ಮನೆಬಾಗಿಲಿಗೆ ಸಮಗ್ರ ಕೃಷಿ ಮಾಹಿತಿ
ಜೂ.10ರಿಂದ ಜಿಲ್ಲೆಯಲ್ಲಿ ಅಭಿಯಾನ • ಕೃಷಿ ಉಪನಿರ್ದೇಶಕ ಜಿ.ಎಚ್.ಯೋಗೀಶ್ ಸ್ಪಷ್ಟನೆ
Team Udayavani, Jun 2, 2019, 12:22 PM IST
ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಶನಿವಾರ ಹಮ್ಮಿಕೊಂಡಿದ್ದ ಜನಪರ ಮಾಹಿತಿ-ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಿಲ್ಲೆಯ ರೈತರ ಮನೆಬಾಗಿಲಿಗೆ ಬೆಳೆ ವೈದ್ಯಕೀಯ ಪರೀಕ್ಷೆ, ವ್ಯವಸಾಯ ವೆೆಚ್ಚದಲ್ಲಿ ಕಡಿತ, ಕೃಷಿಯೊಂದಿಗೆ ಪೂರಕ ಉಪ ಕಸುಬುಗಳಾದ ಪಶುಸಂಗೋಪನೆ, ರೇಷ್ಮೆ, ಮೀನುಗಾರಿಕೆ ಮುಂತಾದ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುವುದು. ವ್ಯವಸಾಯ ವೆಚ್ಚವನ್ನು ಕಡಿಮೆ ಮಾಡಿಕೊಳ್ಳುವ ವಿಚಾರದಲ್ಲಿ ಸಲಹೆಗಳನ್ನು ನೀಡಲಾಗುವುದು ಎಂದರು.
ಅಭಿಯಾನದ ವೇಳೆ ಕೃಷಿ ವಸ್ತು ಪ್ರದರ್ಶನ, ಸ್ಥಬ್ಧ ಚಿತ್ರ ಹಾಗೂ ರೈತರೊಂದಿಗೆ ಸಂವಾದ ಕಾರ್ಯಕ್ರಮವನ್ನು ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ನಡೆಸುವುದಾಗಿ, ಕೃಷಿ ವಿಜ್ಞಾನಿಗಳು, ಮಾದರಿ ರೈತರು ಮತ್ತು ತಜ್ಞರೊಂದಿಗೆ ವಿಚಾರ ವಿನಿಮಯ ನಡೆಸಲಾಗುವುದು ಎಂದರು.
ಜಿಲ್ಲೆಯಲ್ಲಿ 2,71,448 ರೈತರು: ಜಿಲ್ಲೆಯಲ್ಲಿ 2,71,448 ರೈತರಿದ್ದಾರೆ. ಈ ಪೈಕಿ ಅತಿ ಸಣ್ಣ ರೈತರ ಸಂಖ್ಯೆ 2,09,458, ಸಣ್ಣ ರೈತರು 41,191, ಮಧ್ಯಮ ರೈತರು 20,524, ದೊಡ್ಡ ರೈತರು 275 ಮಂದಿ ಇದ್ದಾರೆ. ಪರಿಶಿಷ್ಟ ಜಾತಿಯ 25,866 ರೈತರು ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ 2,038 ರೈತರಿದ್ದು ಜಿಲ್ಲೆಯಾದ್ಯಂತ 18 ರೈತ ಸಂಪರ್ಕ ಕೇಂದ್ರಗಳು, 165 ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕ ಮಾರಾಟಗಾರರು, ನೂರಕ್ಕೂ ಅಧಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಒಂದು ಮಣ್ಣು ಪರೀಕ್ಷಾ ಪ್ರಯೋಗಾಲಯ ಮತ್ತು ಒಂದು ಕೃಷಿ ವಿಜ್ಞಾನ ಕೇಂದ್ರವಿದೆ ಎಂದು ತಮ್ಮ ಇಲಾಖೆಯ ಮಾಹಿತಿ ನೀಡಿದರು.
ರೈತರ ವಾಟ್ಸಪ್ ಗ್ರೂಫ್: ಜಿಲ್ಲೆಯಲ್ಲಿ ರೈತರಿಗಾಗಿ ವಿಶೇಷ ಕೃಷಿ ಚೇತನ ಅಭಿಯಾನದಡಿ ಗ್ರಾಮಪಂಚಾಯ್ತಿ ಮತ್ತು ಹೋಬಳಿ ಮಟ್ಟದಲ್ಲಿ ರೈತರು ಮತ್ತು ಅಧಿಕಾರಿಗಳನ್ನೊಳಗೊಂಡ ನೂರಕ್ಕೂ ಅಧಿಕ ವಾಟ್ಸ್ ಆ್ಯಪ್ ಗ್ರೂಪ್ಗಳಿದ್ದು 6500ರೈತರು ಗ್ರೂಪ್ನಲ್ಲಿದ್ದಾರೆ. ಈ ಎಲ್ಲಾ ರೈತರಿಗೆ ಗ್ರೂಪ್ನ ಮೂಲಕ ಸರ್ಕಾರದ ಕಾರ್ಯಕ್ರಮಗಳ ಮಾಹಿತಿಯನ್ನು ತಲುಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. ರೈತರ ಸಹಾಯವಾಣಿ: ಜಿಲ್ಲೆಯ ರೈತರು ಯಾವುದೇ ಮಾಹಿತಿ, ಸಮಸ್ಯೆ ಅಥವಾ ಅಹವಾಲು ಸಲ್ಲಿಸಲು ಹತ್ತಿರದ ರೈತ ಸಂಪರ್ಕ ಕೇಂದ್ರ ಸಂಪರ್ಕಿಸ ಬಹುದಾಗಿದೆ ಅಥವಾ ದೂರವಾಣಿ ಸಂಖ್ಯೆ 18004257919 ಗೆ ಸಂಪರ್ಕಿಸಬಹುದು ಎಂದು ತಿಳಿಸಿದರು.
29,112 ಮಣ್ಣು ಮಾದರಿ ಸಂಗ್ರಹ: ಮಣ್ಣು ಆರೋಗ್ಯ ಚೀಟಿ ಕಾರ್ಯಕ್ರಮ ಯೋಜನೆಯಡಿ 29112 ಮಾದರಿಗಳನ್ನು ಸಂಗ್ರಹಿಸಿದ್ದು 239053 ಮಣ್ಣು ಆರೋಗ್ಯ ಚೀಟಿಗಳನ್ನು ರೈತರಿಗೆ ವಿತರಿಸಲಾಗಿದೆ. ಮಣ್ಣಿನಲ್ಲಿರುವ ಪೋಷಕಾಂಶಗಳನ್ನು ಹೆಚ್ಚಿಸಲು ಸರಿಯಾದ ರಸಗೊಬ್ಬರದ ಬಳಕೆ ಮಾಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ದಕ್ಷಿಣ ಕರ್ನಾಟಕದ ಜಿಲ್ಲೆಗಳು 2-3 ವರ್ಷಕ್ಕೊಮ್ಮೆ ಬರ ಪೀಡಿತ ಪ್ರದೇಶಗಳಾಗುವುದರಿಂದ ಸರ್ಕಾರವು ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ರೂಪಿಸಿದ್ದು ಇಚ್ಚೆಯುಳ್ಳ ಬೆಳೆ ಸಾಲ ಪಡೆಯದ ರೈತರು ನಿಗಧಿತ ಅರ್ಜಿಯೊಂದಿಗೆ ಭೂಮಿ ದಾಖಲೆಗಳಾದ ಪಹಣಿ, ಖಾತೆ, ಬ್ಯಾಂಕ್ ಪಾಸ್ಪುಸ್ತಕ, ಆಧಾರ್ ಕಾರ್ಡ್ನ್ನು ಹತ್ತಿರದ ಬ್ಯಾಂಕ್ಗಳಲ್ಲಿ ನೊಂದಾಯಿಸಿಕೊಳ್ಳಬಹುದು ಎಂದರು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಎಸ್. ಶಂಕರಪ್ಪ ಸ್ವಾಗತಿಸಿ, ವಂದಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ