ಬಾಡಿಗೆ ನೀಡದ ಅಂಗಡಿ ಮಳಿಗೆಗೆ ಬೀಗ


Team Udayavani, Aug 28, 2019, 1:30 PM IST

rn-tdy-1

ರಾಮನಗರದಲ್ಲಿ ಮಾಜಿ ಪಿಎಂ ದೇವೇಗೌಡ ವಾಣಿಜ್ಯ ಸಂಕೀರ್ಣದಲ್ಲಿ ಬಾಡಿಗೆ ಕರಾರು ಮಾಡಿಕೊಳ್ಳದ ಮಳಿಗೆಗಳಿಗೆ ತಾಲೂಕು ಪಂಚಾಯ್ತಿ ಅಧಿಕಾರಿಗಳು ಬೀಗ ಜಡಿದರು.

ರಾಮನಗರ: ತಾಲೂಕು ಪಂಚಾಯ್ತಿಗೆ ಸೇರಿದ ಮಾಜಿ ಪಿಎಂ ದೇವೇಗೌಡ ವಾಣಿಜ್ಯ ಸಂಕೀರ್ಣದಲ್ಲಿ ಬಾಡಿಗೆ ಕಟ್ಟದ, ಬಾಡಿಗೆ ಕರಾರು ಮಾಡಿಕೊಳ್ಳದ ಅಂಗಡಿ ಮಳಿಗೆಗಳ ಮಾಲೀಕರಿಗೆ ತಾಲೂಕು ಪಂಚಾಯ್ತಿ ಅಧ್ಯಕ್ಷರು, ಸದಸ್ಯರು ಅಧಿಕಾರಿಗಳ ತಂಡ ದಾಳಿ ನಡೆಸಿ ಕೆಲವು ಮಳಿಗೆಗಳಿಗೆ ಬೀಗ ಜಡಿದು, ಕೆಲವು ಅಂಗಡಿ ಮಾಲೀಕರಿಗೆ ಅಂತಿಮ ನೋಟಿಸ್‌ ಜಾರಿ ಮಾಡಿದರು.

ಏಳು ದಿನಗಳ ಒಳಗೆ ಸಕಾರಣ ನೀಡಿ, ಕಾನೂನು ಪ್ರಕಾರ ಬಾಡಿಗೆ ಒಪ್ಪಂದ ಮಾಡಿಕೊಳ್ಳುವುದು ಸೇರಿದಂತೆ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸದಿದ್ದರೆ, ಅಂತಹ ಅಂಗಡಿಯನ್ನು ಪುನಃ ಹರಾಜು ಪ್ರಕ್ರಿಯೆಗೆ ಒಳಪಡಿಸುವುದಾಗಿ ಅಧ್ಯಕ್ಷರು ಹಾಗೂ ಅಧಿಕಾರಿಗಳು ಎಚ್ಚರಿಸಿದ್ದಾರೆ.

ಮೂಲ ಸೌಕರ್ಯ ಕಲ್ಪಿಸಿದ್ದೆವು: ಈ ವೇಳೆ ತಾಪಂ ಅಧ್ಯಕ್ಷ ಗಾಣಕಲ್ ನಟರಾಜು ಮಾತನಾಡಿ, ನಗರದ ಖಾಸಗಿ ಬಸ್‌ ನಿಲ್ದಾಣದ ಬಳಿ 84 ಮಳಿಗೆಗಳಿರುವ ವಾಣಿಜ್ಯ ಸಂಕೀರ್ಣವನ್ನು ತಾಲೂಕು ಪಂಚಾಯ್ತಿ 9 ವರ್ಷಗಳ ಹಿಂದೆ ನಿರ್ಮಿಸಿದೆ. ಹರಾಜು ಪ್ರಕ್ರಿಯೆಲ್ಲಿ ಅಂಗಡಿಗಳನ್ನು ಪಡೆದುಕೊಂಡ ಮಾಲೀಕರು, ಮೂಲ ಸೌಕರ್ಯಗಳನ್ನು ಕಲ್ಪಿಸದ ಹೊರತು ತಾವು ಬಾಡಿಗೆ ಪಾವತಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಕಳೆದ ವರ್ಷ ತಾಲೂಕು ಪಂಚಾಯ್ತಿ ನಿಧಿಯಲ್ಲಿ ಸುಮಾರು 90 ಲಕ್ಷ ರೂ. ವೆಚ್ಚ ಮಾಡಿ ಶೌಚಾಲಯ, ಮಳೆ ನೀರು, ಚರಂಡಿ ಹೀಗೆ ಹಲವಾರು ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಟ್ಟಿದ್ದೆವು ಎಂದು ತಿಳಿಸಿದರು.

ನೋಟಿಸ್‌ ಜಾರಿ ಮಾಡಿದರು ಸ್ಪಂದಿಸಿಲ್ಲ: ಸೌಲಭ್ಯ ಕಲ್ಪಿಸಿದರು ಸಹ ಅಂಗಡಿ ಮಾಲೀಕರು ಬಾಡಿಗೆ ಪಾವತಿ ಮಾಡುತ್ತಿರಲಿಲ್ಲ. ಬಾಡಿಗೆ ಪಾವತಿಸುವಂತೆ ಮತ್ತು ಕರಾರು ಮಾಡಿಕೊಳ್ಳುವಂತೆ ಪದೇ ಪದೆ ಮಾಡಿಕೊಂಡ ಮನವಿ ಮತ್ತು ನೋಟಿಸ್‌ ಜಾರಿ ಮಾಡಿದರು ಸ್ಪಂದಿಸಿರಲಿಲ್ಲ. ಹೀಗಾಗಿ ಒಂದು ವಾರದ ಮುಂಚೆ ಮತ್ತೆ ನೋಟಿಸ್‌ ಜಾರಿ ಮಾಡಿದ್ದಾಗಿ, ಅದಕ್ಕೂ ಯಾರು ಜಗ್ಗದ ಕಾರಣ ಸ್ಥಳಕ್ಕೆ ಭೇಟಿ ಕೊಟ್ಟಿರುವುದಾಗಿ ತಿಳಿಸಿದರು.

ವಾಣಿಜ್ಯ ಸಂಕೀರ್ಣದ ಮಳಿಗೆಗಳಿಂದ ಪಂಚಾಯ್ತಿಗೆ ಸುಮಾರು 18 ಲಕ್ಷ ರೂ. ಮುಂಗಡ ಹಣ ಬಾಕಿ ಬರಬೇಕಾಗಿದೆ. ಬಾಡಿಗೆ ಒಪ್ಪಂದ ಮಾಡಿಕೊಂಡವರು ಸಹ ಬಾಡಿಗೆ ಬಾಕಿ ಉಳಿಸಿಕೊಂಡ್ದಿದಾರೆ. ಇಂತಹ ಮಳಿಗೆಗಳಿಂದ ಸುಮಾರು 8 ಲಕ್ಷ ರೂ. ಬರಬೇಕಾಗಿದೆ. ಅಂತಹವರಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಒಪ್ಪಂದವನ್ನೇ ಮಾಡಿಕೊಳ್ಳದ ಮಳಿಗೆಗಳಿಗೆ ಬೀಗ ಜಡಿಯಲಾಗಿದೆ ಎಂದು ತಿಳಿಸಿದರು.

ಸಬ್‌ ಲೀಸ್‌ ಕೊಟ್ಟು ಸಂಪಾದನೆ!: ಕೆಲವು ಮಾಲೀಕರು ತಮ್ಮ ಅಂಗಡಿಗಳನ್ನು ಬೇರೊಬ್ಬರಿಗೆ ಬಾಡಿಗೆಗೆ (ಸಬ್‌ ಲೀಸ್‌) ಕೊಟ್ಟಿರುವ ಬಗ್ಗೆ ದೂರುಗಳಿವೆ. ತಾಲೂಕು ಪಂಚಾಯ್ತಿಗೆ ಮಾಸಿಕವಾಗಿ ಪಾವತಿಸಬೇಕಾದ 1800 ರೂ. ಮಾಸಿಕ ಬಾಡಿಗೆಗಿಂತ ಹಲವಾರು ಪಟ್ಟು ಹೆಚ್ಚಿನ ಮೊತ್ತಕ್ಕೆ ಬಾಡಿಗೆಗೆ ಕೊಟ್ಟಿದ್ದಾರೆ. ಆದರೂ ಬಾಡಿಗೆ ಕೊಟ್ಟಿಲ್ಲ. ಇಂತಹ ಪ್ರಕರಣಗಳ ಬಗ್ಗೆ ಸದ್ಯದಲ್ಲೇ ನಡೆಯುವ ಪಂಚಾಯ್ತಿಯ ಸರ್ವ ಸದಸ್ಯರ ಸಭೆಯಲ್ಲಿ ಚರ್ಚಿಸುವುದಾಗಿ ತಿಳಿಸಿದರು.

ಸ್ವಚ್ಛತೆ ಮರೀಚಿಕೆ: ಬಾಡಿಗೆ, ಮುಂಗಡ ಕೇಳಿದ ಅಧಿಕಾರಿಗಳು ಮತ್ತು ತಾಪಂ ಸದಸ್ಯರ ವಿರುದ್ಧ ಕೆಲವು ಮಾಲೀಕರು ವಾಗ್ವಾದಕ್ಕಿಳಿದರು. ಕೆಲವರು ಮಾಲೀಕರು ತಾವು ಬಾಡಿಗೆ ಕರಾರಿಗೆ ಸಹಿ ಮಾಡಿಕೊಟ್ಟಿರುವುದಾಗಿ, ಆದರೆ ತಾಪಂ ಅಧಿಕಾರಿಗಳೇ ನಿರ್ಲಕ್ಷ್ಯವಸಿದ್ದರಿಂದ ಬಾಡಿಗೆ ಪಾವತಿಸಿಲ್ಲ ಎಂದು ಆರೋಪಿಸಿದರು. ಈ ವಿಚಾರ ತಿಳಿದ ಅಧ್ಯಕ್ಷರು ಅಧಿಕಾರಿಗಳನ್ನು ಸಹ ಸ್ಥಳದಲ್ಲೇ ತರಾಟೆಗೆ ತೆಗೆದುಕೊಂಡರು.

ವಾಣಿಜ್ಯ ಸಂಕೀರ್ಣದಲ್ಲಿ ಸ್ವಚ್ಛತೆ ಇಲ್ಲ. ಸಂಕಿರ್ಣದ ಹಿಂಭಾಗದಲ್ಲಿರುವ ಮಳಿಗೆಗಳ ಬಳಿ ಸ್ವಚ್ಛತೆ ಇಲ್ಲದೆ ಗಬ್ಬು ನಾರುತ್ತಿದೆ. ಸಂಕೀರ್ಣದಲ್ಲಿ ನಿರ್ವಹಣೆಯೇ ಇಲ್ಲ ಎಂದು ಮಾಲೀಕರು ಏರು ದನಿಯಲ್ಲೇ ದೂರಿದರು. ಸಂಕೀರ್ಣ ನಿರ್ಮಿಸುವ ವೇಳೆ ತಾವು 4ರಿಂದ 5 ಲಕ್ಷ ರೂ. ಮುಂಗಡ ಪಾವತಿಸಿರುವುದಾಗಿ ಆ ಹಣದ ಬಗ್ಗೆ ಕೆಲವು ಮಾಲೀಕರು ಪ್ರಶ್ನಿಸಿದರು.

ಈ ವೇಳೆ ಇಒ ಬಾಬು, ಸಾಯಿ ಸಮಿತಿ ಅಧ್ಯಕ್ಷ ಪ್ರಕಾಶ್‌, ತಾಪಂ ಮಾಜಿ ಅಧ್ಯಕ್ಷ ಡಿ.ಎಂ.ಮಹದೇವಯ್ಯ ಮುಂತಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.