ಹಾಸ್ಟೆಲ್ಗೆ ವಿದ್ಯಾರ್ಥಿಗಳ ಕೊರತೆ: ಎಚ್ಚರಿಕೆ
Team Udayavani, Nov 28, 2019, 5:37 PM IST
ಮಾಗಡಿ: ಹಿಂದುಳಿದ ವರ್ಗಗಳ ಹಾಸ್ಟೆಲ್ಗೆ ಅಗತ್ಯ ಸೌಲತ್ತುಗಳನ್ನು ಒದಗಿಸಲಾಗುತ್ತಿದೆ. ಆದರೂ ಹೆಚ್ಚಿನ ವಿದ್ಯಾರ್ಥಿಗಳು ಹಾಸ್ಟೆಲ್ಗೆ ಬಾರದೆ ಇರುವುದು ಬೇಸರ ತಂದಿದೆ. ಇಲ್ಲಿನ ಸಿಬ್ಬಂದಿ ವಿದ್ಯಾರ್ಥಿಗಳನ್ನು ಹಾಸ್ಟೆಲ್ಗೆ ಕರೆ ತರುವ ಪ್ರಯತ್ನ ಮಾಡಬೇಕು. ಇಲ್ಲದಿದ್ದರ ಸಂಬಳ ನಿಲ್ಲಿಸಲಾಗುವುದು ಎಂದು ಜಿಲ್ಲಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಬಸವರಾಜು ಎಚ್ಚರಿಕೆ ನೀಡಿದರು.
ಮಾಗಡಿ ಪಟ್ಟಣದ ಸೋಮೇಶ್ವರಸ್ವಾಮಿ ದೇವಸ್ಥಾನದ ಹತ್ತಿರುವಿರುವ ಹಿಂದುಳಿದ ವರ್ಗಗಳ ಹಾಸ್ಟೆಲ್ಗೆ ಭೇಟಿ ನೀಡಿ ಅಲ್ಲಿನ ಸ್ವಚ್ಛತೆ, ಊಟದ ಗುಣ ಮಟ್ಟವನ್ನು ಪರಿಶೀಲಿಸಿ ಮಾತನಾಡಿದ ಅವರು, 100 ವಿದ್ಯಾರ್ಥಿಗಳು ಇರಬೇಕಾದ ಈ ಹಾಸ್ಟೆಲ್ನಲ್ಲಿ ಕೇವಲ 7 ವಿದ್ಯಾರ್ಥಿಗಳು ಸೇರ್ಪಡೆಯಾಗಿರುವುದುನೋಡಿದರೆ ತುಂಬ ಬೇಸರವಾಗುತ್ತಿದೆ. ಬಡ ವಿದ್ಯಾರ್ಥಿಗಳು ಹಾಸ್ಟೆಲ್ನಲ್ಲಿ ಉಳಿದುಕೊಂಡುಉತ್ತಮ ವಿದ್ಯಾಭ್ಯಾಸ ಮಾಡಲಿ ಎಂದು ಸರ್ಕಾರ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ವಿಶೇಷ ಕಾರ್ಯಕ್ರಮಗಳನ್ನು ಕೊಡುತ್ತಿದೆ. ಇದನ್ನು ಸಮರ್ಪಕವಾಗಿ ಬಳಸಿಕೊಳ್ಳದೆ ಇರುವುದು ನಿಜಕ್ಕೂ ನಮಗೆಬೇಸರ ತಂದಿದೆ. ಇನ್ನಾದರೂ ಇಲ್ಲಿನ ಸಿಬ್ಬಂದಿಗೆ ಹೆಚ್ಚಿನ ವಿದ್ಯಾರ್ಥಿಗಳನ್ನು ಹಾಸ್ಟೆಲ್ಗೆ ಕರೆತರುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ತಾಕೀತು ಮಾಡಿದರು.
ತಾಲೂಕು ಪಂಚಾಯ್ತಿ ಇಓ ಟಿ.ಪ್ರದೀಪ್ ಮಾತನಾಡಿ, ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲ ಕಲ್ಪಿಸಲೆಂದು ಮಾಗಡಿ ಪಟ್ಟಣದಲ್ಲಿ ಹಿಂದುಳಿದ ವರ್ಗಗಳ ಉತ್ತಮ ಹಾಸ್ಟೆಲ್ ಪ್ರಾರಂಭಿಸಿದೆ. ನೂರಾರು ವಿದ್ಯಾರ್ಥಿಗಳು ಇರಬೇಕಾದ ಈ ಹಾಸ್ಟೆಲ್ನಲ್ಲಿ ಮಕ್ಕಳ ಸಂಖ್ಯೆತುಂಬ ಕಡಿಮೆಯಿದೆ. ಪ್ರಚಾರದ ಕೊರತೆಯಿಂದಲೋ ಏನೋ ಹಾಸ್ಟೆಲ್ಗೆ ವಿದ್ಯಾರ್ಥಿಗಳು ಸೇರ್ಪಡೆಯಾಗದೆ ಇರುವುದು ತುಂಬ ಬೇಸರವಾಗುತ್ತಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ಅಗತ್ಯ ಕ್ರಮ ವಹಿಸಲಬೇಕಿದೆ. ಬೀದಿ ದೀಪ ಮತ್ತು ಹಾಸ್ಟೆಲ್ ಹೊರಗಡೆ ಸ್ವಚ್ಛತೆ ಮರೀಚಿಕೆಯಾಗಿದೆ. ಪುರಸಭೆ ಮುಖ್ಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸ್ವತ್ಛತೆಗೆ ಸೂಕ್ತ ಕ್ರಮ ವಹಿಸಲು ಸೂಚನೆ ನೀಡುವುದಾಗಿ ತಿಳಿಸಿದರು.
ಅನೈತಿಕ ಚಟುವಟಿಕೆಗೆ ಅವಕಾಶ ನೀಡ ದಂತೆಯೂ ಹಾಸ್ಟೆಲ್ ವಾರ್ಡ್ನ್ ಭರತ್ಗೆ ಸೂಚಿಸಿದರು. ಇದೇ ವೇಳೆ ವಿದ್ಯಾರ್ಥಿಗಳೊಂದಿಗೆ ಅಧಿಕಾರಿಗಳು ಸಮಸ್ಯೆ ಆಲಿಸಿದರು.