ಬಿಡದಿಗೆ ಬರುತ್ತಿಲ್ಲ ಕೆಎಸ್‌ಆರ್‌ಟಿಸಿ ಬಸ್ಸು


Team Udayavani, May 28, 2023, 3:07 PM IST

ಬಿಡದಿಗೆ ಬರುತ್ತಿಲ್ಲ ಕೆಎಸ್‌ಆರ್‌ಟಿಸಿ ಬಸ್ಸು

ರಾಮನಗರ: ನೂತನ ಎಕ್ಸ್‌ಪ್ರೆಸ್‌ ಹೈವೆ ಜಿಲ್ಲೆಯ ಜನಜೀವನದ ಮೇಲೆ ಸಾಕಷ್ಟು ಪರಿಣಾಮ ಬೀರಿದೆ. ಮೈಸೂರು-ಬೆಂಗಳೂರು ನಡುವೆ ಶೀಘ್ರ ಸಂಪರ್ಕ ಕಲ್ಪಿಸುವ ಎಕ್ಸ್‌ಪ್ರೆಸ್‌ ಹೈವೆ ಜಿಲ್ಲೆಯ ಕೆಲ ಪ್ರಮುಖ ಪ್ರದೇಶದ ಸಂಪರ್ಕ ಕಡಿದು ಹಾಕಿದೆ.

ಜಿಲ್ಲೆಯ ಪ್ರಮುಖ ಕೈಗಾರಿಕಾ ಪ್ರದೇಶವೆನಿಸಿರುವ ಬಿಡದಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ನಿಲುಗಡೆ ಮಾಡದಿರುವುದು ಇದಕ್ಕೆ ತಾಜಾ ಉದಾಹರಣೆ.

ಹೌದು.., ನೂತನ ಎಕ್ಸ್‌ಪ್ರೆಸ್‌ ವೇ ನಿರ್ಮಾಣವಾದ ಬಳಿಕ ಬಹುತೇಕ ಕೆಎಸ್‌ಆರ್‌ಟಿಸಿ ಬಸ್‌ ಬಿಡದಿಗೆ ಬರುವುದನ್ನೇ ಬಿಟ್ಟು ಬಿಟ್ಟಿವೆ. ಸಾರಿಗೆ ಸಂಸ್ಥೆಯ ಸಾಕಷ್ಟು ಬಸ್‌ ಬಿಡದಿ ಬೈಪಾಸ್‌ನಲ್ಲೇ ಸಂಚರಿಸುತ್ತಿದ್ದು ಇದರಿಂದ ಬಿಡದಿಯಿಂದ ಬೆಂಗಳೂರು ಹಾಗೂ ಬೇರೆ ಕಡೆಗೆ ಹೋಗುವ ಪ್ರಯಾಣಿಕರು ಪರದಾಡುವಂತಾಗಿದೆ.

ಬಿಡದಿಗೆ ಬಾರದ ಬಸ್‌ಗಳು: ಎಕ್ಸ್‌ಪ್ರೆಸ್‌ ಹೈವೆ ನಿರ್ಮಾಣಕ್ಕೆ ಮೊದಲು ಎಲ್ಲಾ ಸಾರಿಗೆ ಸಂಸ್ಥೆಯ ಬಸ್‌ ಬಿಡದಿ ಮೂಲಕವೇ ಹಾಯ್ದು ಹೋಗುತ್ತಿದ್ದವರು. ಬಿಡದಿ ಪಟ್ಟಣದಲ್ಲಿ ಬಸ್‌ ನಿಲುಗಡೆ ಮಾಡುತ್ತಿದ್ದವು. ಇದರಿಂದಾಗಿ ಬಿಡದಿಯಿಂದ ಬೆಂಗಳೂರು ಹಾಗೂ ಮೈಸೂರಿನ ಕಡೆಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗುತ್ತಿತ್ತು. ಪ್ರಮುಖ ಕೈಗಾರಿಕಾ ಪ್ರದೇಶವಾಗಿರುವ ಬಿಡದಿಗೆ ಬೆಂಗಳೂರು, ರಾಮನಗರ, ಚನ್ನಪಟ್ಟಣ, ಮೈಸೂರು ಸೇರಿ ವಿವಿಧ ಕಡೆಯಿಂದ ಬರುವ ಪ್ರಯಾಣಿಕರ ಸಂಖ್ಯೆ ಹೆಚ್ಚಿದೆ. ಇನ್ನು ಬಿಡದಿ ಹಾಗೂ ಸುತ್ತ ಮುತ್ತಲ ಪ್ರದೇಶದಲ್ಲಿ ಕೆಲಸ ಮಾಡುವ ಶಿಕ್ಷಕರ ಹಾಗೂ ವಿವಿಧ ಇಲಾಖೆಗಳ ನೌಕರರು ಪ್ರತಿನಿತ್ಯ ತಮ್ಮ ಸಂಚಾರಕ್ಕೆ ಸಾರಿಗೆ ಸಂಸ್ಥೆಯ ಬಸ್‌ಗಳನ್ನೇ ಆಶ್ರಯಿಸಿದ್ದಾರೆ. ಆದರೆ, ಸಾರಿಗೆ ಸಂಸ್ಥೆಯ ಬಸ್‌ಗಳು ಬಿಡದಿಯನ್ನು ಪ್ರವೇಶಿಸದೆ ಬೈಪಾಸ್‌ನಲ್ಲಿ ಸಂಚರಿಸುತ್ತಿರುವುದು ಪ್ರಯಾಣಿಕರಿಗೆ ಸಾಕಷ್ಟು ಸಮಸ್ಯೆಯಾಗಿದೆ.

ಬೈಪಾಸ್‌ನಲ್ಲಿ ಸಂಚರಿಸುತ್ತಿರುವುದು ಏಕೆ?: ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ಐರಾವತ, ರಾಜಹಂಸ ಸೇರಿ ತಡೆರಹಿತ ಬಸ್‌ಗಳು ಬಿಡದಿ ಪಟ್ಟಣವನ್ನು ಪ್ರವೇಶಿಸದೆ ನೇರವಾಗಿ ಬೈಪಾಸ್‌ನಲ್ಲಿ ಹೋಗು ವುದು ಸಮಂಜಸ. ಆದರೆ, ಮಾಮೂಲಿ ಬಸ್‌ಗಳು ಬೈಪಾಸ್‌ನಲ್ಲಿ ಸಂಚರಿಸುವುದು ಯಾವ ನ್ಯಾಯ. ಇದರಿಂದಾಗಿ ನಿತ್ಯ ಪ್ರಯಾಣಿಕರಿಗೆ ತೊಂದರೆ ಆಗುತ್ತಿದೆ ಎಂದು ಪ್ರಶ್ನಿಸುತ್ತಿರುವ ಬಿಡದಿ ನಿವಾಸಿಗಳು ಸಾರಿಗೆ ಸಂಸ್ಥೆ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.

ಬಿಡದಿ ಪಟ್ಟಣಕ್ಕೆ ಹೋಗಲು ಶೆಟಲ್‌ ಬಸ್‌ಗಳೇ ಗತಿ: ಬಿಡದಿ ಪಟ್ಟಣಕ್ಕೆ ಹೋಗಬೇಕು ಎಂದಾದಲ್ಲಿ ಶೆಟಲ್‌ ಬಸ್‌ಗಳನ್ನೇ ಅವಲಂಬಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನಲ್ಲಿ ಬಸ್‌ ಹತ್ತುವಾಗಲೇ ಬಿಡದಿ ಎಂದರೆ ಬಸ್‌ ಹತ್ತಿಸಿಕೊಳ್ಳುತ್ತಿಲ್ಲ. ಬಿಡದಿಗೆ ಬರಬೇಕು ಎಂದರೆ ಬಿಎಂಟಿಸಿ ಬಸ್‌ಗಳನ್ನೇ ಅವಲಂಬಿಸಬೇಕಾಗಿದೆ. ಶೆಟಲ್‌ ಬಸ್‌ಗಳಲ್ಲಿ ಪ್ರಯಾಣಿಸಲು ಸಮಯ ಸಾಕಷ್ಟು ತೆಗೆದುಕೊಳ್ಳುವ ಕಾರಣ ಸರ್ಕಾರಿ ನೌಕರರಿಗೆ ಸಮಸ್ಯೆಯಾಗುತ್ತಿದೆ.

ಬೈಪಾಸ್‌ ನಿರ್ಮಾಣ ಬಳಿಕ ಸಾರಿಗೆ ಸಂಸ್ಥೆಯ ಬಸ್‌ ಬಿಡದಿ ಪಟ್ಟಣ ಪ್ರವೇಶಿಸ ದೆ ನೇರವಾಗಿ ಬೈಪಾಸ್‌ನಲ್ಲಿ ಹೋಗುತ್ತಿವೆ. ಇದರಿಂದಾಗಿ ಬಿಡದಿಗೆ ಬರುವವರಿಗೆ, ಬಿಡದಿಯಿಂದ ಬೆಂಗಳೂರು, ಮೈಸೂರು ಕಡೆಗೆ ಹೋಗುವವರಿಗೆ ಸಮಸ್ಯೆಯಾಗುತ್ತಿದೆ. ಸಾರಿಗೆ ಸಂಸ್ಥೆ ಅಧಿಕಾರಿಗಳು ಕೂಡಲೇ ಇತ್ತ ಗಮನಹರಿಸಿ ಸಮಸ್ಯೆ ಪರಿಹರಿಸಬೇಕು. -ಕುಮಾರ್‌, ಬಿಡದಿ ನಿವಾಸಿ

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.