ಅಕ್ರಮ ಒತ್ತುವರಿ ಭೂಮಿ ತೆರವುಗೊಳಿಸಲು ಒತ್ತಾಯ

ಮಾಯಸಂದ್ರ, ವಿರೂಪಾಪುರ, ಲಕ್ಕೇನಹಳ್ಳಿ ಬೆಟ್ಟೇಗೌಡನಪಾಳ್ಯದ ಗ್ರಾಮಸ್ಥರಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ

Team Udayavani, Jul 27, 2019, 12:07 PM IST

RN-TDY-2

ಅಕ್ರಮ ಒತ್ತುವರಿ ತೆರವುಗೊಳಿಸಲು ಗ್ರಾಮಸ್ಥರು ಮಾಗಡಿ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಟಿ.ಜಯಣ್ಣಗೆ ಮನವಿ ಸಲ್ಲಿಸಿದರು.

ಮಾಗಡಿ: ಮಾಯಸಂದ್ರ ಗ್ರಾಮದಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿ ರುವುದನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಮಾಯಸಂದ್ರ, ವಿರೂಪಾಪುರ, ಲಕ್ಕೇನಹಳ್ಳಿ ಬೆಟ್ಟೇಗೌಡನಪಾಳ್ಯದ ಗ್ರಾಮಸ್ಥರು ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ತಾಲೂಕಿನ ತಿಪ್ಪಸಂದ್ರ ಹೋಬಳಿ ಮಾಯಸಂದ್ರ ಗ್ರಾಮದ ಸರ್ವೇ 44/ಪಿ1 ನಂಬರ್‌ ನ ಅಮೃತ ಮಹಲ್ ಕಾವಲ್ನಲ್ಲಿ |23 ಎಕರೆ 24 ಗುಂಟೆ ಸರ್ಕಾರಿ ಜಮೀನಿದೆ. ಸದರಿ ನಂಬರ್‌ ಪೈಕಿ 2.10 ಎಕರೆ ಜಮೀನನ್ನು ಸರ್ಕಾರ ಜಯಲಕ್ಷ್ಮಮ್ಮ ಕೋಂ ಕೆಂಪಯ್ಯ ಎಂಬುವರ ಹೆಸರಿಗೆ ಮಂಜೂರು ಮಾಡಿದೆ. ಉಳಿಕೆ ಜಮೀನು ಸರ್ಕಾರಿ ಜಮೀನು ಆಗಿದೆ. ಆದರೂ ಸಹ ಕೆಂಪಯ್ಯ ಎಂಬುವರು ಸದರಿ ಸರ್ವೇ ನಂಬರ್‌ನ ಎಲ್ಲಾ ಭೂಮಿಯೂ ನನ್ನದೇ ಎಂದು ಒತ್ತುವರಿ ಮಾಡಿಕೊಂಡು ಬೇಲಿ ಹಾಕಿಕೊಂಡಿದ್ದಾನೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒತ್ತುವರಿ ಜಾಗಕ್ಕೆ ಬೇಲಿ: ಜಿಪಂ ಮಾಜಿ ಅಧ್ಯಕ್ಷ ಎಂ.ಕೆ. ಧನಂಜಯ ಮಾತನಾಡಿ, ಸರ್ಕಾರಿ ಜಮೀನಿನಲ್ಲಿ ಈ ಭಾಗದ ರೈತರು ತಮ್ಮ ದನಕರುಗಳನ್ನು ಮೇಯಿಸಲು ಹುಲ್ಲುಗಾವಲು ಮಾಡಿಕೊಂಡಿದ್ದರು. ಆದರೀಗ ಕೆಂಪಯ್ಯ ಎಂಬುವರು ಯಾವ ರೈತರಿಗೂ ದನಕರುಗಳನ್ನು ಮೇಯಿಸಲು ಬಿಡದೇ ಒತ್ತುವರಿ ಮಾಡಿಕೊಂಡು ಬೇಲಿ ಹಾಕಿಕೊಂಡಿದ್ದಾರೆ. ಮುಂದಿನ ಜಮೀನಿನ ರೈತರು ತಮ್ಮ ಹೊಲಬಿತ್ತನೆ ಮಾಡಲು ಹೋಗಲಾಗುತ್ತಿಲ್ಲ. ದನಕರುಗಳಿಗೂ ಮೇವಿಲ್ಲ. ರೆವಿನ್ಯೂ ಅಧಿಕಾರಿಗಳ ಕಮ್ಮಕ್ಕಿನಿಂದ ಕೆಂಪಯ್ಯ ಮೆರೆಯುತ್ತಿದ್ದಾರೆ. ತಹಶೀಲ್ದಾರ್‌ ಸ್ಥಳಕ್ಕೆ ಭೇಟಿ ನೀಡಿ, ಒತ್ತುವರಿ ಜಮೀನು ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.

ದನಮೇಯಿಸಲು ಬಿಟ್ಟುಕೊಡಿ: ಹೊನ್ನಪುರ ಶಿವಪ್ರಸಾದ್‌ ಮಾತನಾಡಿ, ಗ್ರಾಮಸ್ಥರೆಲ್ಲರೂ ಒಗ್ಗೂಡಿ ತಾಲೂಕು ಕಚೇರಿ ಮುಂದೆ ಜಮಾಯಿಸಿ, ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ ಕೆಂಪಯ್ಯ ಅವರನ್ನು ಎತ್ತಂಗಡಿ ಮಾಡಿಸಬೇಕು ತಹಶೀಲ್ದಾರ್‌ಗೆ ಮನವಿ ಮಾಡಿದ್ದೇವೆ. ಕೂಡಲೇ ಸರ್ಕಾರ ಭೂಮಿಯನ್ನು ವಶಪಡಿಸಿಕೊಂಡು ಗ್ರಾಮಸ್ಥರಿಗೆ ದನಮೇಯಿಸಲು ಬಿಟ್ಟುಕೊಡಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್‌ ಟಿ. ಜಯಣ್ಣ ಮತ್ತು ಶಿರಸ್ತೇದಾರ್‌ ಜಗದೀಶ್‌ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ, ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಮುಖಂಡರಾದ ಮರೂರು ಮರಿಗೌಡ, ರಂಗಸ್ವಾಮಿ, ಸುದರ್ಶನ್‌, ವಿಎಸ್‌ಎಸ್‌ಎನ್‌ ನಿರ್ದೇಶಕ ಮೂರ್ತಿ, ರವಿಕುಮಾರ್‌, ಶಿವಣ್ಣ, ಶರ್ಮ ಹಾಜರಿದ್ದರು.

ಟಾಪ್ ನ್ಯೂಸ್

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಸಕ ಇಕ್ಬಾಲ್ ಹುಸೇನ್ ವಿಡಿಯೋ ವೈರಲ್ ಕೇಸ್: ಇಬ್ಬರ ಬಂಧನ

Ramanagara ಶಾಸಕ ಇಕ್ಬಾಲ್ ಹುಸೇನ್ ವಿಡಿಯೋ ವೈರಲ್ ಕೇಸ್: ಇಬ್ಬರ ಬಂಧನ

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

7-kundapura

Rank: ಕುಂದಾಪುರ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ರ್‍ಯಾಂಕ್ ಪಡೆದ ಶುಕ್ತಿಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.