ನಾಗರಿಕರ ರಕ್ಷಣೆಯೇ ಪೊಲೀಸ್‌ ಇಲಾಖೆಯ ಕರ್ತವ್ಯ

ಕೇಂದ್ರ ವಲಯ ಐಜಿಪಿ ಕೆ.ವಿ.ಶರತ್‌ ಚಂದ್ರ ಹೇಳಿಕೆ . ಪೊಲೀಸ್‌ ಇಲಾಖೆಯಿಂದ ಜನಸಂಪರ್ಕ ಸಭೆ

Team Udayavani, Feb 13, 2020, 4:17 PM IST

13-February-21

ಮಾಗಡಿ: ನಾಗರಿಕರ ರಕ್ಷಣೆಗೆ ಪೊಲೀಸರು ಸದಾ ಜಾಗೃತರಾಗಿರುತ್ತಾರೆ. ಅವರಿಗೆ ಪ್ರತಿಯೊಬ್ಬ ನಾಗರಿಕ ಸಹಕಾರ ನೀಡಿದರೆ, ಕಾನೂನು ಸುವ್ಯವಸ್ಥೆಗೆ ಅನುಕೂಲವಾಗುತ್ತದೆ ಎಂದು ಕೇಂದ್ರ ವಲಯ ಐಜಿಪಿ ಕೆ.ವಿ.ಶರತ್‌ ಚಂದ್ರ ಮನವಿ ಮಾಡಿದರು.

ಪಟ್ಟಣದ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ಪೊಲೀಸ್‌ ಇಲಾಖೆ ಏರ್ಪಡಿಸಿದ್ದ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಸಾರ್ವಜನಿಕರಿಂದ ಆಹಾವಾಲು ಸ್ವೀಕರಿಸಿ ಮಾತನಾಡಿದ ಅವರು, ಪೊಲೀಸ ಠಾಣೆ ಎಂದರೆ ನಾಗರಿಕರು ಭಯ ಪಡುವ ಅಗತ್ಯವಿಲ್ಲ. ನಿಮ್ಮ ರಕ್ಷಣೆಯೇ ನಮ್ಮ ಕರ್ತವ್ಯವಾಗಿರುತ್ತದೆ. ಸಾರ್ವಜನಿಕರ ಸಹಭಾಗಿತ್ವದಲ್ಲಿ ಕಾನೂನು ರಕ್ಷಣೆಗೆ ಪೊಲೀಸರು ಸೇವೆ ಮಾಡಲು ಸದಾ ಸಿದ್ದರಿರುತ್ತಾರೆ ಎಂದು ತಿಳಿಸಿದರು.

ಜನಸಂಖ್ಯೆಯ ಸ್ಫೋಟದಿಂದ ಹೆಚ್ಚುತ್ತಿರುವ ಅಪರಾಧ, ಕಳ್ಳತನ, ಮೋಸ, ವಂಚನೆಗಳನ್ನು ತಡೆಗಟ್ಟಲು ಪೊಲೀಸರು ಸದಾ ಜಾಗೃತರಾಗಿರುತ್ತಾರೆ. ಅದರೆ ಮಾಹಿತಿ ಕೊರತೆಯಿಂದಾಗಿ ಅಪರಾಧಿಗಳು ತಪ್ಪಿಸಿಕೊಳ್ಳುವ ಅವಕಾಶಗಳಿರುತ್ತವೆ. ಜಾಗೃತ ನಾಗರಿಕರು ನಿರ್ಭಯವಾಗಿ ಪೊಲೀಸರಿಗೆ ಮಾಹಿತಿ ನೀಡಬೇಕು. ಇದರಿಂದ ಅಪರಾಧಗಳನ್ನು ತಡೆಯಲು ಅನುಕೂಲವಾಗುತ್ತದೆ ಎಂದರು.

ಡಿವೈಎಸ್ಪಿ ಲಕ್ಷ್ಮೀನಾರಾಯಣ ಮಾತನಾಡಿ, ಸಾರ್ವಜನಿಕರ ಸಹಕಾರದಿಂದ ಪೊಲೀಸರು ತಮ್ಮ ಕರ್ತವ್ಯವನ್ನು ಯಶಸ್ವಿಗೊಳಿಸುವ ಪ್ರಯತ್ನದಲ್ಲಿ ಶ್ರಮಿಸುತ್ತಿದ್ದಾರೆ. ನಾಗರಿಕರ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಆಗದಂತೆ ರಕ್ಷಣೆ ಮಾಡುವುದು. ಅಪಘಾತ ಮತ್ತು ಅಪರಾಧಗಳ ತಡೆಗೆ ಕಾನೂನು ಪಾಲನೆ ಬಹಳ ಮುಖ್ಯವಾಗಿರುತ್ತದೆ. ಪೊಲೀಸ್‌ ಠಾಣೆ ಕೊಲೆಗಡುಕರಿಗೆ, ಸಲುಗೆಕೋರರಿಗೆ, ಕಳ್ಳಕಾಕರಿಗೆ, ದುಷ್ಕರ್ಮಿಗಳ ಮೇಲೆ ಹದ್ದಿನ ಕಣ್ಣಿಟ್ಟಿರುತ್ತದೆ ಸಾರ್ವಜನಿಕರು ಕಾನೂನು ಕೈಗೆ ತ್ತಿಕೊಳ್ಳದೆ ಇಲಾಖೆ ನಿಯಮ ಪಾಲಿಸಿ ಎಂದರು.

ತಾಪಂ ಮಾಜಿ ಸದಸ್ಯ ಸಿ.ಜಯರಾಂ ಮಾತನಾಡಿ, ಜನಸಂಖ್ಯೆಗೆ ಅನುಗುಣವಾಗಿ ಠಾಣಾ ವ್ಯಾಪ್ತಿ ಹಾಗೂ ಬೀಟ್‌ ವ್ಯವಸ್ಥೆ ಬದಲಾಗಬೇಕು. ಪೊಲೀಸರು ದೂರು ಬರೆದುಕೊಳ್ಳುವ ಬದಲಾಗಿ ವಿಡಿಯೋ ರೇಕಾರ್ಡ್‌ ದೂರು ದಾಖಲು ಮಾಡಿಕೊಳ್ಳಬೇಕು. ಮೇಲಾಧಿಕಾರಿಗಳು ಪೊಲೀಸರ ಸಮಸ್ಯೆಗಳ ನಿವಾರಣೆಗೂ ಮುಂದಾಗಬೇಕು. ಅವರ ಆರೊಗ್ಯವಾಗಿರಲು ಕ್ರೀಡಾ ಮತ್ತು ಮನೋ ರಂಜನಾ ಚಟುವಟಿಕೆಗೂ ಅವಕಾಶ ನೀಡಬೇಕು ಎಂದು ಸಲಹೆ ನೀಡಿದರು.

ಇದೇ ವೇಳೆ ನೂರಾರು ನಾಗರಿಕರು ತಮ್ಮ ಆಹಾವಾಲುಗಳನ್ನು ಸಲ್ಲಿಸಿದರು. ಕಲ್ಕೆರೆ ಶಿವಣ್ಣ, ದಲಿತ ಮುಖಂಡರಾದ ದೊಡ್ಡಿ,ಲಕ್ಷ್ಮಣ್‌, ಮೂರ್ತಿ, ಡಿ.ಶಿವಕುಮಾರ್‌, ದೊಡ್ಡಯ್ಯ, ಪುರಸಭಾ ಸದಸ್ಯರಾದ ಎಂ.ಎನ್‌. ಮಂಜುನಾಥ್‌, ಕೆ.ವಿ.ಬಾಲರಘು, ಎಚ್‌.ಜೆ.ಪುರು ಷೋತ್ತಮ್‌, ರೇಖಾ, ಹೇಮಾವತಿ, ವಿಜಯ ಲಕ್ಷ್ಮೀ, ರೂಪೇಶ್‌, ಶಿವರುದ್ರಮ್ಮ, ರಿಯಾಜ್‌, ಮಹೇಶ್‌, ಜಯರಾಂ, ರಂಗನಾಥ್‌, ರಮೇಶ್‌, ಗೋಪಿ ವನಜಾ, ಎಎಸ್‌ಐ ಮಲ್ಲೇಶ್‌, ಪೊಲೀಸ್‌ ಸಿಬ್ಬಂದಿ ಅಪ್ಪರ್‌ ಸಾಬ್‌, ರಾಜಣ್ಣ, ಅರುಣ್‌, ಶಾಲಿನಿ, ರಾಧಾಮಣಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.