ಸರ್ಕಾರಿ ಶಾಲೆಯಲ್ಲಿ ಶಿಕ್ಷಣಕ್ಕೆ ಸಂಕಲ್ಪ ಮಾಡಿ

ನುಣ್ಣೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಚಂದ್ರು ಮನವಿ

Team Udayavani, Aug 28, 2019, 1:33 PM IST

rn-tdy-2

ಚನ್ನಪಟ್ಟಣ ತಾಲೂಕಿನ ನುಣ್ಣೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.

ಚನ್ನಪಟ್ಟಣ: ಗ್ರಾಮೀಣ ಭಾಗದ ಎಲ್ಲಾ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲಿಯೇ ಓದಿಸುವ ದೃಢ ಸಂಕಲ್ಪ ಮಾಡಬೇಕು ಎಂದು ನುಣ್ಣೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಚಂದ್ರು ಮನವಿ ಮಾಡಿದರು.

ತಾಲೂಕಿನ ನುಣ್ಣೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಕೊರತೆಯಿಂದ ಕರ್ನಾಟಕದ ವಿವಿಧೆಡೆ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿವೆ. ಹಳ್ಳಿಗಾಡಿನಲ್ಲಿಯೂ ಖಾಸಗಿ ಶಾಲೆಗಳ ಭರಾಟೆ ಹೆಚ್ಚಾಗುತ್ತಿದೆ. ಕೆಲವು ಪೋಷಕರು ಉಳ್ಳವರನ್ನು ಅನುಕರಣೆ ಮಾಡಲೋ, ಪ್ರತಿಷ್ಟೆಗಾಗಿಯೋ ಅಥವಾ ಖಾಸಗಿ ಶಾಲೆಗಳ ಅಬ್ಬರದ ಪ್ರಚಾರಕ್ಕೆ ಮರುಳಾಗಿಯೋ ತಮ್ಮ ಮಕ್ಕಳನ್ನು ಸಾಲ ಮಾಡಿ ಖಾಸಗಿ ಶಾಲೆಗಳಿಗೆ ದಾಖಲಿಸುತ್ತಾರೆ. ಆನಂತರ ತಮ್ಮ ಮಕ್ಕಳ ವಿದ್ಯಾಭ್ಯಾಸದ ಖರ್ಚನ್ನು ಭರಿಸಲು ಇನ್ನಿಲ್ಲದ ಪರದಾಟ ಮಾಡುವುದನ್ನು ಕಾಣುತ್ತಿದ್ದೇವೆ. ಯಾವ ಖಾಸಗಿ ಶಾಲೆಗಳಿಗಿಂತಲೂ ಸರ್ಕಾರಿ ಶಾಲೆಗಳು ಕಡಿಮೆಯಲ್ಲ. ವಿದ್ಯಾರ್ಥಿಗಳ ಅಭಿವೃದ್ಧಿಗೆ ಬೇಕಾದ ಎಲ್ಲಾ ಅನುಕೂಲಗಳು ಇಂದು ಸರ್ಕಾರಿ ಶಾಲೆಗಳಲ್ಲಿ ಇವೆ ಎಂಬುದನ್ನು ಪೋಷಕರು ಅರ್ಥ ಮಾಡಿಕೊಳ್ಳಬೇಕಿದೆ ಎಂದು ಕಿವಿಮಾತು ಹೇಳಿದರು.

ಗ್ರಾಮೀಣರಲ್ಲಿ ತಪ್ಪು ಕಲ್ಪನೆ ಬೇಡ: ನಿವೃತ್ತ ಸರ್ಕಾರಿ ಅಧಿಕಾರಿ ದೊಡ್ಡಕೆಂಪೇಗೌಡ ಮಾತನಾಡಿ, ಖಾಸಗಿ ಶಾಲೆಗಳಲ್ಲಿ ಓದಿದ ಮಕ್ಕಳು ದೊಡ್ಡ ವ್ಯಕ್ತಿಗಳಾಗುತ್ತಾರೆ. ಉಳಿದವರು ಹಿಂದುಳಿಯುತ್ತಾರೆ ಎಂಬ ತಪ್ಪು ಕಲ್ಪನೆ ನಮ್ಮ ಗ್ರಾಮೀಣ ಭಾಗದಲ್ಲಿಯೂ ಇಂದು ಹೆಚ್ಚಾಗುತ್ತಿದೆ. ಇದರ ಪರಿಣಾಮ, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಕಡಿಮೆಯಾಗುತ್ತಿದೆ. ಆದರೆ, ವಾಸ್ತವ ಸ್ಥಿತಿಯೇ ಬೇರೆಯೇ ಇದೆ. ನಾವು ಸರ್ಕಾರಿ ಶಾಲೆಗಳಲ್ಲಿಯೇ ಓದಿ, ಹುದ್ದೆಗಳನ್ನು ಪಡೆದುಕೊಂಡು ನಿಮ್ಮ ಕಣ್ಣ ಮುಂದೆಯೇ ಉತ್ತಮ ಉದಾಹರಣೆಗಳಾಗಿ ನಿಂತಿದ್ದೇವೆ ಎಂಬುದನ್ನು ನಮ್ಮ ಗ್ರಾಮೀಣ ಪೋಷಕರು ಮನಗಾಣಬೇಕು ಎಂದು ತಿಳಿಸಿದರು.

ಪರಿಶ್ರಮದಿಂದ ಶೈಕ್ಷಣಿಕ ಸಾಧನೆ ಸಾಧ್ಯ: ಉಪನ್ಯಾಸಕ ಎನ್‌.ಟಿ.ರಾಮಚಂದ್ರ ಮಾತನಾಡಿ, ಕಳೆದ ಸಾಲಿನ ಎಸ್‌ಎಸ್‌ಎಲ್ಸಿಯಲ್ಲಿ ನಮ್ಮ ಜಿಲ್ಲೆ ರಾಜ್ಯದಲ್ಲಿಯೇ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ವಿದ್ಯಾರ್ಥಿಗಳ ಶ್ರದ್ಧೆ, ಸರ್ಕಾರಿ ಶಾಲಾ ಶಿಕ್ಷಕರ ಅರ್ಪಣಾಭಾವ, ಅಧಿಕಾರಿ ವರ್ಗದವರ ಸಹಕಾರ, ಪೋಷಕರ ಪ್ರೋತ್ಸಾಹ ಹಾಗೂ ಇಡೀ ಜಿಲ್ಲಾಡಳಿತದ ಪರಿಶ್ರಮದ ಫಲವಾಗಿ ರಾಮನಗರ ಜಿಲ್ಲೆ ಶೈಕ್ಷಣಿಕವಾಗಿ ಸಾಧನೆ ಮಾಡಲು ಸಾಧ್ಯವಾಯಿತು ಎಂದರು.

ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನುಣ್ಣೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಬಹುಮಾನ ವಿತರಿಸಲಾಯಿತು.

ಈ ವೇಳೆ ಎಂಪಿಸಿಎಸ್‌ ಅಧ್ಯಕ್ಷ ಚಂದ್ರು, ಕಾರ್ಯದರ್ಶಿ ನಾಗರಾಜು, ಎಸ್‌ಡಿಎಂಸಿ ಅಧ್ಯಕ್ಷ ನಿಂಗಾಚಾರಿ ಹಾಗೂ ಸದಸ್ಯರು, ಕ್ಷೇತ್ರ ಸಮನ್ವಯಾಧಿಕಾರಿ ಕುಸುಮ ಲತಾ, ಸಿಆರ್‌ಪಿ ಕೆ.ವೆಂಕಟೇಶ್‌, ಮುಖ್ಯ ಶಿಕ್ಷಕಿ ಪಾರ್ವತಮ್ಮ, ಸಹ ಶಿಕ್ಷಕಿ ಲಕ್ಷೀದೇವಮ್ಮ, ಗ್ರಾಪಂ ಸದಸ್ಯ ಎನ್‌.ಆರ್‌. ರವಿ, ಮಾಜಿ ಸದಸ್ಯ ಎನ್‌.ಎಲ್.ಶಿವಕುಮಾರ್‌, ಮುಖಂಡ ಪೊಲೀಸ್‌ ಕೃಷ್ಣೇಗೌಡ, ಹಾರೋಕೊಪ್ಪ ಕ್ಲಸ್ಟರ್‌ ವ್ಯಾಪ್ತಿಯ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಪೋಷಕರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Getting good response from people in constituency: D.K. Suresh

Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.