ಕೆಎಸ್ಆರ್ಟಿಸಿ ನೌಕರರಿಂದ ಬೋಂಡ, ಎಳನೀರು ಮಾರಾಟ
ಸರ್ಕಾರಿ ನೌಕರರಾಗಿ ಪರಿಗಣಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಗೆ ಆಗ್ರಹ
Team Udayavani, Apr 3, 2021, 7:30 PM IST
ಕನಕಪುರ: ಸರ್ಕಾರಿ ನೌಕರರಂತೆ ತಮಗೂ ಸಕಲ ಸೌಲಭ್ಯ ಒದಗಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್ಟಿಸಿ ಬಸ್ ಚಾಲಕ, ನಿರ್ವಾಹಕರು ನಿಲ್ದಾಣದಲ್ಲಿ ಬೋಂಡ, ಬಜ್ಜಿ ಮಾರಾಟ ಮಾಡಿ ಪ್ರತಿಭಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನಿಲ್ದಾಣಾಧಿಕಾರಿ ಗುರಪ್ಪ, ರಾಜ್ಯಾದ್ಯಂತ ಕೆಎಸ್ಆರ್ಟಿಸಿ ನೌಕರರು 6ನೇ ವೇತನ ಆಯೋಗವನ್ನು ಯಥಾವತ್ತು ಜಾರಿಗೊಳಿಸುವಂತೆ ಆಗ್ರಹಿಸಿ ಹೋರಾಟ ಮಾಡುತ್ತಿದ್ದು, ಅದರಂತೆ ನಗರ ಬಸ್ ನಿಲ್ದಾಣದಲ್ಲಿ ಸಾರಿಗೆ ನೌಕರರು ಬಜ್ಜಿ, ಬೋಂಡಾ, ಎಳನೀರು ಮಾರಾಟ ಮಾಡುವ ಮೂಲಕ ಸಾಂಕೇತಿಕವಾಗಿ ಪ್ರತಿಭಟಿಸುತ್ತಿರುವುದಾಗಿ ಹೇಳಿದರು.
ಮಾಜಿ ಲೀಡರ್ಗಳೂ ಬೆಂಬಲಿಸಲಿ: ಯೂನಿಯನ್ ಇದುವರೆಗೂ ಸರ್ಕಾರ, ಯುನಿಯನ್ ಲೀಡರ್ಗಳು ನೌಕರರ ಹಿತವನ್ನು ಮರೆತು ಸಂಪೂರ್ಣವಾಗಿ ಆಳು ಮಾಡಿದ್ದಾರೆ. ಹಾಲಿ ಇರುವ ಯುನಿಯನ್ಗಳು ನೌಕರರ ಪರ ಧ್ವನಿ ಎತ್ತಿ ಸರ್ಕಾರದ ಗಮನವನ್ನು ಸೆಳೆಯುತ್ತಿವೆ. ಹಿಂದೆ ಇದ್ದ ಎಲ್ಲಾ ಯುನಿಯನ್ ಲೀಡರ್ಗಳೂ ಮೀನಮೇಷ ಏಣಿಸದೇ, ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಒತ್ತಾಯಿಸಿದರು.
ಆರನೇ ವೇತನ ಆಯೋಗ ಜಾರಿ, ಆರೋಗ್ಯ ವಿಮೆ, ಎನ್ಎಎನ್ಸಿ ಸಂಪೂರ್ಣ ರದ್ದು, ಅಂತರ್ ನಿಗಮ ವರ್ಗಾವಣೆ ಸೇರಿ ನಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ಸಾರಿಗೆ ಮಂತ್ರಿಗಳು ಕಳೆದ ಬಾರಿ ಭರವಸೆ ನೀಡಿ ಕಾಲಾವಕಾಶ ಕೋರಿದ್ದರು. ಇದೀಗ ಅವಧಿ ಮುಗಿದು 15 ದಿನ ಕಳೆದರೂ ಈ ವಿಚಾರದ ಬಗ್ಗೆ ಎಲ್ಲಿಯೂ ಪ್ರಸ್ತಾಪ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಮತ್ತೆ ಹೋರಾಟದ ಹಾದಿಯನ್ನು ಹಿಡಿಯಬೇಕಾಗಿದೆ ಎಂದು ತಿಳಿಸಿದರು. ಚಾಲಕರಾದ ಶಿವಕುಮಾರ್ ಮಾತನಾಡಿದರು.
ಚಾಲಕ, ನಿರ್ವಾಹಕರಾದ ನಾಗಪ್ಪಗಂಟಿ, ಕುಮಾರ್, ಶಿವಣ್ಣ, ಟಿ.ಎಚ್.ಶಿವ, ಪುಟ್ಟಸ್ವಾಮಿ, ಮಹದೇವ್, ಸಿದ್ದೇಶ್, ವಸಂತ್, ಜೋಗಿ, ಚಿನ್ನಗಿರೀಗೌಡ, ಹರೀಶ್ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕುಷ್ಟಗಿ : ತಡೆಗೋಡೆಗೆ ಢಿಕ್ಕಿ ಹೊಡೆದ ಬೈಕ್ : ತಂದೆ ಮಗಳು ಸ್ಥಳದಲ್ಲೇ ಸಾವು, ಇಬ್ಬರು ಗಂಭೀರ
ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟ : ಹಳ್ಳದಲ್ಲಿ ಕೊಚ್ಚಿ ಹೋದ 7 ವರ್ಷದ ಬಾಲಕಿ
ಗಂಗಾವತಿ : ಕುಮ್ಮಟ ದುರ್ಗದ ಸುತ್ತ ಗಣಿಗಾರಿಕೆಗೆ ಅವಕಾಶ ನೀಡದಂತೆ ಜಿಲ್ಲಾಡಳಿತಕ್ಕೆ ಸೂಚನೆ
ಅಧಿಕಾರಿಗಳ ಅಂಧಾ ದರ್ಬಾರ್: ಪಾಂಡವಪುರ ತಾಲೂಕು ಕಚೇರಿ ದುರ್ಬಳಕೆ ಆರೋಪ
ಅಂಕೋಲಾ: ನಿಯಂತ್ರಣ ತಪ್ಪಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಗುದ್ದಿದ ಕಾರು; ಓರ್ವ ಸಾವು
MUST WATCH
ಚಾರ್ಮಾಡಿ : ರಸ್ತೆ ಮಧ್ಯೆಯೇ ಮೋಜು ಮಸ್ತಿ, ಪ್ರವಾಸಿಗರ ಪುಂಡಾಟಕ್ಕೆ ವಾಹನ ಸವಾರರು ಸುಸ್ತು
ಭಾರಿ ಮಳೆಗೆ ಹೆಬ್ಬಾಳ ಸೇತುವೆ ಮುಳುಗಡೆ : ಕಳಸ – ಹೊರನಾಡು ಸಂಪರ್ಕ ಕಡಿತ
ಇಬ್ಬರು ಶಸ್ತ್ರ ಸಜ್ಜಿತ ಲಷ್ಕರ್ ಉಗ್ರರನ್ನು ಹಿಡಿದು ಕೊಟ್ಟ ಕಾಶ್ಮೀರದ ಗ್ರಾಮಸ್ಥರು
ಜಿಂಕೆಯನ್ನು ನುಂಗಿದ್ದ 80 ಕೆ.ಜಿ. ತೂಕದ 14 ಅಡಿ ಉದ್ದದ ಹೆಬ್ಬಾವು!
ವಿಟ್ಲದ ಈ ವಿದ್ಯಾರ್ಥಿನಿಯ ಕಾರ್ಯಕ್ಕೊಂದು ಮೆಚ್ಚುಗೆ ಇರಲಿ…
ಹೊಸ ಸೇರ್ಪಡೆ
ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಗೆ ಐಸಿಯುನಲ್ಲಿ ಚಿಕಿತ್ಸೆ
ಕುಷ್ಟಗಿ : ತಡೆಗೋಡೆಗೆ ಢಿಕ್ಕಿ ಹೊಡೆದ ಬೈಕ್ : ತಂದೆ ಮಗಳು ಸ್ಥಳದಲ್ಲೇ ಸಾವು, ಇಬ್ಬರು ಗಂಭೀರ
ಅಗ್ನಿಪಥ ಯೋಜನೆ ಪ್ರಶ್ನಿಸಿ ಅರ್ಜಿ: ಮುಂದಿನ ವಾರ ಸುಪ್ರೀಂಕೋರ್ಟ್ ವಿಚಾರಣೆ
ದೆಹಲಿ ಶಾಸಕರ ವೇತನ ಶೇ.66ಕ್ಕೆ ಏರಿಕೆ: ವಿಧಾನಸಭೆಯಲ್ಲಿ ವಿಧೇಯಕ ಅಂಗೀಕಾರ
ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟ : ಹಳ್ಳದಲ್ಲಿ ಕೊಚ್ಚಿ ಹೋದ 7 ವರ್ಷದ ಬಾಲಕಿ