ಕಾಂಗ್ರೆಸ್‌ ಆಡಳಿತಕ್ಕೆ ತಿಲಾಂಜಲಿ


Team Udayavani, May 11, 2018, 2:31 PM IST

naindoor-1_0.jpg

ಮಾಗಡಿ: ರಾಜ್ಯದಲ್ಲಿ ಜನಪರವಾದ ಯೋಜನೆಗಳನ್ನು ಜಾರಿಗೆ ತರಬೇಕಾದರೆ ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬೇಕು. ಮಾಗಡಿ ಕ್ಷೇತ್ರದಲ್ಲಿ ಶಾಶ್ವತದ ಹೇಮಾವತಿ ನೀರಾವರಿ ಯೋಜನೆ ಪೂರ್ಣಗೊಳ್ಳಲು ಜೆಡಿಎಸ್‌ ಅಭ್ಯರ್ಥಿ ಎ.ಮಂಜುನಾಥ್‌ ಅವರನ್ನು ಅತ್ಯಾಧಿಕ ಮತಗಳಿಂದ ಗೆಲ್ಲಿಸಿಕೊಳ್ಳುವ ಮೂಲಕ ವಿರೋಧಿ ಕಾಂಗ್ರೆಸ್‌ ಅಭ್ಯರ್ಥಿ ಎಚ್‌.ಸಿ.ಬಾಲಕೃಷ್ಣ ಅವರ ಆಡಳಿತಕ್ಕೆ ತಿಲಾಂಜಲಿಯಾಡಬೇಕು ಎಂದು ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಪೂಜಾರಿಪಾಳ್ಯದ ಕೆ.ಕೃಷ್ಣಮೂರ್ತಿ ತಿಳಿಸಿದರು.

ಪಟ್ಟಣದ ಕೆಂಪೇಗೌಡ ಬಯಲು ರಂಗಮಂದಿರದಲ್ಲಿ ಜೆಡಿಎಸ್‌ ನಿಂದ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ 20 ವರ್ಷಗಳಿಂದ ಶಾಸಕರಾಗಿದ್ದ ಎಚ್‌.ಸಿ.ಬಾಲಕೃಷ್ಣ ಅವರು ಕ್ಷೇತ್ರ ಶಾಶ್ವತವಾದ ನೀರಾವರಿ ಯೋಜನೆಯನ್ನು ಅನಷ್ಠಾನಗೊಳಿಸಲಿಲ್ಲ. 

ಹುರುಳಿಕಾಳು ಬೆಳೆಯುತ್ತಿದ್ದಾರೆ: ಈಗ ನೀರಾವರಿ ಯೋಜನೆ ಅನುಷ್ಠಾನಗೊಳಿಸುವುದಾಗಿ ಮತದಾರರಿಗೆ ಆಸೆ ಹುಟ್ಟಿಸಿ ಮತ ಕಸಿಯುವ ಯತ್ನ ಮಾಡುತ್ತಿರುವ ಇವರು, 20 ವರ್ಷಗಳ ಶಾಸಕರಾಗಿದ್ದುಕೊಂಡು ನೀರಾವರಿ ಯೋಜನೆ ತರದೆ ಹುಲಿಕಟ್ಟೆಯಲ್ಲಿ ಹುರುಳಿಕಾಳು ಬೆಳೆಯುತ್ತಿದ್ದಾರೆ.

20 ವರ್ಷಗಳಿಂದ ಕ್ಷೇತ್ರದಲ್ಲಿ ದುಡಿದ್ದಿದ್ದರೆ ಮತದಾರರ ಕೈ ಕಾಲು ಹಿಡಿದು ಮತ ಕೇಳುವ ಅಗತ್ಯವಿರಲಿಲ್ಲ. ಹಗರಣಗಳ ಸರ್ದಾರ ಎಚ್‌.ಸಿ.ಬಾಲಕೃಷ್ಣ ಹಣಕ್ಕಾಗಿ ಕ್ಷೇತ್ರದ 2 ಲಕ್ಷ ಮತದಾರರ ಸ್ವಾಭಿಮಾನವನ್ನೇ ಹರಾಜು ಹಾಕಿರುವ ಇವರಿಗೆ ಈ ಬಾರಿ ಮತದಾರರು ತಕ್ಕ ಪಾಠ ಕಲಿಸಬೇಕಿದೆ ಎಂದು ಎಚ್‌.ಸಿ.ಬಾಲಕೃಷ್ಣ ವಿರುದ್ಧ ಲೇವಡಿ ಮಾಡಿದರು.

ಮತ ಮನವಿ: ಜೆಡಿಎಸ್‌ ರೈತ ಪರವಾದ ಸರ್ಕಾರವಾಗಿದ್ದು, ಜನಪರವಾದ ಯೋಜನೆ ಜಾರಿಗೆ ಬರಬೇಕಾದರೆ ಎಚ್‌ಡಿಕೆ ಸಿಎಂ ಆಗಬೇಕು. ಆದ್ದರಿಂದ ಜೆಡಿಎಸ್‌ಗೆ ಮತನೀಡಬೇಕು. ಮಾಗಡಿ ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಾಣಬೇಕಾದರೆ ಜೆಡಿಎಸ್‌ ಅಭ್ಯರ್ಥಿ ಎ.ಮಂಜು ಅವರಿಗೆ ಕ್ಷೇತ್ರದ ಜನತೆ ಮತ ಹಾಕುವ ಮೂಲಕ ಗೆಲ್ಲಿಸಿಕೊಳ್ಳಬೇಕಿದೆ ಎಂದು ಹೇಳಿದರು.

ಪಟ್ಟಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಂ.ಎನ್‌.ಮಂಜುನಾಥ್‌, ಪುರಸಭಾ ಸದಸ್ಯರಾದ ಕೆ.ವಿ.ಬಾಲು, ಮಹೇಶ್‌, ಶಿವಕುಮಾರ್‌, ಎಸ್‌.ಮಹದೇವ್‌ ಜೆಡಿಎಸ್‌ ಮುಖಂಡ, ಕಲ್ಕೆರೆ ಶಿವಣ್ಣ, ಗಿರಿಯಪ್ಪ, ಮಾರೇಗೌಡ, ಪೊಲೀಸ್‌ ರಾಮಣ್ಣ, ಚಂದ್ರಮ್ಮ, ನಂಜಯ್ಯ, ದೊಡ್ಡಯ್ಯ, ಡಿ.ಜಿ.ಕುಮಾರ್‌, ಜೈಕುಮಾರ್‌ ನರಸೇಗೌಡ, ಜುಟ್ಟನಹಳ್ಳಿ ಜಯರಾಂ ಇತರರು ಇದ್ದರು.

ಮೊಬೈಲ್‌ ಮೂಲಕವೇ ಮನವಿ: ಮಾಗಡಿಯಲ್ಲಿ ಎಚ್‌ಡಿಕೆ ನೇತೃತ್ವದ ಬಹಿರಂಗ ಸಭೆ ಏರ್ಪಡಿಸಲಾಗಿತ್ತು. ಎಚ್‌ಡಿಕೆ ಭಾಷಣ ಕೇಳಲು ಜನಸಾಗರ ಹರಿದು ಬಂದಿತ್ತು. ಆದರೆ ಅನಾರೋಗ್ಯ ನಿಮಿತ್ತ  ಸಭೆಗೆ ಆಗಮಿಸದೆ ಮೊಬೈಲ್‌ ಮೂಲಕವೇ ಜೆಡಿಎಸ್‌ ಪಕ್ಷದ ಜನಪರವಾದ ಯೋಜನೆ ಜಾರಿ,

ವಿರೋಧಿ ಎಚ್‌.ಸಿ.ಬಾಲಕೃಷ್ಣ ಅವರ ದೂರಾಡಳಿತದ ವಿರುದ್ಧ ಹರಿಹಾಯ್ದ ಎಚ್‌.ಡಿ.ಕುಮಾರಸ್ವಾಮಿ ಅವರು ಮತದಾರರಲ್ಲಿ ಮನವಿ ಮಾಡಿ ತನಗೆ ಆರೋಗ್ಯ ಕೈಕೊಟ್ಟಿದೆ. ಮಾಗಡಿಗೆ ಬರಲು ಆಗುತ್ತಿಲ್ಲ, ಇಲ್ಲಿಂದಲೇ ತಮ್ಮಲ್ಲಿ ಕೈಮುಗಿದು ಬೇಡಿಕೊಳ್ಳುತ್ತೇನೆ. ಯಾರ ಮಾತನ್ನು ಕೇಳಬೇಡಿ, ಜೆಡಿಎಸ್‌ ಬೆಂಬಲಿಸಲು ಮನವಿ ಮಾಡಿದರು.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.