ಏಸು ಪ್ರತಿಮೆ ಸ್ಥಾಪನೆಗೆ ಕೆಎಸ್‌ಎಸ್‌ಡಿ ಬೆಂಬಲ


Team Udayavani, Jan 11, 2020, 6:09 PM IST

rn-tdy-1

ರಾಮನಗರ: ಕನಕಪುರ ತಾಲೂಕಿನ ಕಪಾಲ ಬೆಟ್ಟದಲ್ಲಿ ಏಸು ಕ್ರಿಸ್ತ ಪ್ರತಿಮೆ ಸ್ಥಾಪನೆಗೆ ಕರ್ನಾಟಕ ಸಮತಾ ಸೈನಿಕ ದಳ (ಕೆ.ಎಸ್.ಎಸ್‌.ಡಿ) ಬೆಂಬಲ ವ್ಯಕ್ತಪಡಿಸಿದೆ.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಸಮತಾ ಸೈನಿಕ ದಳದ ಜಿಲ್ಲಾಧ್ಯಕ್ಷ ಕೋಟೆ ಕುಮಾರ್‌ ಮಾತನಾಡಿ, ಶಾಂತಿ ದೂತ ಏಸು ಪ್ರತಿಮೆ ಸ್ಥಾಪನೆಗೆ ವಿರೋಧ ವ್ಯಕ್ತವಾಗುತ್ತಿರುವುದು ಸರಿಯಲ್ಲ. ಪ್ರತಿಮೆ ಸ್ಥಾಪನೆಗೆ ತಮ್ಮ ಸಂಘಟನೆಯ ಬೆಂಲವಿದೆ ಎಂದರು.

ಏಸು ಪ್ರತಿಮೆ ಸ್ಥಾಪನೆಯನ್ನು ವಿರೋಧಿ ಸುವುದು ಸಂವಿಧಾನ ವಿರೋಧಿ ಧೋರಣೆ, ಸಂವಿಧಾನದಲ್ಲಿ ಎಲ್ಲ ಪ್ರಜೆಗಳು ತಮಗೆ ಬೇಕಾದ ಜಾತಿ, ಮತವನ್ನು ಪಾಲಿಸಲು ಹಕ್ಕನ್ನು ಉಳ್ಳವರಾಗಿದ್ದಾರೆ. ತಮಗಿಷ್ಟವಾದ ದೇವರನ್ನು ಪೂಜಿಸುವ ಹಕ್ಕು ಪಡೆದಿದ್ದಾರೆ. ಸಂವಿಧಾನದ ಆರ್ಟಿಕಲ್‌ 15ರಲ್ಲಿ ಧರ್ಮ, ಜಾತಿ, ಲಿಂಗಬೇಧವಿಲ್ಲದೆ ಬದುಕುವ ಹಕ್ಕನ್ನು ದೇಶದ ಪ್ರಜೆಗಳಿಗೆ ನೀಡಿದೆ. ಹೀಗಿದ್ದರೂ, ಕೆಲವು ಮತಾಂಧರು ಧರ್ಮ-ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಇದು ಸಂವಿಧಾನ ವಿರೋಧಿ ಕ್ರಮ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕನಕಪುರ ತಾಲೂಕು ಹಾರೋಬೆಲೆ ಗ್ರಾಮದ ಬಳಿ ಕಪಾಲ ಬೆಟ್ಟದಲ್ಲಿ ಏಸು ಕ್ರಿಸ್ತ ಪ್ರತಿಮೆ ಸ್ಥಾಪನೆಗೆ ವಿರೋಧ ಸಲ್ಲದು. ಸಮಾಜದಲ್ಲಿ ಸಮಾನತೆಯನ್ನು ಸಾರಿದ ಕಾಯಕ ಯೋಗಿ ಬಸವಣ್ಣನ ಪ್ರತಿಮೆಯನ್ನು ಲಂಡನ್‌ನಲ್ಲಿ ಸ್ಥಾಪಿಸಲಾಗಿದೆ. ಕ್ರೈಸ್ತರ ನಾಡಿನಲ್ಲಿ ಭಾರತದ ಸಂತರೊಬ್ಬರ ಪ್ರತಿಮೆಯನ್ನು ಸ್ಥಾಪನೆಯಾಗಿದೆ. ವಿಶ್ವದ ಅನೇಕ ರಾಷ್ಟ್ರಗಳಲ್ಲಿ ಹಿಂದೂ ದೇವಾಲಯಗಳನ್ನು ನಿರ್ಮಿಸಲಾಗಿದೆ. ಇದು ಸಹ ಬಾಳ್ವೆಗೆ ಹಿಡಿದ ಕೈಗನ್ನಡಿ ಎಂದರು.

ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಧರ್ಮಾಧಾರಿತ ರಾಜಕರಣ ಮಾಡುತ್ತಿದೆ ಎಂದು ಆರೋಪಿಸಿದ ಅವರು, ಮತಾಂತರ ಮಾಡಲಾಗುತ್ತಿದೆ ಎಂಬ ಊಹಾ ಪೋಹಗಳನ್ನು ಇಟ್ಟುಕೊಂಡು ಏಸು ಕ್ರಿಸ್ತ ಪ್ರತಿಮೆ ನಿರ್ಮಾಣ ಕಾರ್ಯಕ್ಕೆ ಅಡ್ಡಿಪಡಿಸುತ್ತಿರುವ ಶಕ್ತಿಗಳನ್ನು ತಮ್ಮ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ ಎಂದರು.

ಏಸು ಕ್ರಿಸ್ತ ಪ್ರತಿಮೆ ಸ್ಥಾಪನೆಗೆ ತಮ್ಮ ಸಂಘಟನೆ ಬೆಂಬಲ ನೀಡುತ್ತದೆ. ಈ ವಿಚಾರದಲ್ಲಿ ನಡೆಯುವ ಎಲ್ಲಾ ಹೋರಾಟಗಳಿಗೂ ತಮ್ಮ ಸಂಘಟನೆ ಬೆಂಬಲ ನೀಡುತ್ತದೆ ಎಂದರು.

ಗೋಷ್ಠಿಯಲ್ಲಿ ಕೆ.ಎಸ್‌.ಎಸ್‌.ಡಿಯ ಜಿಲ್ಲಾ ಕಾರ್ಯಾಧ್ಯಕ್ಷ ಗುಡ್ಡೆ ವೆಂಕಟೇಶ, ಖಜಾಂಚಿ ಬಿ.ಎಸ್‌.ರುದ್ರೇಶ್‌, ಕನಕಪುರ ತಾಲೂಕು ಅಧ್ಯಕ್ಷ ಕೋಟೆ ಪ್ರಕಾಶ್‌, ರಾಮನಗರ ತಾಲೂಕು ಘಟಕದ ಅಧ್ಯಕ್ಷ ರಮೇಶ್‌, ಸಂಘಟನಾ ಕಾರ್ಯದರ್ಶಿ ಮಧು ಎಚ್‌.ಎಸ್‌.ಕೋಟೆ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.