Crime: ಸಂಗೀತ ಹೇಳಿ ಕೊಡುವ ನೆಪದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ;ಆರೋಪಿ ಬಂಧನ
Team Udayavani, Oct 7, 2023, 10:09 AM IST
ಕುದೂರು: ಸಂಗೀತ ಹೇಳಿ ಕೊಡುವ ನೆಪದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕುದೂರು ಪಟ್ಟಣದ ಮಹಾತ್ಮನಗರದಲ್ಲಿ ನಡೆದಿದೆ.
ಘಟನೆಯ ವಿವರ:
ಬಾಲಕಿ ಶಾಲೆಯಲ್ಲಿ ಹೂಟ್ಟೆ ನೋವು ಎಂದು ಹೇಳಿದಾಗ ಪೋಷಕರನ್ನು ಕರೆಸಿ ನಿಮ್ಮ ಮಗಳಿಗೆ ಹೂಟ್ಟೆನೋವು ಎಂದು ಹೇಳುತ್ತಿದ್ದಾರೆ ಚಿಕಿತ್ಸೆ ಕೂಡಿಸಿ ಎಂದು ಆಸ್ಪತ್ರೆಗೆ ಕಳುಹಿಸಿದ್ದಾರೆ. ಆಸ್ಪತ್ರೆಗೆ ಕರೆದುಕೂಂಡು ಹೋದಾಗ ಪೋಷಕರಿಗೆ ಮಗಳು ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ.
ಕುದೂರಿನ ನಿವಾಸಿ ರಾಮಾಂಜನೇಯ (48) ಕೃತ್ಯವೆಸೆಗಿರುವ ಬಂಧಿತ ಆರೋಪಿ.
15 ವರ್ಷದ ಅಪ್ರಾಪ್ತ ಬಾಲಕಿಗೆ ಸಂಗೀತ ಹೇಳಿ ಕೊಡುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸೆಗಿದ್ದು, ವಿದ್ಯಾರ್ಥಿನಿ ಶಾಲೆಗೆ ತೆರಳಿದ್ದ ವೇಳೆ ತೀವ್ರ ಹೂಟ್ಟೆ ನೋವಿನಿಂದ ಬಳಲಿದ್ದಾಳೆ. ಕೂಡಲೇ ಶಿಕ್ಷಕರು ಪೋಷಕರನ್ನು ಕರೆಸಿ ಮನೆಗೆ ಕಳುಹಿಸಿಕೂಟ್ಟಿದ್ದಾರೆ. ನಂತರ ಪೋಷಕರು ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಕರೆದುಕೂಂಡು ಹೋಗಿ ಪರೀಕ್ಷಿಸಿದಾಗ ಪೋಷಕರಿಗೆ ಬಾಲಕಿ ಗರ್ಭಿಣಿಯಾಗಿರುವ ವಿಷಯ ತಿಳಿದಿದೆ.
ಬಳಿಕ ಪೋಷಕರು ಬಾಲಕಿಯನ್ನು ವಿಚಾರಿಸಿದಾಗ ಸಂಗೀತ ಮಾಸ್ಟರ್ ನ ಕೃತ್ಯ ಎಂದು ಬಾಲಕಿ ತಿಳಿಸಿದ್ದಾಳೆ. ವಿಷಯ ತಿಳಿದ ಪೋಷಕರು ಆರೋಪಿ ವಿರುದ್ಧ ಪೂಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ತನಿಖೆ ಆರಂಭಿಸಿದ ಪೋಷಕರು ಆರೋಪಿಯನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ