ಕಂದಾಯ ಜಾಗ ಭೂಸ್ವಾಧೀನ


Team Udayavani, Oct 18, 2020, 6:15 PM IST

rn-tdy-1

ಕನಕಪುರ:ಕಂದಾಯಇಲಾಖೆಯಜಾಗವನ್ನು ರಸ್ತೆ ಅಗಲೀಕರಣಕ್ಕೆ ಭೂಸ್ವಾಧೀನದ ಹೆಸರಿನಲ್ಲಿ ಸರ್ಕಾರಕ್ಕೆ ನೀಡಿ ಅದರಿಂದ ಬಂದ ಕೋಟ್ಯಂತರ ಹಣವನ್ನು ಗಣ್ಯವ್ಯಕ್ತಿಗಳೂಂದಿಗೆ ಗ್ರಾಮ ಪಂಚಾಯ್ತಿ ಅಧಿಕಾರಿಗಳು ಶಾಮೀಲಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಗಂಭೀರ ಆರೋಪ ವ್ಯಾಪಕವಾಗಿ ಕೇಳಿ ಬಂದಿದೆ.

ರಸ್ತೆ ಅಗಲೀಕರಣಕ್ಕೆ ಭೂಸ್ವಾಧಿನವಾಗಿರುವ ತಾಲೂಕಿನಕಸಬಾಹೋಬಳಿಯರಾಯಸಂದ್ರ ಗ್ರಾಮದ ಕೆರೆ ಜಾಗ ಮತ್ತು ಸರ್ಕಾರಿ ಗುಂಡುತೋಪುಗಳನ್ನು ಅಕ್ರಮವಾಗಿ ಖಾತೆಮಾಡಿ, ಬಂದ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ತಾಲೂಕು ಆಡಳಿತ ಸ್ಥಳ ‌ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಮತ್ತು ದುರ್ಬಳಕೆಯಾಗಿರುವ ಹಣವನ್ನು ತಾಲೂಕು ಆಡಳಿತದ ವಶಕ್ಕೆ ಪಡೆಯಬೇಕು ಎಂದು ತಾಲೂಕು ಆಡಳಿತಕ್ಕೆ ಬಂದ 2 ಪ್ರತ್ಯೇಕ ದೂರುಗಳ ಹಿನ್ನೆಲೆಯಲ್ಲಿ ತಹಶೀಲ್ದಾರ್‌ ವರ್ಷಾ ಒಡೆಯರ್‌ ಸದರಿ ಸ್ಥಳಕ್ಕೆ  ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಕ್ರಮ ಖಾತೆ: ಕಸಬಾ ಹೋಬಳಿ ತುಗಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಯಸಂದ್ರ ಗ್ರಾಮದ ಸರ್ವೆ ನಂ.45 ರಲ್ಲಿ 1 ಎಕರೆ 30 ಗುಂಟೆ. ಮತ್ತು ಸರ್ವೆ ನಂ.46 ರಲ್ಲಿ1ಎಕರೆ31 ಗುಂಟೆ ಸೇರಿ ಒಟ್ಟು 3.5 ಎಕರೆಗೂ ಹೆಚ್ಚಿನ ಸರ್ಕಾರಿ ಕೆರೆ ರಾಷ್ಟ್ರೀಯ ಹೆದ್ದಾರಿ 209ಗೆ ಹೊಂದಿಕೊಂಡಿದ್ದು, ಕೆಲವು ವ್ಯಕ್ತಿಗಳೂಂದಿಗೆ ತುಂಗಣಿ ಪಿಡಿಒ, ಗ್ರಾಮ ಲೆಕ್ಕಿಗ ಹಾಗೂ ಕಾರ್ಯನಿರ್ವಹಕ ಅಧಿಕಾರಿ ಶಾಮೀಲಾಗಿ ಸರ್ಕಾರಿ ರವಿನ್ಯೂ ಜಾಗವನ್ನು ತಾಲೂಕು ಆಡಳಿತದ ಗಮನಕ್ಕೆ ತರದೆ ನಿವೇಶನಕ್ಕೆ ಹಂಚಿಕೆ ಮಾಡುವ ನೆಪದಲ್ಲಿ ಆಕ್ರಮವಾಗಿ ಗ್ರಾಮ ಪಂಚಾಯ್ತಿಯಿಂದ ಸುಮಾರು 32 ನಿವೇಶನಗಳಾಗಿ ವಿಂಗಡಿಸಿ 9.11 ಖಾತೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

2.5 ಕೋಟಿ ರೂ.ದುರ್ಬಳಕೆ: ಸದರಿ ಜಾಗ ರಾಷ್ಟ್ರೀಯ ಹೆದ್ದಾರಿಗೆ ಭೂಸ್ವಾಧಿನವಾಗಿದ್ದು, ಅದರಿಂದ ಬಂದ2.5ಕೋಟಿ ರೂ. ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಜತೆಗೆ ಪಕ್ಕದಲ್ಲಿರುವ ಸುಮಾರು 7 ಎಕರೆ ಸರ್ಕಾರಿ ಗುಂಡು ತೋಪಿನಿಂದಲೂ ರಸ್ತೆಅಗಲೀಕರಣಕ್ಕೆ ಭೂಸ್ವಾಧೀನವಾಗಿದ್ದು, ಅದರಿಂದಲೂ ಸುಮಾರು 50 ಲಕ್ಷ ರೂ. ಪಡೆದು ವಂಚಿಸಲಾಗಿದೆ ಎಂದು2ಪ್ರತ್ಯೇಕ ದೂರುಗಳು ತಾಲೂಕು ಆಡಳಿತಕ್ಕೆ ಸಲ್ಲಿಕೆಯಾಗಿವೆ.

ದೂರು ಪರಿಗಣಿಸಿರುವ ತಹಶೀಲ್ದಾರ್‌ ವರ್ಷಾ ಒಡೆಯರ್‌ ಕಂದಾಯ ಇಲಾಖೆ ಅಧಿಕಾರಿಗಳ ತಂಡದೊಂದಿಗೆ ಸದರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ 2 ಕೆರೆ ಮತ್ತು ಗುಂಡುತೋಪಿನ ಸರ್ವೆ ನಡೆಸಿ ಗಡಿ ಗುರುತಿಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ವೇಳೆ ತಾಲೂಕು ಕಂದಾಯ ಅಧಿಕಾರಿ ಶಿವರುದ್ರಯ್ಯ, ಸರ್ವೆ ಇಲಾಖೆಯ ಪವನ್‌, ಚಂದ್ರೇಗೌಡ, ಸಿಬ್ಬಂದಿ ಲೋಕೇಶ್‌, ಗ್ರಾಮ ಸಹಾಯಕ ರಾಘವೇಂದ್ರ ಸ್ಥಳದಲ್ಲಿದ್ದರು.

ತಾಲೂಕು ಆಡಳಿತ ಕಂದಾಯ ಜಾಗವನ್ನು ಆಶ್ರಯಕ್ಕೆ ಮಂಜೂರು ಮಾಡಿಖಾತೆ ಮಾಡಿಕೊಟ್ಟಿದ್ದರೆ, ಮಾತ್ರಹೆದ್ದಾರಿ ಪ್ರಾಧಿಕಾರಹಣಬಿಡುಗಡೆಮಾಡಲು ಸಾಧ್ಯಜತೆಗೆಯಾವುದೇ ನಿವೇಶನಹಂಚಿಕೆಯಾಗಲಿ ಖಾತೆಯಾಗಲಿ ಮಾಡಿಕೊಟ್ಟಿಲ್ಲ. ಶಿವರಾಮು, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.