ರೈತರಿಗೆ ಕಿಸಾನ್ ಸಮ್ಮಾನ್ ಮಾಹಿತಿ
Team Udayavani, Aug 10, 2020, 9:12 AM IST
ಮಾಗಡಿ: ತಾಲೂಕಿನ ಚಂದೂರಾಯನ ಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 6ನೇ ಕಂತಿನ ನಗದು ವರ್ಗಾವಣೆ ಮತ್ತು ಕೃಷಿ ಮೂಲ ಸೌಲಭ್ಯ ನಿಧಿಯ ಉದ್ಘಾಟನೆ ಕುರಿತು ನೇರ ವೀಕ್ಷಣೆ ಮಾಡಲಾಯಿತು.
ಕೇಂದ್ರದ ತೋಟಗಾರಿಕಾ ವಿಜ್ಞಾನಿ ವಿಕಾಸ್ ಅವರು ನೇರ ಪ್ರಸಾರದ ಮುಖ್ಯ ಉದ್ದೇಶಗಳನ್ನು ಕನ್ನಡಕ್ಕೆ ಅನುವಾದಿಸಿ ರೈತರಿಗೆ ಮಾಹಿತಿ ನೀಡಿದರು. ಹಲವಾರು ರಾಜ್ಯಗಳ ಸಂಘ ಸಂಸ್ಥೆಗಳ ಜತೆ ನೇರ ಸಂವಾದದಲ್ಲಿ ರೈತರಿಗೆ ಸೂಕ್ತ ಸಮಯದಲ್ಲಿ ಕೃಷಿ ಮೂಲ ಸೌಕರ್ಯ ಒದಗಿಸಬೇಕು, ಮೌಲ್ಯವರ್ಧಿತ ಉತ್ಪನ್ನಗಳ ಮಹತ್ವದ ಕುರಿತು ತಿಳಿಸಿಕೊಟ್ಟರು. ಕೇಂದ್ರದ ಮತ್ತೋರ್ವ ಕೃಷಿ ವಿಸ್ತರಣೆ ವಿಜ್ಞಾನಿ ಚೈತ್ರಾ ಮಾತನಾಡಿ, ಈ ಯೋಜನೆಯಿಂದ ರೈತರಿಗೆ ಸರಿಯಾದ ಸಮಯದಲ್ಲಿ ಬಿತ್ತನೆ ಬೀಜ, ಗೊಬ್ಬರ ಮತ್ತು ಕೀಟನಾಶಕ ಖರೀದಿಗೆ ಸಹಾಯವಾಗುತ್ತದೆ ಎಂದು ತಿಳಿಸಿಕೊಟ್ಟರು.
ಕೇಂದ್ರದ ವಿಷಯ ತಜ್ಞರಾದ ಶಾಂತಾಬಲಗೊಂಡ, ಕ್ಷೇತ್ರ ವ್ಯವಸ್ಥಾಪಕ ರಂಜಿತ್ಕುಮಾರ್, ಸುಮಾರು 22 ರೈತ, ರೈತ ಮಹಿಳೆಯರು ಭಾಗವಹಿಸಿದ್ದರು. ಈ ವೇಳೆ ಕೆವಿಕೆಯ 45 ರೈತರ ವಾಟ್ಸಪ್ ಗುಂಪುಗಳಿಗೆ ಲಿಂಕ್ ಕಳುಹಿಸಿ ನೋಡಲು ಅನುವು ಮಾಡಿಕೊಡಲಾಯತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್ಡಿಕೆ ಸ್ಪರ್ಧೆ ಸುಳಿವು
Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ ಕಬ್ಬಿಣದ ಕಡಲೆ
Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್ ವಾಗ್ಧಾಳಿ
MUST WATCH
ಹೊಸ ಸೇರ್ಪಡೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Mumbai Indians: ಸೂರ್ಯಕುಮಾರ್ ಶೀಘ್ರ ಚೇತರಿಕೆ ಸಾಧ್ಯತೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್