ಬಾಲ್ಯವಿವಾಹ ತಡೆಯುವುದು ನಮ್ಮ ಕರ್ತವ್ಯ


Team Udayavani, Mar 8, 2019, 7:16 AM IST

balyaviviaha.jpg

ಕನಕಪುರ: ವಿಶ್ವದಲ್ಲಿ ಹೆಚ್ಚಿನ ಸಂಖ್ಯೆಯ ಮಕ್ಕಳು ಬಾಲ್ಯವಿವಾಹಕ್ಕೆ ಒಳಗಾಗುತ್ತಿದ್ದಾರೆ ಎಂಬ ಅಂಕಿ ಅಂಶಗಳನ್ನು ವಿಶ್ವಸಂಸ್ಥೆ ತನ್ನ ವರದಿಯಲ್ಲಿ ದಾಖಲಿಸಿದೆ. ಇದು ಭಾರತದಲ್ಲೂ ಅದರಲ್ಲೂ ಗ್ರಾಮೀಣ ಭಾಗದಲ್ಲಿ ಹೆಚ್ಚು ಕಾಣಸಿಗುತ್ತವೆ. ಈ ಬಾಲ್ಯವಿವಾಹವನ್ನು ತಡೆಯುವುದು ನಮ್ಮ ಕರ್ತವ್ಯವಾಗಿದೆ ಎಂದು ತಾಪಂ ಇಒ ಶಿವರಾಮು ಹೇಳಿದರು. 

ನಗರದ ಶಿಕ್ಷಕರ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ರಾಮನಗರ, ಶಿಶು ಅಭಿವೃದ್ಧಿ ಯೋಜನೆ ಕನಕಪುರ ಹಾಗೂ ನ್ಯೂ ಡ್ರೀಮ್‌ ಫೌಂಡೇಷನ್‌ (ರಿ) ಸಹಯೋಗದಲ್ಲಿ ನಡೆದ ಬಾಲ್ಯವಿವಾಹದ ನಿಷೇಧದ ಬಗ್ಗೆ ಜಾಗೃತಿ ಮೂಡಿಸುವ ಅರಿವಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂಸ್ಕೃತಿ ಮತ್ತು ಸಂಪ್ರದಾಯದ ಭಾಗವಾಗಿರುವ ಭಾತರದಲ್ಲಿ ಔಪಚಾರಿಕ ಮತ್ತೂಂದು ಅನೌಪಚಾರಿ ಮದುವೆ ನಡೆಯುತ್ತವೆ.

ಔಪಚಾರಿಕ ಎಂದರೆ ಪೋಷಕರು ಹಾಗೂ ಕುಟುಂಬದವರು ಸೇರಿ ಮಾಡುವುದು. ಅನೌಪಚಾರಿಕ ಎಂದರೆ ಅಪ್ರಾಪ್ತ ವಯಸ್ಸಿನ ಮಕ್ಕಳು ಆಕರ್ಷಣೆಗೆ ಒಳಗಾಗಿ ಮದುವೆ ಮಾಡಿಕೊಳ್ಳುವುದು. ಇದರಿಂದಲೂ ಸಹ ಬಾಲ್ಯವಿವಾಹ ನಡೆಯುತ್ತವೆ. ಬಾಲ್ಯವಿವಾಹವನ್ನು ತಡೆಗಟ್ಟಲು ವಿಶ್ವ ಸಂಸ್ಥೆಯ ಗಂಡು, ಹಣ್ಣಿಗೆ ಮದುವೆ ವಯಸ್ಸನ್ನು ನಿಗದಿ ಮಾಡಿದೆ. ಅದಕ್ಕಿಂತ ಕಡಿಮೆ ವಯಸ್ಸಿನಲ್ಲಿ ಮದುವೆ ಮಾಡಬಾರದು. ಯಾವುದೇ ಗಂಡು ಅಥವಾ ಹೆಣ್ಣು ಮಕ್ಕಳು ಮಾನಸಿಕ ಮತ್ತು ಶಾರೀರಿಕವಾಗಿ ಸಿದ್ಧರಾಗದೇ ಮದುವೆ ಮಾಡಬಾರದು ಎಂದರು. 

ಬಾಲ್ಯ ವಿವಾಹದಿಂದ ಮಕ್ಕಳ ಭವಿಷ್ಯ ಹಾಳು: ಗ್ರಾಮೀಣ ಭಾಗದಲ್ಲಿ ಪೋಷಕರು ತಮ್ಮ ಜವಾಬ್ದಾರಿ ನೆಪದಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಮದುವೆಗೆ ನಿಶ್ಚಯಿಸುತ್ತಾರೆ. ಇದರಿಂದ ಕಾನೂನು ಉಲ್ಲಂಘನೆಯಾಗುತ್ತದೆ. ಇಂತಹ ಘಟನೆಗಳು ಗಮನಕ್ಕೆ ಬಂದರೆ ಪೋಷಕರಿಗೆ ಅರಿವು ಮೂಡಿಸಬೇಕು. ಇದರಿಂದ ಅವರ ಮಕ್ಕಳ ಭವಿಷ್ಯ ನಾಶವಾಗುವ ಜೊತೆಗೆ ಸಮಾಜಕ್ಕೆ ಅನಾರೋಗ್ಯ ಪ್ರಜೆಗಳನ್ನು ನೀಡಿದಂತಾಗುತ್ತದೆ ಎಂದು ಹೇಳಿದರು.

ಬಾಲ್ಯ ವಿವಾಹ ತಡೆಗೆ ವಿವಿಧ ಇಲಾಖೆ ಶ್ರಮ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾ ಅಧಿಕಾರಿ ಗೀತಾ ಪಾಟೀಲ್‌ ಮಾತನಾಡಿ, ಬಾಲ್ಯ ವಿವಾಹ ಪದ್ಧತಿಯನ್ನು ತಡೆಗಟ್ಟಲು ಸರ್ಕಾರ ರೂಪಿಸಿರುವ ಕಾಯ್ದೆಗಳ ಅನುಷ್ಠಾನವಾಗಬೇಕು. ಕಂದಾಯ ಇಲಾಖೆ, ಪೊಲೀಸ್‌ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪಂಚಾಯತ್‌ ರಾಜ್‌ ಇಲಾಖೆ ಹಾಗೂ ಇನ್ನಿತರ ಇಲಾಖೆ ಮತ್ತು ಸ್ವಯಂಸೇವಾ ಸಂಸ್ಥೆಗಳು ಕಾಯ್ದೆ ಜಾರಿಗೆ ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿವೆ. ಆದರೂ ಕೂಡ ಬಾಲ್ಯವಿವಾಹ ಪದ್ಧತಿಯನ್ನು ತಡೆಯಲು ಸಾಧ್ಯವಾಗುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು. 

ಜನನದ ದಿನಾಂಕದ ಬಗ್ಗೆ ಜಾಗೃತರಾಗಿ: ತಾಪಂ ಅಧ್ಯಕ್ಷ ಧನಂಜಯ ಮಾತನಾಡಿ, ನಮ್ಮ ಗ್ರಾಮೀಣ ಭಾಗದಲ್ಲಿ ಸಂಸ್ಕೃತಿ ಮತ್ತು ಸಂಪ್ರದಾಯದ ಮೂಲಕ ಮದುವೆ ಮಾಡುತ್ತಿದ್ದು, ಮದುವೆ ನಿಗದಿ ಮತ್ತು ಮಾಡಿಸುವ ಹೊಣೆ ಒತ್ತುಕೊಳ್ಳುವ ಪುರೋಹಿತರು ಗಂಡು ಮತ್ತು ಹೆಣ್ಣಿನ ಜಾತಕಗಳನ್ನು ನೋಡದೆ ಮದುವೆ ಮಾಡುವುದಿಲ್ಲ. ಅಂತಹ ಸಮಯದಲ್ಲಿ ಜನನದ ದಿನಾಂಕದ ಬಗ್ಗೆ ಜಾಗೃತರಾದರೆ ಬಹುತೇಕ ಬಾಲ್ಯವಿವಾಹ ತಡೆಯಲು ಸಾಧ್ಯ ಎಂದರು. 

ಕಾನೂನು ಎಲ್ಲರಿಗೂ ಅನ್ವಯ: ವಕೀಲ ಎಚ್‌.ಡಿ.ಲಿಂಗರಾಜು ಮಾತನಾಡಿ, ಬಾಲ್ಯವಿವಾಹ ಪದ್ಧತಿ ತಡೆಗೆ ಬಾಲ್ಯವಿವಾಹ ಅಧಿನಿಯಮ 2006ರ ಪ್ರಕಾರ ಭಾರತದ ಗಣರಾಜ್ಯದ 57ನೇ ವರ್ಷದಲ್ಲಿ ಜಾರಿಗೆ ಬಂದಿದೆ. ಇದು ಜಮ್ಮು ಮತ್ತು ಕಾಶ್ಮೀರ ರಾಜ್ಯ ಹೊರತುಪಡಿಸಿ ಭಾರತ ದೇಶ ಮತ್ತು ಭಾರತದ ಪ್ರಜೆಗಳು ಇತರೆ ದೇಶದಲ್ಲಿ ನೆಲೆಸಿರುವ ಪ್ರಜೆಗಳಿಗೂ ಅನ್ವಯವಾಗುತ್ತದೆ.

ಬಾಲ್ಯವಿವಾಹಕ್ಕೆ ಒಳಗಾದ ಹೆಣ್ಣು ಮಗಳಿಗೆ ವಸತಿ ಮತ್ತು ಜೀವನಾಂಶದ ಬಗ್ಗೆ, ಬಾಲ್ಯ ವಿವಾಹದಿಂದ ಹುಟ್ಟಿದ ಮಕ್ಕಳ ಜೀವನಾಂಶ ಮತ್ತು ರಕ್ಷಣೆ, ಜಿಲ್ಲಾ ನ್ಯಾಯಾಲಯವು ಬಾಲ್ಯವಿವಾಹದ ಬಗ್ಗೆ ತೆಗೆದುಕೊಳ್ಳುವ ತಿರ್ಮಾನಗಳ ಬಗ್ಗೆ. ಬಾಲ್ಯವಿವಾಹಕ್ಕೆ ಭಾಗಿಯಾದವರಿಗೆ ದಂಡ ಮತ್ತು ಶಿಕ್ಷೆಯ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ಶಿಶು ಅಭಿವೃದ್ಧಿ ಅಧಿಕಾರಿ ಬಿ.ಎಲ್‌ ಸುರೇಂದ್ರ, ನ್ಯೂ ಡ್ರೀಮ್‌ ಫೌಂಡೆಷನ್‌ ಅಧ್ಯಕ್ಷ ಬಿ.ಎಸ್‌.ದೊಡ್ಡಿ ಜೈರಾಮೇಗೌಡ, ಸಂಪನ್ಮೂಲ ವ್ಯಕ್ತಿಗಳಾದ ಗೋವಿಂದು ಭಾಗವಹಿಸಿದ್ದರು.

ಟಾಪ್ ನ್ಯೂಸ್

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.