ಕನಕಪುರ : ಇಬ್ಬರ ಮೇಲೆ ದಾಳಿ ನಡೆಸಿದ ಚಿರತೆ ಕೊನೆಗೂ ಸೆರೆ
Team Udayavani, May 26, 2018, 9:19 AM IST
ಕನಕಪುರ: ತಾಲೂಕಿನ ಬೇಲಿಕೊತ್ತನೂರು ಎಂಬಲ್ಲಿ ಆಹಾರ ಅರಸಿಕೊಂಡು ಬಂದಿರುವ ಚಿರತೆಯೊಂದು ಇಬ್ಬರ ಮೇಲೆ ದಾಳಿ ನಡೆಸಿರುವ ಘಟನೆ ಶುಕ್ರವಾರ ತಡ ರಾತ್ರಿ ನಡೆದಿದೆ.
ರಾತ್ರಿ 11 ಗಂಟೆಯ ವೇಳೆಗೆ ರೇಷ್ಮೆ ಸಕಾಣಿಕೆ ಮನೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ಅಲ್ಲಿ ಕೆಲಸಕ್ಕೆಂದು ಬಂದಿದ್ದ ತಮ್ಮಯ್ಯ ಎನ್ನುವರರ ಮೇಲೆ ಎರಗಿ ಗಂಭೀರವಾಗಿ ಗಾಯಗೊಳಿಸಿದೆ. ತಮ್ಮಯ್ಯ ಚಿರತೆ ದಾಳಿ ಮಾಡುತ್ತಿದ್ದಂತೆ ಬೊಬ್ಬಿಟ್ಟಿದ್ದು ಸ್ಥಳಕ್ಕೆ ದೌಡಾಯಿಸಿದ ಮಾಲೀಕ ಜಗದೀಶ್ ಅವರು ತಮ್ಮಯ್ಯರನ್ನು ರಕ್ಷಿಸಿ , ಚಿರತೆಯನ್ನು ಕೂಡಿ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ.
ತಮ್ಮಯ್ಯ ಅವರಿಗೆ ತಲೆ ಮತ್ತು ಕೈ ಕಾಲುಗಳಿಗೆ ಗಂಭೀರವಾದ ಗಾಯಗಳಾಗಿದ್ದು ಕನಕಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗ್ಗೆ ಚಿರತೆ ನೋಡಲೆಂದು ಬಂದಿದ್ದ ಬಾಲಕನೊಬ್ಬ ಕಿಟಕಿಯಲ್ಲಿ ನೋಡುತ್ತಿದ್ದಾಗ ಚಿರತೆ ತನ್ನ ಪಂಚಿನಿಂದ ಪರಚಿದ್ದು ಯುವಕನ ಕಿವಿ ಭಾಗಕ್ಕೆ ಗಂಭೀರವಾದ ಗಾಯವಾಗಿದ್ದು ಆತನನ್ನೂ ಕನಕಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅರಣ್ಯ ಇಲಾಖೆ ಸಿಬಂದಿಗಳು ಸ್ಥಳಕ್ಕಾಗಮಿಸಿ ಕಾರ್ಯಾಚರಣೆ ನಡೆಸಿ, ಬನ್ನೇರುಘಟ್ಟದ ಪಶುವೈದ್ಯರ ನೆರವಿನಿಂದ ಅರಿವಳಿಕೆ ಚಚ್ಚು ಮದ್ದು ನೀಡುವ ಮೂಲಕ ಚಿರತೆಯನ್ನು ಸೆರೆ ಹಿಡಿದಿದ್ದಾರೆ.
ಚಿರತೆಯನ್ನು ನೋಡಲೆಂದು ನೂರಾರು ಕುತೂಹಲಿಗಳು ಆಗಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ