ಕುದೂರಿನಲ್ಲಿ ಫ್ಲೆಕ್ಸ್‌, ಬ್ಯಾನರ್‌ಗಳ ದರ್ಬಾರ್


Team Udayavani, Jul 9, 2022, 3:34 PM IST

ಕುದೂರಿನಲ್ಲಿ ಫ್ಲೆಕ್ಸ್‌, ಬ್ಯಾನರ್‌ಗಳ ದರ್ಬಾರ್

ಕುದೂರು: ಗ್ರಾಪಂ ವ್ಯಾಪ್ತಿಯ ರಸ್ತೆಯ ಬದಿ ಮತ್ತು ಬಸ್‌ ನಿಲ್ದಾಣದ ಎಲ್ಲೆಂದರಲ್ಲಿ ಫ್ಲೆಕ್ಸ್‌, ಬ್ಯಾನರ್‌ಗಳನ್ನು ಹಾಕಲಾಗಿದೆ. ಆದರೆ, ಗ್ರಾಪಂ ನಿರ್ಲಕ್ಷ್ಯದಿಂದ ಜನಸಾಮಾನ್ಯರು ತೊಂದರೆ ಅನುಭವಿಸುವಂತಾಗಿದೆ.

ಕುದೂರು ಪಟ್ಟಣದ ಖಾಸಗಿ ವ್ಯಕ್ತಿಗಳು ಹಾಗೂ ಸಂಘ-ಸಂಸ್ಥೆಗಳು ಪ್ರಚಾರಕ್ಕಾಗಿ ಬಸ್‌ ನಿಲ್ದಾಣ, ಸಾರ್ವಜನಿಕರು ಸಂಚಾರ ಮಾಡುವ ಜಾಗದಲ್ಲಿ ಬೇಕಾಬಿಟ್ಟಿಯಾಗಿ ಬ್ಯಾನರ್‌ಗಳನ್ನು ಅಳವಡಿಸಿದ್ದಾರೆ.

ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ತೊಂದರೆ ಉಂಟಾಗುತ್ತಿದೆ. ಆದರೆ, ಗ್ರಾಪಂ ಅಧಿಕಾರಿಗಳು ಇದಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂಬತ್ತೆ ನೋಡಿಯೂ ನೋಡದಂತೆ ದಿನವೀಡಿ ಇದೇ ರಸ್ತೆಗಳಲ್ಲಿ ಓಡಾಡುತ್ತಿದ್ದಾರೆ. ಆದ್ದರಿಂದ ಗ್ರಾಪಂ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೇಕಾಬಿಟ್ಟಿ ಬ್ಯಾನರ್ಹಾವಳಿ: ಯಾವುದೇ ಬ್ಯಾನರ್‌ಗಳನ್ನು ಅಳವಡಿಸಬೇಕಾದರೆ ಹಣ ಪಾವತಿ ಮಾಡಬೇಕು ಎಂಬ ನಿಯಮವಿದೆ. ಆದರೆ, ಪ್ರಭಾವಿ ವ್ಯಕ್ತಿಗಳು ತಮ್ಮ ರಾಜಕೀಯ ಪ್ರಭಾವ ಬಳಸಿ, ಬ್ಯಾನರ್‌ಗಳ ಟ್ಯಾಕ್ಸ್‌ ಕಟ್ಟದೆ ಹಾಗೇ ಹಾಕುತ್ತಾರೆ. ನಾವೂ ಏನೂ ಮಡಲು ಆಗುವುದಿಲ್ಲ. ಹೇಳಿದರೂ ಸಹ ಯಾರು ಕೇಳುವುದಿಲ್ಲ ಎಂದು ಅಧಿಕಾರಿಗಳು ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ.

ಗ್ರಾಪಂ ನಿರ್ಲಕ್ಷ್ಯ: ಖಾಸಗಿ ವ್ಯಕ್ತಿಗಳು ಬ್ಯಾನರ್‌ ಗಳನ್ನು ವಿದ್ಯುತ್‌ ಕಂಬ ಸೇರಿದಂತೆ ಇನ್ನತಿರ ಸ್ಥಳಗಳಲ್ಲಿ ಅಳವಡಿಸುತ್ತಾರೆ. ಇದರಿಂದ ಏನಾದರೂ ಅವಘಡಗಳು ಸಂಭವಿಸಿದರೆ ಇದಕ್ಕೆ ಯಾರು ಹೊಣೆ. ಇದು ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಹೀಗೆ ಆಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಪಂ ವ್ಯಾಪ್ತಿಯಲ್ಲಿ ಯಾರಾದರೂ ಬ್ಯಾನರ್‌ಗಳನ್ನು ಅಳವಡಿಸಿದರೆ, ಬ್ಯಾನರ್‌ ಹಾಕಲು ಅವರು ಪಾವತಿಸಿದ ರಶೀದಿಯ ಪ್ರತಿಯನ್ನು ಅದೇ ಬ್ಯಾನರ್‌ನ ಕೊನೆ ಭಾಗದಲ್ಲಿ ಪ್ರಿಂಟ್‌ ಬರಬೇಕು. ಅದರಲ್ಲಿ ಯಾವ ದಿನಾಂಕದಿಂದ ಎಲ್ಲಿಯವರೆಗೆ ಅಳವಡಿಸಲು ಅನುಮತಿ ನೀಡಲಾಗಿದೆ ಎಂದು ನಮೂದಿಸಿ ಹಾಗೂ ಅಳವಡಿಸುವಾಗ ಸಾರ್ವಜನಿಕರಿಗೆ ತೊಂದರೆಯಾಗದ ಜಾಗದಲ್ಲಿ ಅಳವಡಿಸದಂತೆ ಮುನ್ನೇಚರಿಕೆ ನೀಡಬೇಕು. ಇದರಿಂದ ಅಕ್ರಮವಾಗಿ ಅಳವಡಿಸುವ ಬ್ಯಾನರ್‌ಗಳಿಗೆ ಕಡಿವಾಣ ಬೀಳುತ್ತದೆ. ಗ್ರಾಪಂಗೆ ಆದಾಯವೂ ಹೆಚ್ಚಾಗುತ್ತದೆ. ಅಲ್ಲದೆ, ಸಾರ್ವಜನಿಕರಿಗೆ ತೊಂದರೆ ಆಗುವುದು ತಪ್ಪಿಸಬಹುದು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಕೆ

ಲವರು ಅನಧಿಕೃತವಾಗಿ ಗ್ರಾಪಂಗೆ ಮಾಹಿತಿ ಇಲ್ಲದಂತೆ ಜನರಿಗೆ ತೊಂದರೆಯಾಗುವ ಸ್ಥಳಗಳಲ್ಲಿ ಬ್ಯಾನರ್‌ ಅಳವಡಿಸುತ್ತಿದ್ದಾರೆ. ಅಂತಹ ಬ್ಯಾನರ್‌ ಗಳನ್ನು ತೆರವುಗೊಳಿಸಲಾಗುವುದು. – ಲೋಕೇಶ್‌, ಪಿಡಿಒ, ಕುದೂರು ಗ್ರಾಪಂ

– ಕೆ.ಎಸ್‌.ಮಂಜುನಾಥ್‌

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.