ಮಾಜಿ ಎಂಎಲ್ ಸಿ ಮರಿಲಿಂಗೇಗೌಡ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆ
Team Udayavani, Aug 13, 2022, 4:01 PM IST
ಹಾರೋಹಳ್ಳಿ: ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮರಿಲಿಂಗೇಗೌಡ ಮತ್ತು ಇನ್ನೂ ಹಲವರು ಶನಿವಾರ ಜೆಡಿಎಸ್ ಗೆ ವಿದಾಯ ಹೇಳಿ, ಬಿಜೆಪಿ ಸೇರಿಕೊಂಡರು.
ಇಲ್ಲಿಗೆ ಸಮೀಪವಿರುವ ಹನುಮಂತನಗರದ ಮನೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್.ಜೈಶಂಕರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಿ ಎನ್ ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ಇವರನ್ನೆಲ್ಲ, ಪಕ್ಷದ ಕೇಸರಿ ಶಾಲು ಹಾಕುವ ಮೂಲಕ ಬಿಜೆಪಿಗೆ ಬರಮಾಡಿಕೊಳ್ಳಲಾಯಿತು.
ಮರಿಲಿಂಗೇಗೌಡರ ಮನೆಯಲ್ಲೇ ಜೈಶಂಕರ್ ಅವರು ಗೌಡರನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ತಾಪಂ ಮಾಜಿ ಅಧ್ಯಕ್ಷ ಈರೇಗೌಡ, ಬಮೂಲ್ ಮಾಜಿ ನಿರ್ದೇಶಕ ಮರಿಯಪ್ಪ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಬಿಜೆಪಿ ಸೇರಿದರು.
ಮರಿಲಿಂಗೇಗೌಡರನ್ನು ಪಕ್ಷಕ್ಕೆ ಸ್ವಾಗತಿಸಿ ಮಾತನಾಡಿದ ಅಶ್ವತ್ಥ ನಾರಾಯಣ ಅವರು, ‘ಬಿಜೆಪಿ ಮಾತ್ರ ಎಲ್ಲರಿಗೂ ಮುಕ್ತ ಅವಕಾಶ ನೀಡುವ ಪಕ್ಷವಾಗಿದ್ದು, ಸಮಾಜದ ಎಲ್ಲ ವರ್ಗಗಳಿಗೂ ಪ್ರಾತಿನಿಧ್ಯ ನೀಡುವ ಸಂಸ್ಕೃತಿಯನ್ನು ಹೊಂದಿದೆ. ಮರಿಲಿಂಗೇಗೌಡರ ಸೇರ್ಪಡೆಯಿಂದ ರಾಮನಗರ ಜಿಲ್ಲೆಯಲ್ಲಿ ಬಿಜೆಪಿಗೆ ಬಲ ಬಂದಿದೆ’ ಎಂದರು.
ಇದನ್ನೂ ಓದಿ:ಸಾಮಾಜಿಕ ಜಾಲತಾಣದಲ್ಲಿ ಹರ್ ಘರ್ ತಿರಂಗ ಟ್ರೆಂಡಿಂಗ್, ಗಣ್ಯರ ಮನೆಗಳಲ್ಲಿ ಹಾರಿದ ತ್ರಿವರ್ಣ
ಕಾಂಗ್ರೆಸ್ಸನ್ನು ದೇಶದ ಜನ ತಿರಸ್ಕರಿಸಿದ್ದಾರೆ. ಜೆಡಿಎಸ್ ಬರೀ ಒಂದು ಕುಟುಂಬಕ್ಕೆ ಜೋತು ಬಿದ್ದಿರುವ ಊಳಿಗಮಾನ್ಯ ಪಕ್ಷವಾಗಿದೆ. ಬಿಜೆಪಿ ಮಾತ್ರ ದೇಶದ ಜನರಲ್ಲಿ ಭರವಸೆ ಹುಟ್ಟಿಸಿದ್ದು, ಅಭಿವೃದ್ಧಿ ಕೇಂದ್ರಿತ ರಾಜಕಾರಣದಲ್ಲಿ ನಂಬಿಕೆ ಹೊಂದಿದೆ ಎಂದು ಅವರು ನುಡಿದರು.
ಮರಿಲಿಂಗೇಗೌಡರು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬೊಮ್ಮಾಯಿಯವರ ಜನಪರ ಮತ್ತು ಬದ್ಧತೆಯ ಆಡಳಿತ ಕಂಡು ಬಿಜೆಪಿ ಸೇರುತ್ತಿದ್ದೇನೆ. ದೇಶವನ್ನು ಬಲಿಷ್ಠವಾಗಿ ಕಟ್ಟುವುದು ಮತ್ತು ಪ್ರಜಾಪ್ರಭುತ್ವದ ಉಳಿವು ಬಿಜೆಪಿಯಿಂದ ಮಾತ್ರ ಸಾಧ್ಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ