ಕನಕಪುರದಲ್ಲಿಕಣ್ಮನ ಸೆಳೆದ ಫ‌ಲಪುಷ್ಪ ಪ್ರದರ್ಶನ


Team Udayavani, Jan 11, 2018, 5:30 PM IST

rampura.jpg

ರಾಮನಗರ/ಕನಕಪುರ: ನಗರದ ಮುನ್ಸಿಪಾಲ್‌ ಕಾಲೇಜು ಆವರಣದಲ್ಲಿ ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ ಹಮ್ಮಿಕೊಂಡಿರುವ ಫ‌ಲಪುಷ್ಪ ಪ್ರದರ್ಶನ ಸಂಗ-2018 ನಾಗರಿಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಸೇವಂತಿಗೆ, ಗುಲಾಬಿ ಹೂಗಳಿಂದ ಅರಳಿರುವ ಶಕ್ತಿದೇವತೆ ಕಬ್ಟಾಳಮ್ಮ ದೇವಿಯ ದೇವಾಲಯ ಪ್ರಮುಖ ಆಕರ್ಷಣೆಯಾಗಿದೆ. 18 ಅಡಿ ಅಗಲ ಮತ್ತು 20 ಅಡಿ ಎತ್ತರಕ್ಕೆ ಸುಮಾರು 2 ಲಕ್ಷಕ್ಕೂ ಅಧಿಕ ಸೇವಂತಿಗೆ ಮತ್ತು ಗುಲಾಬಿ ಹೂಗಳಿಂದ ರಚನೆಯಾಗಿರುವ ದೇವಾಲಯದ ಪ್ರತಿರೂಪ ಮತ್ತು ಅದರಲ್ಲಿ ವಿರಾಜಮಾನವಾಗಿರುವ ದೇವಿಯ ಉತ್ಸವ ಮೂರ್ತಿ ನೋಡುಗರಲ್ಲಿ ಭಕ್ತಿಯನ್ನು ಮೂಡಿಸುತ್ತಿರುವುದು ವಿಶೇಷ. 

ಕ್ಯಾಪ್ಸಿಕಂನಲ್ಲಿ ಮೂಡಿದ ಕರ್ನಾಟಕ ಭೂಪಟ: ವಿವಿಧ ಬಗೆಯ ತರಾಕಾರಿ ಮತ್ತು ಹೂಗಳಿಂದ ಸಿಂಗಾರಗೊಂಡಿರುವ ಉಯ್ನಾಲೆ, ಸಿ-ಸಾಗಳು ಮಕ್ಕಳ ಕುತೂಹಲಕ್ಕೆ ಕಾರಣವಾದರೆ, ಕೆಂಪು ಮತ್ತು ಹಳದೀ ಬಣ್ಣದ ದೊಣ್ಣೆ ಮೆಣಸಿನಕಾಯಿ (ಕ್ಯಾಪ್ಸಿಕಂ)ನಲ್ಲಿ ಅರಳಿರುವ ಕರ್ನಾಟಕದ ಭೂ ಪಟ ನೋಡುಗರೆಲ್ಲರ ಮೆಚ್ಚುಗೆಗಳಿಸಿತು. ಬಿಳಿ ಸೇವಂತಿಗೆಯಲ್ಲಿ ರಚನೆಯಾಗಿರುವ ಹಸು ಮತ್ತು ಕರುವಿನ ಮೂರ್ತಿಗಳ ಸಹ ಗಮನ ಸೆಳೆಯುವಲ್ಲಿ ಯಶಸ್ವಿಯಾದವು.
 
ಕನಕಪುರದಲ್ಲಿ ಡಿಕೆಶಿ ಚಾರಿಟಬಲ್‌ ಟ್ರಸ್‌ ವತಿಯಿಂದ ಜಿಲ್ಲಾ ಮಟ್ಟದ ಕನಕೋತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆ ಫ‌ಲಪುಷ್ಪ ಪ್ರದರ್ಶನ ಏರ್ಪಡಿಸಿದೆ. ಸಾವಿರಾರು ಮಂದಿ ಫ‌ಲಪುಷ್ಪ ಪ್ರದರ್ಶನ ವೀಕ್ಷಿಸಿದರು.ಜೊತೆಗೆ ರೈತರು ಮತ್ತು ಸಾಮಾನ್ಯ ನಾಗರಿಕರಿಗೆ ವಿವಿಧ ವಿಚಾರಗಳಲ್ಲಿ ಮಾಹಿತಿಯನ್ನು ನೀಡುತ್ತಿದೆ. 

ಉತ್ತಮ ಆರೋಗ್ಯಕ್ಕೆ ಯೋಗ ಅವಶ್ಯ: ಸುರೇಶ್‌ ಕನಕಪುರ: ಬದುಕಿನಲ್ಲಿ ಶಾಂತಿ ನೆಮ್ಮದಿ ಆರೋಗ್ಯವನ್ನುಕಾಣಬೇಕಾದರೆ ಯೋಗಾಸನ ಅತ್ಯಂತ ಅವಶ್ಯ ಎಂದು ಸಂಸದ ಡಿ.ಕೆ. ಸುರೇಶ್‌ ಹೇಳಿದರು. 

ನಗರದ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ 5 ದಿನಗಳ ಕನಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರತಿದಿನ ಕನಕೋತ್ಸವ ಆರಂಭಕ್ಕೂ ಮುನ್ನ ಪ್ರಾತಃಕಾಲ ಯೋಗಾಸನ ಹಮ್ಮಿಕೊಲಾಗಿದೆ. ತಾಲೂಕಿನ ಎಲ್ಲಾ ಜನತೆ ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಿದರು.

ದೇಗುಲ ಮಠದ ಮುಮ್ಮಡಿ ನಿರ್ವಾಣ ಮಹಾಸ್ವಾಮೀಜಿ ಮಾತನಾಡಿ, ಮನುಷ್ಯ ಜನೋಪಯೋಗಿ ಕಾರ್ಯಗಳನ್ನು ಮಾಡಿದಾಗ ಮಾತ್ರ ಜೀವನದಲ್ಲಿ ಸದ್ಗತಿಗಳು ಕಾಣಲು ಸಾಧ್ಯ. ರಾಮಾಯಣದಲ್ಲಿ ಶ್ರೀರಾಮ ತನ್ನ ಪ್ರಜೆಗಳಿಗಾಗಿ ಇಡೀ ತನ್ನ ಜೀವನವನ್ನೆ ಮುಡಿಪಾಗಿಟ್ಟನು. ಆದೇ ರೀತಿ ತಾಲೂಕಿನ ಜನರ ಏಳಿಗೆ ಹಾಗೂ ಅಭಿವೃದ್ಧಿಗಾಗಿ  .ಕೆ.ಶಿವಕುಮಾರ್‌ ಮತ್ತು ಡಿ.ಕೆ. ಸುರೇಶ್‌ ಅವರು ಟೊಂಕ ಕಟ್ಟಿನಿಂತಿರುವುದು ನಿಜಕ್ಕೂ ಅತ್ಯಂತ ಶ್ಲಾಘನೀಯವಾದ
ವಿಚಾರವೆಂದರು.

ಪ್ರತಿವರ್ಗದ ಜನರ ಏಳಿಗಾಗಿ ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಎಲ್ಲರಿಗೂ ಸಹ ಸನ್ಮಾನವನ್ನು ಮಾಡುತ್ತಿರುವುದು ಅವರ ವಿಶಾಲವಾದ ಹೃದಯವನ್ನು ತೋರಿಸುತ್ತದೆ ಎಂದು ನುಡಿದರು. ನೀರು ಗಾಳಿ ಶರೀರಕ್ಕೆ ಎಷ್ಟು ಅವಶ್ಯವೋ ಅಷ್ಟೇ ಅವಶ್ಯ ಯೋಗ. ಯೋಗವನ್ನು ಪ್ರತಿನಿತ್ಯ ಮಾಡುವುದರಿಂದ ರೋಗ ಮುಕ್ತವಾಗಿ ಮಾಡಬಹುದಾಗಿದೆ. ಪ್ರತಿನಿತ್ಯ ಧ್ಯಾನ ದೇವರ ಸ್ಮರಣೆ ಮಾಡುವುದರಿಂದ ಮನಸ್ಸಿನಲ್ಲಿ ಇರುವ ಕಲ್ಮಷವನ್ನು ಹೋಗಲಾಡಿಸಬಹುದಾಗಿದೆ ಎಂದರು. ಯೋಗ ಗುರು ವಿದ್ಯಾಶ್ರೀ ಚನ್ನಬಸವಣ್ಣ ಯೋಗ ಪ್ರದರ್ಶನ ಮಾಡಿದರು.

ಟಾಪ್ ನ್ಯೂಸ್

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.