ಜೆಡಿಎಸ್ ತೊರೆದಿದ್ದು ದ್ರೋಹವಲ್ಲವೇ?
Team Udayavani, Jun 4, 2020, 7:37 AM IST
ಮಾಗಡಿ: ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರು, ನನ್ನನ್ನು ನಂಬಿಕೆ ಹಾಗೂ ವಿಶ್ವಾಸ ದ್ರೋಹಿ ಎಂದಿದ್ದಾರೆ. ಅವರು ಜೆಡಿಎಸ್ ತೊರೆದು ಕಾಂಗ್ರೆಸ್ಗೆ ಸೇರಿ ಎಚ್ಡಿಕೆಗೆ ನಂಬಿಕೆ ದ್ರೋಹ ಮಾಡಿಲ್ಲವೆ? ಎಂದು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆ ಗೊಂಡಿರುವ ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ತಮ್ಮಣ್ಣಗೌಡ ಪ್ರತ್ಯಾರೋಪ ಮಾಡಿದ್ದಾರೆ.
ಪಟ್ಟಣದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಒಂದು ಬಾರಿ ಬಿಜೆಪಿ, ಮೂರು ಬಾರಿ ಜೆಡಿಎಸ್ನಿಂದ ಗೆದ್ದು, ಶಾಸಕರಾಗಿ ಅಧಿಕಾರ ಅನು ಭವಿಸಿ ರಾಜಕೀಯವಾಗಿ ಬೆಳೆದು ಈಗ ಏಕಾಏಕಿಸಿದ್ದರಾಮಯ್ಯ ನಾಯಕತ್ವ ನಂಬಿ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದು ನಂಬಿಕೆ ದ್ರೋಹವಲ್ಲವೆ? ಎಂದು ಮಾಜಿ ಶಾಸಕರನ್ನು ಪ್ರಶ್ನಿಸಿದರು.
ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ ವಿರುದ್ಧ ಠಾಣೆ ಯಲ್ಲಿ ಎಷ್ಟು ಪ್ರಕರಣಗಳಿವೆ. ಶಾಸಕ ಎ. ಮಂಜುನಾಥ್ ವಿರುದ್ಧ ಎಷ್ಟು ಪ್ರಕರಣಗಳಿವೆ ಎಂಬುದನ್ನು ತುಲನೆ ಮಾಡಿಕೊಳ್ಳಲಿ. ಜೈಲಿನಲ್ಲಿದ್ದ ತಮ್ಮಣ್ಣಗೌಡರನ್ನು ಬಿಡಿಸಿದ್ದು ನಾನೇ ಎಂದು ಹೇಳಿ, ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ನಾನು ಕಾಂಗ್ರೆಸ ತೊರೆದ ಕೂಡಲೇ ಜೈಲಿನಿಂದ ಬಂದವನು ಎಂದು ಬಿಂಬಿಸುತ್ತಿದ್ದಾರೆ.
ಕಾನೂನು ಯಾರಪ್ಪನ ಸ್ವತ್ತಲ್ಲ. ನನ್ನ ವಿರುದ್ಧದ ಪ್ರಕರಣದಲ್ಲಿ ಗೆದ್ದಿದ್ದೇನೆ. ನ್ಯಾಯಾಲಯ ನನ್ನನ್ನು ನಿರಪರಾಧಿ ಎಂದು ಆದೇಶ ನೀಡಿದೆ. ಅಲ್ಲದೆ ತಗ್ಗಿಕುಪ್ಪೆ ಕ್ಷೇತ್ರದಲ್ಲಿ ಟಿಕೆಟ್ ನೀಡುವುದಾಗಿ ಮೋಸ ಮಾಡಿದ್ದರು ಎಂದು ಅಸಮಾಧಾನ ವ್ಯಕ್ತಪಡಿಸಿದರು. ನಾನು ಈಗ ಕಾಂಗ್ರೆಸ್ ತೊರೆದು ಶಾಸಕ ಎ. ಮಂಜು ನಾಥ್, ನಾಯಕತ್ವ ನಂಬಿ ಜೆಡಿಎಸ್ಗೆ ಸೇರ್ಪಡೆ ಯಾಗಿದ್ದೇನೆ. ವೈಯಕ್ತಿಕ ವಿಚಾರ ಬಿಡಲಿ.
ವಿರೋಧ ಪಕ್ಷದಲ್ಲಿದ್ದರೂ ಕ್ಷೇತ್ರದ ಅಭಿವೃದಿಟಛಿ ವಿಚಾರದಲ್ಲಿ ಕೈಜೋಡಿಸುವುದಾಗಿ ತಮ್ಮಣ್ಣಗೌಡ ತಿಳಿಸಿದರು. ತಾಲೂಕು ಜೆಡಿಎಸ್ ಮಹಿಳಾಧ್ಯಕ್ಷೆ ಶೈಲಜಾ, ಪುರಸಭೆ ಸದಸ್ಯ ಅಶ್ವಥ್, ಕೆಡಿಪಿ ಸದಸ್ಯ ಅಶೋಕ್, ದೇವರಾಜು, ರವಿಕುಮಾರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ