ನನ್ನ-ರೇವಣ್ಣ ನಡುವೆ ತಂದೆ-ಮಗುವಿನ ಸಂಬಂಧ


Team Udayavani, May 22, 2022, 12:27 PM IST

ನನ್ನ-ರೇವಣ್ಣ ನಡುವೆ ತಂದೆ-ಮಗುವಿನ ಸಂಬಂಧ

ರಾಮನಗರ: ನನಗೆ 2008ರಲ್ಲಿ ರಾಜಕೀಯ ದೀಕ್ಷೆಕೊಟ್ಟ ಮಾಜಿ ಸಚಿವ ಎಚ್‌.ಎಂ.ರೇವಣ್ಣ ಮತ್ತು ನನ್ನನಡುವೆ ತಂದೆ-ಮಗುವಿನ ಸಂಬಂಧವಿದೆ ಎಂದು ಮಾಗಡಿ ಕ್ಷೇತ್ರದ ಶಾಸಕ ಎ.ಮಂಜುನಾಥ್‌ ಹೇಳಿದರು.

ತಾಲೂಕಿನ ಬಿಡದಿಯ ತಮ್ಮ ನಿವಾಸದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಮಾಗಡಿ ಕ್ಷೇತ್ರದ ಮಾಜಿ ಶಾಸಕ ಎಚ್‌.ಸಿ.ಬಾಲಕೃಷ್ಣ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಬರೆದಿರುವ ಪತ್ರ, ಕಾಂಗ್ರೆಸ್‌ ನಾಯಕ ಎಚ್‌ .ಎಂ.ರೇವಣ್ಣ ಅವರು ಇತ್ತೀಚಿನ ದಿನಗಳಲ್ಲಿ ಜೆಡಿಎಸ್‌ ಶಾಸಕ ಎ.ಮಂಜುನಾಥ್‌ ಅವರನ್ನು ಹೊಗಳುತ್ತಿರುವಕುರಿತು ಸುದ್ದಿಗಾರರು ಗಮನ ಸೆಳೆದಾಗ ಅವರು ಹೀಗೆ ಪ್ರತಿಕ್ರಿಯಿಸಿದರು. ಮಾಗಡಿ ಕ್ಷೇತ್ರವನ್ನು ಎಚ್‌. ಎಂ.ರೇವಣ್ಣ ಅವರು ಬೆಳ್ಳಿ ತಟ್ಟೆಯಲ್ಲಿ ಧಾರೆ ಎರೆದುಕೊಟ್ಟಿದ್ದಾರೆ. ಅವರ ಬಗ್ಗೆ ಇದ್ದ ವಿಷವನ್ನು ಬಾಲಕೃಷ್ಣ ಈಗ ಹೊರಹಾಕಿದ್ದಾರೆ ಎಂದು ಹೇಳಿದರು.

ರೇವಣ್ಣ ಇಮೇಜ್‌ ಕುಗ್ಗಿಸುವ ಸಂಚು!: ಸದ್ಯರಾಜ್ಯಸಭೆಗೆ ಮತ್ತು ರಾಜ್ಯ ವಿಧಾನ ಪರಿಷತ್‌ಗೆ ಚುನವಣೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಎಚ್‌.ಎಂ.ರೇವಣ್ಣ ಅವರ ಇಮೇಜ್‌ ಕುಗ್ಗಿಸುವ ಸಂಚು ನಡೆದಿದೆ ಎಂದು ಬಾಲಕೃಷ್ಣರನ್ನು ಕುಟುಕಿದರು. ಕೆಪಿಸಿಸಿ ಅಧ್ಯಕ್ಷರಿಗೆ ಬರೆದ ಪತ್ರವನ್ನು ಅವರೇ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ. ಅವರಿಗೆ ಕಾಂಗ್ರೆಸ್‌ ಪಕ್ಷ ತೊರೆಯಲು ಒಂದು ಕಾರಣ ಬೇಕಾಗಿತ್ತು. ಅದಕ್ಕಾಗಿ ಈ ಹುನ್ನಾರ ಮಾಡಿದ್ದಾರೆ ಎಂದರು.

ರೇವಣ್ಣಗೆ ಸಪೋರ್ಟ್‌ ವಿಚಾರ ಉದ್ಬವಿಸೋಲ್ಲ: ಎಚ್‌.ಎಂ.ರೇವಣ್ಣ ಅವರು ಕ್ಷೇತ್ರದಿಂದ ಸ್ಪರ್ಧೆ ಮಾಡುವ ವಿಚಾರವನ್ನ ಅವರು ಹೇಳಿಲ್ಲ. ನಾನು ಅವರಿಗೆ ಸಪೋರ್ಟ್‌ ಮಾಡುವ ವಿಚಾರವೂ ಉದ್ಬವಿಸುವುದಿಲ್ಲ. ರೇವಣ್ಣರ ಫೋಟೋ ಕೇವಲ ನನ್ನ ಕಚೇರಿಯಲ್ಲಿ ಮಾತ್ರವಲ್ಲ, ನನ್ನ ಹೃದಯದ ಅಂತರಾಳದಲ್ಲಿ ಇಟ್ಟುಕೊಂಡಿದ್ದೇನೆ ಎಂದು ಬಾಲಕೃಷ್ಣರ ಮತ್ತೂಂದು ಹೇಳಿಕೆಗೆ ಪ್ರತಿಕ್ರಿಯಿಸಿದರು. ನನಗೆ ರೇವಣ್ಣನವರು ಗುರುಗಳ ಸ್ಥಾನದಲ್ಲಿದ್ದಾರೆ.

ಬಾಲಕೃಷ್ಣ ಅವರು ಜೆಡಿಎಸ್‌ನಲ್ಲಿದ್ದಾಗ ದೇವೇ ಗೌಡರು, ಕುಮಾರಸ್ವಾಮಿರನ್ನ ನೆನೆಯಲಿಲ್ಲ. ಹಿಂದೆ ಬಿಜೆಪಿಯಲ್ಲಿ ಇದ್ದಾಗಲೂ ಅಲ್ಲಿ ಸಹಾಯಮಾಡಿದವರನ್ನ ನೆನೆಯಲಿಲ್ಲ. ಈಗ ಕಾಂಗ್ರೆಸ್‌ನಲ್ಲಿ ಯಾರಿಗೂ ಗೌರವ ಕೊಡ್ತಿಲ್ಲ. ಈ ವಿಚಾರ ಆ ಪಕ್ಷದ ವರಿಷ್ಠರಿಗೂ ಗೊತ್ತಿದೆ. ಇದು ಬಾಲಕೃಷ್ಣಗೆ ಇರುವ ಚಾಳಿ ಎಂದು ಟೀಕಾ ಪ್ರಹಾರ ನಡೆಸಿದರು.

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.