ್ಲರೂ ಒಗ್ಗೂಡಿ ಬೆಸ್ಕಾಂಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ವೇಳೆ ರೈತ ಸಂಘದ ಕಾರ್ಯದರ್ಶಿ ಮಧುಗೌಡ, ಜಯರಾಂ, ಶಿವಣ್ಣ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ