ಸುಸಜ್ಜಿತ ರಸ್ತೆಗಳಿಂದ ಧಾರ್ಮಿಕ ಕ್ಷೇತ್ರ, ಮಠಗಳ ಅಭಿವೃದ್ಧಿ ಸಾಧ್ಯ
Team Udayavani, Mar 23, 2021, 1:51 PM IST
ಕನಕಪುರ: ಧಾರ್ಮಿಕ ಕ್ಷೇತ್ರಗಳು, ಮಠಮಾನ್ಯಗಳುಸಂಘ-ಸಂಸ್ಥೆಗಳು ಅಭಿವೃದ್ಧಿಯಾಗಬೇಕಾದರೆಸುಸಜ್ಜಿತ ರಸ್ತೆ ಮಾರ್ಗಗಳು ಅವಶ್ಯಕ ಎಂದುಮರಳೆಗವಿ ಮಠದ ಶಿವರುದ್ರ ಸ್ವಾಮೀಜಿ ತಿಳಿಸಿದರು.
ತಾಲೂಕಿನ ಉಯ್ಯಂಬಳ್ಳಿ ಹೋಬಳಿಯಮರಳೆಗವಿ ಮಠದ ರಸ್ತೆ ಅಗಲೀಕರಣ ಹಾಗೂಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿಮಾತನಾಡಿದ ಅವರು, ಮಠದ ಆವರಣದಲ್ಲಿತೋಂಟದ ಯಡಿಯೂರು ಸಿದ್ದಲಿಂಗೇಶ್ವರರುತಪಸ್ಸು ಮಾಡಿದಂತಹ ಸ್ಥಳವಿದೆ. ಅಲ್ಲಿನಿರ್ಮಾಣವಾಗುತ್ತಿರುವ ಭವ್ಯ ಕಟ್ಟಡ ಕೆಲವೇದಿನಗಳಲ್ಲಿ ಪೂರ್ಣಗೊಂಡು ಲೋಕರ್ಪಣೆಗೊಳ್ಳಲಿದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಮಠಕ್ಕೆ ಭಕ್ತರು ಆಗಮಿಸುವ ನಿರೀಕ್ಷೆಇದೆ. ಶ್ರೀಮಠಕ್ಕೆ ಸುಸಜ್ಜಿತ ರಸ್ತೆ ಅಗತ್ಯವಿತ್ತು. ಈಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪನವರನ್ನು ಖುದ್ದು ಭೇಟಿ ಮಾಡಿ ರಸ್ತೆ ಅಗಲೀಕರಣದ ಬಗ್ಗೆ ಮನವರಿಕೆ ಮಾಡಿಕೊಡಲಾಗಿತ್ತು. ಯಾವುದೇಸಂಘ ಸಂಸ್ಥೆಗಳು ಧಾರ್ಮಿಕ ಕೇಂದ್ರಗಳು ಅಭಿವೃದ್ಧಿ ಆಗಬೇಕಾದರೆ ಸುಸಜ್ಜಿತ, ವಿಶಾಲ ರಸ್ತೆಮಾರ್ಗಗಳು ಅಗತ್ಯ. ಆ ನಿಟ್ಟಿನಲ್ಲಿ ಸಿಎಂ ನಮ್ಮ ಮನವಿಗೆ ಓಗೊಟ್ಟು ಶ್ರೀಮಠಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಗಲೀಕರಣಕ್ಕೆ ಮೊದಲ ಹಂತದಲ್ಲಿ 1.5 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಉಳಿಕೆ ರಸ್ತೆಯ ಅಗಲೀಕರಣಕ್ಕೆ ಬೇಕಾಗುವ ಅನುದಾನ ಭರಿಸುವುದಾಗಿಯೂ ಭರವಸೆ ನೀಡಿದ್ದಾರೆ ಎಂದು ಹೇಳಿದರು.
ರಸ್ತೆ ಅಭಿವೃದ್ಧಿ ಕಾಮಗಾರಿ ಕಾರ್ಯಾರಂಭಮಾಡಬೇಕೆಂಬ ಇಲಾಖೆಯ ಸೂಚನೆ ಮೇರೆಗೆರಸ್ತೆ ಅಗಲೀಕರಣದ ಕಾಮಗಾರಿಗೆ ಭೂಮಿ ಪೂಜೆನೆರವೇರಿಸಲಾಗಿದೆ. ಗುತ್ತಿಗೆದಾರರಾದ ದಿನೇಶ್ಒಂದು ತಿಂಗಳ ಒಳಗಾಗಿ ಗುಣಮಟ್ಟದ ರಸ್ತೆನಿರ್ಮಾಣ ಮಾಡಿಕೊಡುವ ಭರವಸೆ ನೀಡಿದ್ದಾರೆ. ಶಾಸಕ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳಸಹಕಾರದಿಂದ ಮರಳೆಗವಿ ಮಠ ಅಭಿವೃದ್ಧಿಯತ್ತ ಸಾಗಲಿದೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಜಯ್ದೇವ್,ಜಿಪಂ ಸದಸ್ಯ ಶಿವಕುಮಾರ್, ತಾಪಂ ಅಧ್ಯಕ್ಷನಾಗು, ಪಿಡಬ್ಲ್ಯೂಡಿ ಇಲಾಖೆಯ ಎಇಇಮೂರ್ತಿ, ಎಇ ಅಪ್ಪಣ್ಣ, ಗುತ್ತಿಗೆದಾರ ದಿನೇಶ್, ಭರತ್, ಪಿಡಿಒ ಶಿವಣ್ಣ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…