ಎಲೆಕೇರಿಯಲ್ಲಿ ರಸ್ತೆ, ಚರಂಡಿ ಪ್ರಗತಿ ಮರೀಚಿಕೆ

ಡಾಂಬರೀಕರಣಗೊಂಡ ರಸ್ತೆಯಲ್ಲಿ ಗುಂಡಿಗಳೇ ಅಧಿಕ • ಚರಂಡಿಗೆ ಹೂಳು ತುಂಬಿ ರಸ್ತೆಗೆ ಹರಿಯುತ್ತಿದೆ ನೀರು

Team Udayavani, Aug 10, 2019, 2:58 PM IST

rn-tdy-1

ಡಾಂಬರೀಕರಣಗೊಂಡಿರುವ ರಸ್ತೆಯಲ್ಲಿ ಗುಂಡಿಗಳು ಬಿದ್ದಿರುವುದು.

ಚನ್ನಪಟ್ಟಣ: ಪಟ್ಟಣದ ಎಲೆಕೇರಿಯ ಅರ್ಧ ಭಾಗವನ್ನು ಹೊಂದಿರುವ 15ನೇ ವಾರ್ಡ್‌ ಸಹ ಚುನಾವಣೆ ನಡೆಯದೇ ಅವಿರೋಧವಾಗಿ ಜನಪ್ರತಿನಿಧಿಯನ್ನು ಆಯ್ಕೆ ಮಾಡಿಕೊಂಡು ಗಮನ ಸೆಳೆದಿತ್ತು. ಈ ಎಲೆಕೇರಿಯಲ್ಲಿ ರಸ್ತೆ, ಚರಂಡಿ, ಕಸದ ಸಮಸ್ಯೆ ಸಾಕಷ್ಟು ಇದೆ.

ದೇವರಹೊಸಹಳ್ಳಿ ರಸ್ತೆಯ ಬಲಭಾಗದಲ್ಲಿ ವಾರ್ಡ್‌ ಕೊಂಚ ಸಮಸ್ಯೆಗಳನ್ನು ನೀಗಿಸಿಕೊಂಡಿದೆ. ಆದರೆ, ಎಡಭಾಗದಲ್ಲಿ ಮೂಲಭೂತ ಸಮಸ್ಯೆಗಳು ಕಾಡುತ್ತಿವೆ. ಮಣ್ಣಿನ ರಸ್ತೆ, ಚರಂಡಿ ಇಲ್ಲದ ಕಾರಣ ಕೊಳಚೆ ನೀರು ನಿಂತು ಗಬ್ಬುನಾರುತ್ತಿದೆ. ಕಿತ್ತುಹೋಗಿರುವ ಡಾಂಬರು, ಕಾಂಕ್ರೀಟ್ ರಸ್ತೆಗಳು ಆಡಳಿತದ ನಿರ್ಲಕ್ಷ್ಯವನ್ನು ಸಾರುತ್ತಿವೆ.

ಚರಂಡಿಗಳಲ್ಲಿ ತುಂಬಿಕೊಂಡಿದೆ ಹೂಳು: ರಾಂಪುರ ಅಡ್ಡರಸ್ತೆಯಲ್ಲಿ ಡಾಂಬರೀಕರಣಗೊಂಡಿರುವ ರಸ್ತೆ ಕಳಪೆ ಕಾಮಗಾರಿಯಿಂದಾಗಿ ಗುಂಡಿಗಳು ಬಿದ್ದಿದೆ. ರಸ್ತೆಯ ಎರಡೂ ಬದಿಯ ಚರಂಡಿಗಳು ಹೂಳು ತುಂಬಿಕೊಂಡು ಎಲೆಕೇರಿಯ ಕೊಳಚೆ ನೀರು ರಸ್ತೆಗೇ ಹರಿಯುತ್ತಿದೆ. ಮೊರಾರ್ಜಿ ದೇಸಾಯಿ ಶಾಲೆಯ ಪಕ್ಕದ ರಸ್ತೆಯ ಪರಿಸ್ಥಿತಿಯೂ ಹೀಗೆಯೇ ಇದೆ. ಈ ರಸ್ತೆಯಲ್ಲಿ ಎರಡೂ ಬದಿಯಲ್ಲಿ ಚರಂಡಿ ಸುಸ್ಥಿತಿಯಲ್ಲಿಲ್ಲ. ಚರಂಡಿಗಳು ಮುಚ್ಚಿಕೊಂಡು ಕೊಳಚೆ ನೀರು ಹರಿಯದೇ ನಿವಾಸಿಗಳು ನರಕಯಾತನೆ ಅನುಭವಿಸುತ್ತಿದ್ದಾರೆ.

ಮಳೆ ಬಂದಾಗ ರಸ್ತೆ ಗದ್ದೆ: ಇನ್ನು ನ್ಯೂ ಎಕ್ಸ್‌ಟೆನ್ಷನ್‌ನಲ್ಲಿ ರಸ್ತೆ ಅಭಿವೃದ್ಧಿಯೇ ಆಗಿಲ್ಲ, ಮಣ್ಣಿನ ರಸ್ತೆಯನ್ನೇ ನಿವಾಸಿಗಳು ಬಳಸುತ್ತಿದ್ದಾರೆ. ಮಳೆ ಬಂದಾಗ ರಸ್ತೆ ಗದ್ದೆಯಂತಾಗಿ ಓಡಾಡಲು ಆಗದಂತಾಗುತ್ತದೆ. ರಸ್ತೆಯೇ ಇಲ್ಲವೆಂದ ಮೇಲೆ ಚರಂಡಿ ಸ್ಥಿತಿ ಹೇಳಬೇಕಿಲ್ಲ. ಚರಂಡಿಗಳ ಅಸ್ತಿತ್ವವೇ ಇಲ್ಲವಾಗಿದೆ. ಇರುವ ಚರಂಡಿಗಳು ಹಳೆಯದಾಗಿದ್ದು, ಅವುಗಳು ಹೂಳು ತುಂಬಿಕೊಂಡು ಅಲ್ಲಲ್ಲಿ ಕೊಳಚೆ ನೀರು ಹರಿಯುತ್ತಿಲ್ಲ.

ಕಸದ ಸಮಸ್ಯೆಯೂ ಹೆಚ್ಚಿದೆ: ಕಸದ ಸಮಸ್ಯೆ ಎಲೆಕೇರಿಯಲ್ಲಿ ಹೆಚ್ಚಾಗಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಎದುರಿಗೇ ಕಸದ ಗುಡ್ಡೆ ಬಿದ್ದಿದ್ದು, ಮಕ್ಕಳು ಆ ವಾಸನೆ ಸಹಿಸಿಕೊಂಡು ವಿದ್ಯಾರ್ಜನೆ ಮಾಡಬೇಕಿದೆ. ಶಾಲೆಯ ಎದುರಿಗೇ ಬಿದ್ದಿದ್ದರೂ ಅದನ್ನು ತೆರವು ಮಾಡಲು ಸಂಬಂಧಪಟ್ಟವರು ಗಮನಹರಿಸುತ್ತಿಲ್ಲ. ಅಥವಾ ಬೇರೆಡೆಗೆ ಕಸ ಹಾಕುವ ಸ್ಥಳವನ್ನು ನಿಗದಿಪಡಿಸುವ ಕೆಲಸ ಮಾಡಿಲ್ಲ, ಮೂರ್‍ನಾಲ್ಕು ದಿನ ಕಸ ಎತ್ತದಿದ್ದರೆ ಕಸದ ರಾಶಿಯೇ ನಿರ್ಮಾಣವಾಗುತ್ತದೆ. ಬೀದಿನಾಯಿ, ಹಂದಿಗಳು ಕಸವನ್ನು ತಿನ್ನಲು ಆಗಮಿಸುತ್ತವೆ. ಮಕ್ಕಳು ಸಮಸ್ಯೆ ಎದುರಿಸಿಕೊಂಡೇ ಶಾಲಾ ಆವರಣದಲ್ಲಿ ಓಡಾಡುವ ಪರಿಸ್ಥಿತಿ ಎದುರಾಗಿದೆ.

ನೀರು, ಬೀದಿದೀಪ ಸಮಸ್ಯೆ ಇಲ್ಲ: ಉಳಿದಂತೆ ದೇವರಹೊಸಹಳ್ಳಿ ರಸ್ತೆ ಬಲಭಾಗದಲ್ಲಿ ರಸ್ತೆ ಕಾಂಕ್ರೀಟೀಕರಣಗೊಂಡಿವೆ. ಅಲ್ಲಲ್ಲಿ ಆ ರಸ್ತೆಗಳೂ ಗುಂಡಿಬಿದ್ದಿವೆ. ಕೆಲವು ರಸ್ತೆಗಳನ್ನು ಡಾಂಬರೀಕರಣಗೊಳಿಸಲಾಗಿದೆ. ಕುಡಿಯುವ ನೀರು, ಬೀದಿದೀಪ ಸಮಸ್ಯೆ ಎಲೆಕೇರಿಯಲ್ಲಿ ಇಲ್ಲ. ಕಾವೇರಿ, ಬೋರ್‌ವೆಲ್ ನೀರು ಸರಬರಾಜಾಗುವುದರಿಂದ ಈ ಸಮಸ್ಯೆಯಿಂದ ಎಲೆಕೇರಿ ಮುಕ್ತವಾಗಿದೆ. ಎಲೆಕೇರಿಯಲ್ಲಿ ಬಹುತೇಕ ಕಾಮಗಾರಿಗಳು ಆಗಬೇಕಿದೆ.

ಒಟ್ಟಾರೆ ಎಲೆಕೇರಿಯಲ್ಲಿ ಅಭಿವೃದ್ಧಿಯಾಗಿರುವುದಕ್ಕಿಂತ ಸಾಕಷ್ಟು ಅಭಿವೃದ್ಧಿ ಇನ್ನಷ್ಟು ಆಗಬೇಕಿದೆ. ಪ್ರಮುಖವಾಗಿ ರಸ್ತೆ, ಚರಂಡಿ ಕಾಮಗಾರಿಗಳು ಇಲ್ಲಿ ಆಗಬೇಕಿದ್ದು, ಆಗ ಮಾತ್ರ ನಿವಾಸಿಗಳು ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತದೆ.

ಪ್ರತಿನಿತ್ಯ ಕಸ ವಿಲೇವಾರಿಗೆ ಕ್ರಮ ಕೈಗೊಳ್ಳಲು ಆಗ್ರಹ:

ಬಹುತೇಕ ರಸ್ತೆಗಳ ಬದಿಗಳಲ್ಲಿ ಚರಂಡಿಗಳು ಸಮರ್ಪಕವಾಗಿಲ್ಲ. ಚರಂಡಿಯಲ್ಲಿ ನೀರು ಹರಿಯದೇ ರಸ್ತೆಗೆ ಬರುವ ಸ್ಥಿತಿ ಇದೆ. ಮೊರಾರ್ಜಿ ದೇಸಾಯಿ ಶಾಲೆಯ ಎದುರೇ ಕಸವನ್ನು ರಾಶಿ ಹಾಕಲಾಗುತ್ತಿದೆ. ಇದರಿಂದ ಮಕ್ಕಳಿಗೆ ಸಾಕಷ್ಟು ಸಮಸ್ಯೆ ಎದುರಾಗುತ್ತಿದೆ. ವಸತಿ ಶಾಲೆಯಾಗಿರುವುದರಿಂದ ವಿದ್ಯಾರ್ಥಿಗಳು ದಿನವಿಡೀ ಕಸದ ವಾಸನೆ ಸಹಿಸಿಕೊಳ್ಳಬೇಕಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಪ್ರತಿನಿತ್ಯ ಕಸ ವಿಲೇವಾರಿ ಮಾಡುವಂತೆ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಸ್ಥಳೀಯ ನಿವಾಸಿ ರಾಜಶೇಖರ್‌ ಆಗ್ರಹಿಸಿದ್ದಾರೆ.
● ಎಂ.ಶಿವಮಾದು

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.