ಮನೆಬಾಗಿಲಿಗೆ ಸಮಗ್ರ ಕೃಷಿ ಮಾಹಿತಿ

ಜೂ.10ರಿಂದ ಜಿಲ್ಲೆಯಲ್ಲಿ ಅಭಿಯಾನ • ಕೃಷಿ ಉಪನಿರ್ದೇಶಕ ಜಿ.ಎಚ್.ಯೋಗೀಶ್‌ ಸ್ಪಷ್ಟನೆ

Team Udayavani, Jun 2, 2019, 12:22 PM IST

ramanagar-tdy-2..
ರಾಮನಗರ: ಜೂನ್‌ 10 ರಿಂದ 30ರವರೆಗೆ ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲೂ ರೈತರಿಗೆ ಕೃಷಿ ಇಲಾಖೆ ಸೌಲಭ್ಯ ಹಾಗೂ ಅಗತ್ಯ ಸಲಹೆಗಳ ಸಮಗ್ರ ಮಾಹಿತಿ ನೀಡುವ ಅಭಿಯಾನ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಕೃಷಿ ಇಲಾಖೆ ಉಪನಿರ್ದೇಶಕ ಜಿ.ಎಚ್.ಯೋಗೇಶ್‌ ತಿಳಿಸಿದರು.

ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಶನಿವಾರ ಹಮ್ಮಿಕೊಂಡಿದ್ದ ಜನಪರ ಮಾಹಿತಿ-ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಿಲ್ಲೆಯ ರೈತರ ಮನೆಬಾಗಿಲಿಗೆ ಬೆಳೆ ವೈದ್ಯಕೀಯ ಪರೀಕ್ಷೆ, ವ್ಯವಸಾಯ ವೆೆಚ್ಚದಲ್ಲಿ ಕಡಿತ, ಕೃಷಿಯೊಂದಿಗೆ ಪೂರಕ ಉಪ ಕಸುಬುಗಳಾದ ಪಶುಸಂಗೋಪನೆ, ರೇಷ್ಮೆ, ಮೀನುಗಾರಿಕೆ ಮುಂತಾದ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುವುದು. ವ್ಯವಸಾಯ ವೆಚ್ಚವನ್ನು ಕಡಿಮೆ ಮಾಡಿಕೊಳ್ಳುವ ವಿಚಾರದಲ್ಲಿ ಸಲಹೆಗಳನ್ನು ನೀಡಲಾಗುವುದು ಎಂದರು.

ಅಭಿಯಾನದ ವೇಳೆ ಕೃಷಿ ವಸ್ತು ಪ್ರದರ್ಶನ, ಸ್ಥಬ್ಧ ಚಿತ್ರ ಹಾಗೂ ರೈತರೊಂದಿಗೆ ಸಂವಾದ ಕಾರ್ಯಕ್ರಮವನ್ನು ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ನಡೆಸುವುದಾಗಿ, ಕೃಷಿ ವಿಜ್ಞಾನಿಗಳು, ಮಾದರಿ ರೈತರು ಮತ್ತು ತಜ್ಞರೊಂದಿಗೆ ವಿಚಾರ ವಿನಿಮಯ ನಡೆಸಲಾಗುವುದು ಎಂದರು.

ಜಿಲ್ಲೆಯಲ್ಲಿ 2,71,448 ರೈತರು: ಜಿಲ್ಲೆಯಲ್ಲಿ 2,71,448 ರೈತರಿದ್ದಾರೆ. ಈ ಪೈಕಿ ಅತಿ ಸಣ್ಣ ರೈತರ ಸಂಖ್ಯೆ 2,09,458, ಸಣ್ಣ ರೈತರು 41,191, ಮಧ್ಯಮ ರೈತರು 20,524, ದೊಡ್ಡ ರೈತರು 275 ಮಂದಿ ಇದ್ದಾರೆ. ಪರಿಶಿಷ್ಟ ಜಾತಿಯ 25,866 ರೈತರು ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ 2,038 ರೈತರಿದ್ದು ಜಿಲ್ಲೆಯಾದ್ಯಂತ 18 ರೈತ ಸಂಪರ್ಕ ಕೇಂದ್ರಗಳು, 165 ಬಿತ್ತ‌ನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕ ಮಾರಾಟಗಾರರು, ನೂರಕ್ಕೂ ಅಧಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಒಂದು ಮಣ್ಣು ಪರೀಕ್ಷಾ ಪ್ರಯೋಗಾಲಯ ಮತ್ತು ಒಂದು ಕೃಷಿ ವಿಜ್ಞಾನ ಕೇಂದ್ರವಿದೆ ಎಂದು ತಮ್ಮ ಇಲಾಖೆಯ ಮಾಹಿತಿ ನೀಡಿದರು.

ರೈತರ ವಾಟ್ಸಪ್‌ ಗ್ರೂಫ್: ಜಿಲ್ಲೆಯಲ್ಲಿ ರೈತರಿಗಾಗಿ ವಿಶೇಷ ಕೃಷಿ ಚೇತನ ಅಭಿಯಾನದಡಿ ಗ್ರಾಮಪಂಚಾಯ್ತಿ ಮತ್ತು ಹೋಬಳಿ ಮಟ್ಟದಲ್ಲಿ ರೈತರು ಮತ್ತು ಅಧಿಕಾರಿಗಳನ್ನೊಳಗೊಂಡ ನೂರಕ್ಕೂ ಅಧಿಕ ವಾಟ್ಸ್‌ ಆ್ಯಪ್‌ ಗ್ರೂಪ್‌ಗಳಿದ್ದು 6500ರೈತರು ಗ್ರೂಪ್‌ನಲ್ಲಿದ್ದಾರೆ. ಈ ಎಲ್ಲಾ ರೈತರಿಗೆ ಗ್ರೂಪ್‌ನ ಮೂಲಕ ಸರ್ಕಾರದ ಕಾರ್ಯಕ್ರಮಗಳ ಮಾಹಿತಿಯನ್ನು ತಲುಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. ರೈತರ ಸಹಾಯವಾಣಿ: ಜಿಲ್ಲೆಯ ರೈತರು ಯಾವುದೇ ಮಾಹಿತಿ, ಸಮಸ್ಯೆ ಅಥವಾ ಅಹವಾಲು ಸಲ್ಲಿಸಲು ಹತ್ತಿರದ ರೈತ ಸಂಪರ್ಕ ಕೇಂದ್ರ ಸಂಪರ್ಕಿಸ ಬಹುದಾಗಿದೆ ಅಥವಾ ದೂರವಾಣಿ ಸಂಖ್ಯೆ 18004257919 ಗೆ ಸಂಪರ್ಕಿಸಬಹುದು ಎಂದು ತಿಳಿಸಿದರು.

29,112 ಮಣ್ಣು ಮಾದರಿ ಸಂಗ್ರಹ: ಮಣ್ಣು ಆರೋಗ್ಯ ಚೀಟಿ ಕಾರ್ಯಕ್ರಮ ಯೋಜನೆಯಡಿ 29112 ಮಾದರಿಗಳನ್ನು ಸಂಗ್ರಹಿಸಿದ್ದು 239053 ಮಣ್ಣು ಆರೋಗ್ಯ ಚೀಟಿಗಳನ್ನು ರೈತರಿಗೆ ವಿತರಿಸಲಾಗಿದೆ. ಮಣ್ಣಿನಲ್ಲಿರುವ ಪೋಷಕಾಂಶಗಳನ್ನು ಹೆಚ್ಚಿಸಲು ಸರಿಯಾದ ರಸಗೊಬ್ಬರದ ಬಳಕೆ ಮಾಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ದಕ್ಷಿಣ ಕರ್ನಾಟಕದ ಜಿಲ್ಲೆಗಳು 2-3 ವರ್ಷಕ್ಕೊಮ್ಮೆ ಬರ ಪೀಡಿತ ಪ್ರದೇಶಗಳಾಗುವುದರಿಂದ ಸರ್ಕಾರವು ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫ‌ಸಲ್ ಬಿಮಾ (ವಿಮಾ) ಯೋಜನೆಯನ್ನು ರೂಪಿಸಿದ್ದು ಇಚ್ಚೆಯುಳ್ಳ ಬೆಳೆ ಸಾಲ ಪಡೆಯದ ರೈತರು ನಿಗಧಿತ ಅರ್ಜಿಯೊಂದಿಗೆ ಭೂಮಿ ದಾಖಲೆಗಳಾದ ಪಹಣಿ, ಖಾತೆ, ಬ್ಯಾಂಕ್‌ ಪಾಸ್‌ಪುಸ್ತಕ, ಆಧಾರ್‌ ಕಾರ್ಡ್‌ನ್ನು ಹತ್ತಿರದ ಬ್ಯಾಂಕ್‌ಗಳಲ್ಲಿ ನೊಂದಾಯಿಸಿಕೊಳ್ಳಬಹುದು ಎಂದರು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಎಸ್‌. ಶಂಕರಪ್ಪ ಸ್ವಾಗತಿಸಿ, ವಂದಿಸಿದರು

ಅನುದಾನ ಬಿಡುಗಡೆ, ಶೇ.98 ಗುರಿ ಸಾಧನೆ:

2018-19ನೇ ಸಾಲಿನಲ್ಲಿ ಜಿಲ್ಲೆಗೆ 26.39ಕೋಟಿ ರೂ ಅನುದಾನ ಬಿಡುಗಡೆಯಾಗಿದ್ದು ಶೇ.98ರಷ್ಟು ಗುರಿ ಸಾಧನೆಯಾಗಿದೆ. 197766 ರೈತರಿಗೆ 3290 ಕ್ವಿಂಟಾಲ್ ವಿವಿಧ ಬೆಳೆಗಳ ಬಿತ್ತನೆ ಬೀಜಗಳನ್ನು ವಿತರಣೆ ಮಾಡಲಾಗಿದೆ ಎಂದು ಹೇಳಿದರು. ಕೃಷಿ ಭಾಗ್ಯ ಯೋಜನೆಯಡಿ ರೈತರಿಗೆ ಕೃಷಿ ಹೊಂಡ, ಪಾಲಿಥೀನ್‌ ಹೊದಿಕೆ, ಡೀಸೆಲ್ ಪಂಪ್‌ ಸೆಟ್, ತುಂತುರು ನೀರಾವರಿ, ನೆರಳು ಪರದೆ, ಪಾಲಿಹೌಸ್‌ ಮುಂತಾದ ಸೌಲಭ್ಯಗಳಿಗೆ ಸಬ್ಸಿಡಿ ಮತ್ತು ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದರು. ರೈತರಿಗೆ ಸಕಾಲದಲ್ಲಿ ಮತ್ತು ಕಡಿಮೆ ಬಾಡಿಗೆ ದರದಲ್ಲಿ ಕೃಷಿ ಯಂತ್ರೋಪಕರಣಗಳನ್ನು ಒದಗಿಸಲು ರಾಜ್ಯದ ಗ್ರಾಮೀಣ ಪ್ರದೇಶದ ಹೋಬಳಿಗಳಲ್ಲಿ ವಿವಿಧ ಸಂಸ್ಥೆಗಳ ಮೂಲಕ ಬಾಡಿಗೆ ಆಧಾರಿತ ಸೇವಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ರಾಮನಗರ ತಾಲೂಕಿನ ಕೈಲಾಂಚ, ಮಾಗಡಿ ತಾಲೂಕಿನ ಕುದೂರು, ಚನ್ನಪಟ್ಟಣ ತಾಲೂಕಿನ ವಿರೂಪಾಕ್ಷಿಪುರ ಹಾಗೂ ಕನಕಪುರ ತಾಲೂಕಿನ ದೊಡ್ಡಮರಳವಾಡಿ ಹೋಬಳಿಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾುೕಣಾಭಿವೃದ್ದಿ ಸಂಸ್ಥೆವತಿಯಿಂದ ಕಡಿಮೆ ಬಾಡಿಗೆ ದರದಲ್ಲಿ ಕೃಷಿ ಯಂತ್ರೋಪಕರಣಗಳನ್ನು ಒದಗಿಸುವ ಕಾರ್ಯ ನಡೆಯುತ್ತಿದೆ ಎಂದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.