ನರೇಗಾ ಯೋಜನೆ ಸದ್ಬಳಕೆ ಮಾಡಿಕೊಳ್ಳಿ


Team Udayavani, Dec 1, 2020, 5:40 PM IST

ನರೇಗಾ ಯೋಜನೆ ಸದ್ಬಳಕೆ ಮಾಡಿಕೊಳ್ಳಿ

‌ಕನಕಪುರ: ಗ್ರಾಮೀಣ ಜನರ ಪಾಲಿಗೆ ವರದಾನವಾಗಿರುವ ನರೇಗಾ ಯೋಜನೆಯನ್ನು ಪ್ರತಿಯೊಬ್ಬರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಚಿಕ್ಕಮುದುವಾಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪುಟ್ಟರಾಮಯ್ಯ ಸಲಹೆ ನೀಡಿದರು.

ತಾಲೂಕಿನ ಕಸಬಾ ಹೋಬಳಿಯ ಚಿಕ್ಕಮುದುವಾಡಿ ಗ್ರಾಮದ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಗ್ರಾಮಸಭೆಯಲ್ಲಿ ಮಾತನಾಡಿದ ಅವರು,ಗ್ರಾಮೀಣ ಭಾಗದ ಉದ್ಯೋಗ ರಹಿತರಿಗೆ ನರೇಗಾ ಯೋಜನೆಯಲ್ಲಿ 100 ಮಾನವ ದಿನಗಳನ್ನು ಸೃಜಿಸಲುಅವಕಾಶವಿದ್ದು, ಪುರುಷ ಮಹಿಳೆ ಎಂಬ ಭೇದಭಾವವಿಲ್ಲದೆ ದಿನವೊಂದಕ್ಕೆ 275ರೂ. ಸಮಾನ ವೇತನ ನಿಗದಿಯಾಗಿದೆ. ಒಂದು ಜಾಬ್‌ ಕಾರ್ಡ್‌ ನೋಂದಣಿ ಮಾಡಿಕೊಂಡರೆ ವಾರ್ಷಿಕ 40 ಸಾವಿರ ರೂ.ನರೇಗಾ ಸೌಲಭ್ಯಪ್ರತಿಯೊಬ್ಬರಿಗೂ ಸಿಗಲಿದೆ ಎಂದು ಹೇಳಿದರು.

ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ: ನಮ್ಮ ಗ್ರಾಮ ಪಂಚಾಯಿತಿಯಲ್ಲಿ 1900 ಜಾಬ್‌ ಕಾರ್ಡ್‌ ಮಾಡಿಕೊಳ್ಳಲು ಅವಕಾಶವಿದೆ. ಈಗಾಗಲೇ 1424 ಜಾಬ್‌ ಕಾರ್ಡುಗಳು ನೋಂದಣಿಯಾಗಿವೆ. ಉಳಿದಂತೆಇದರಿಂದವಂಚಿತವಾಗಿರುವ400 ರಿಂದ 500 ಫ‌ಲಾನುಭವಿಗಳು, ಜತೆಗೆ ಲಾಕ್‌ಡೌನ್‌ನಿಂದ ನಗರ ಪ್ರದೇಶಗಳಿಗೆ ಉದ್ಯೋಗ ಅರಸಿ ವಲಸೆ ಮರಳಿರುವ ಉದ್ಯೋಗ ರಹಿತರು ಜಾಬ್‌ ಕಾರ್ಡ್‌ಗಳಿಗೆ ನೋಂದಣಿ ಮಾಡಿಕೊಂಡು ಸರ್ಕಾರದ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ವಿವರಿಸಿದರು.

ಗ್ರಾಮಸಭೆಗಳ ಮಹತ್ವ ತಿಳಿಯಿರಿ: ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಮುತ್ತುರಾಜ್‌ ಮಾತನಾಡಿ,ನರೇಗಾ ಯೋಜನೆ ಜಾರಿಯಾಗಿ ಅನೇಕ ವರ್ಷಗಳೇ ಕಳೆದಿವೆ. ಯೋಜನೆಯಲ್ಲಿ ಬಹುತೇಕ ಗ್ರಾಮೀಣ ಭಾಗದ ಜನರು ಉಪಯೋಗವನ್ನು ಪಡೆದುಕೊಂಡಿದ್ದಾರೆ. ಆದರೂ, ಈವರೆಗೆ ಗ್ರಾಮ ಸಭೆಗಳ ಮಹತ್ವ ತಿಳಿದಿರುವುದು ಮಾತ್ರ ವಿಪರ್ಯಾಸ ಎಂದು ಹೇಳಿದರು.

ಗ್ರಾಮ ಸಭೆಯಲ್ಲಿ ಪಾಲ್ಗೊಳ್ಳಿ: ಗ್ರಾಮಸಭೆಗಳ ಬಗ್ಗೆ ಜಾಗೃತಿ ಮೂಡಿಸಬೇಕಾದ ಜನಪ್ರತಿನಿಧಿಗಳು ಸಭೆಗೆ ಹಾಜರಾಗದೆ ಇರುವುದು ಮತ್ತೂಂದು ವೈಫ‌ಲ್ಯ. ಗ್ರಾಮೀಣ ಭಾಗದ ಅಭಿವೃದ್ಧಿ ಬಹುತೇಕ ಗ್ರಾಮ ಪಂಚಾಯಿತಿಯಗ್ರಾಮಸಭೆಗಳಿಂದಲೇ ಆರಂಭಗೊಳ್ಳುತ್ತವೆ. ಹಾಗಾಗಿಪ್ರತಿಯೊಬ್ಬರೂ ಗ್ರಾಮಸಭೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ವಿವರಿಸಿದರು.

ನರೇಗಾ ಯೋಜನೆ ಜಾರಿಯಾಗುವ ಮುನ್ನ ಯಾವುದೇ ಒಂದು ಸರ್ಕಾರದಸೌಲಭ್ಯಗಳನ್ನು ಪಡೆಯಬೇಕಾದರೆ ವರ್ಷಗಟ್ಟಲೆ ಕಾಯಬೇಕಿತ್ತು. ಆದರೆ, ಇಂದು ಆ ಪರಿಸ್ಥಿತಿ ಇಲ್ಲ. ನಮ್ಮ ರೇಷ್ಮೆಇಲಾಖೆಯಲ್ಲಿ ಹೊಸದಾಗಿ ರೇಷ್ಮೆ ನಾಟಿಮಾಡಿಕೊಂಡ ರೈತರಿಗೆ ಕನಿಷ್ಠ 40ಸಾವಿರದವರೆಗೆ ಸಹಾಯಧನ ನೀಡಲಾಗುತ್ತದೆ ಎಂದು ಹೇಳಿದರು.

ಈ ಗ್ರಾಮಸಭೆಯಲ್ಲಿ ಗ್ರಾಮ ಪಂಚಾಯಿತಿಯಸಿಬ್ಬಂದಿ,ಅಂಗನವಾಡಿ ಕಾರ್ಯಕರ್ತೆಯರು ಸಾರ್ವಜನಿಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-sadasd

BJP-JDS ಮೈತ್ರಿ ಯಾರ “ಸಂತೋಷ”ಕ್ಕೆ?: ವಾಗ್ದಾಳಿ ವಿಡಿಯೋ ಹಂಚಿ ಕಾಂಗ್ರೆಸ್ ಟಾಂಗ್

BJP-JDS ಮೈತ್ರಿ ಬಗ್ಗೆ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದೇನು?

BJP-JDS ಮೈತ್ರಿ ಬಗ್ಗೆ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದೇನು?

vijayen

Cauvery ವಿಚಾರದಲ್ಲಿ ರಾಜ್ಯ ಸರಕಾರ ತಲೆ ಕೆಡಿಸಿಕೊಂಡಿರದಿರುವುದು ಅಕ್ಷಮ್ಯ:ವಿಜಯೇಂದ್ರ

11-chikkamagaluru

Chikkamagaluru: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ: ಮೂವರು ಪಾರು !

1-wqewqwqe

Raichur: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪತ್ನಿಯನ್ನು ಕೊಂದು ಪತಿ ನೇಣಿಗೆ ಶರಣು

iPhone 15ಗಾಗಿ ಮೊಬೈಲ್‌ ಅಂಗಡಿ ಸಿಬ್ಬಂದಿಯನ್ನೇ ಹಿಗ್ಗಾಮುಗ್ಗಾವಾಗಿ ಥಳಿಸಿದ ಗ್ರಾಹಕರು.!

iPhone 15ಗಾಗಿ ಮೊಬೈಲ್‌ ಅಂಗಡಿ ಸಿಬ್ಬಂದಿಯನ್ನೇ ಹಿಗ್ಗಾಮುಗ್ಗಾವಾಗಿ ಥಳಿಸಿದ ಗ್ರಾಹಕರು.!

Nijjar: ಕೆನಡಾದಲ್ಲಿ ಇದ್ದುಕೊಂಡೇ ಭಾರತ ಮೇಲಿನ ದಾಳಿಗೆ ಧನಸಹಾಯ ಮಾಡುತ್ತಿದ್ದ ನಿಜ್ಜರ್

Nijjar: ಕೆನಡಾದಲ್ಲಿ ಇದ್ದುಕೊಂಡೇ ಭಾರತದಲ್ಲಿ ದಾಳಿಗೆ ಧನಸಹಾಯ ಮಾಡುತ್ತಿದ್ದ ನಿಜ್ಜರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramnagar: ಡಿಕೆಶಿ ಕೋಟೆಯಲ್ಲಿ ಮೈತ್ರಿ ಕಮಾಲ್‌ ಮಾಡುತ್ತಾ?

Ramnagar: ಡಿಕೆಶಿ ಕೋಟೆಯಲ್ಲಿ ಮೈತ್ರಿ ಕಮಾಲ್‌ ಮಾಡುತ್ತಾ?

Ramanagar; ವಸತಿ ಶಾಲೆಯಲ್ಲಿ ನೀರಿನ ಸಂಪು ಕುಸಿದು ಬಾಲಕ ಸಾವು

Ramanagar; ವಸತಿ ಶಾಲೆಯಲ್ಲಿ ನೀರಿನ ಸಂಪು ಕುಸಿದು ಬಾಲಕ ಸಾವು

tdy-4

Mekedatu: ಕಾವೇರಿ ಸಂಕಷ್ಟಕ್ಕೆ ಮೇಕೆದಾಟು ಅಣೆಕಟ್ಟು ಪರಿಹಾರ

Cauvery Issue ರಾಜ್ಯದ ರೈತರ ಹಿತಕಾಯುವಲ್ಲಿ ರಾಜ್ಯ ಸರ್ಕಾರ ಎಡವಿದೆ: ಕುಮಾರಸ್ವಾಮಿ ಆರೋಪ

Cauvery Issue ರಾಜ್ಯದ ರೈತರ ಹಿತಕಾಯುವಲ್ಲಿ ರಾಜ್ಯ ಸರ್ಕಾರ ಎಡವಿದೆ: ಕುಮಾರಸ್ವಾಮಿ ಆರೋಪ

Missing: ರಾಮನಗರ: ಬಾಲಮಂದಿರದಿಂದ ಮೂವರು ಬಾಲಕರು ನಾಪತ್ತೆ

Missing: ರಾಮನಗರ: ಬಾಲಮಂದಿರದಿಂದ ಮೂವರು ಬಾಲಕರು ನಾಪತ್ತೆ

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

1-sadasd

BJP-JDS ಮೈತ್ರಿ ಯಾರ “ಸಂತೋಷ”ಕ್ಕೆ?: ವಾಗ್ದಾಳಿ ವಿಡಿಯೋ ಹಂಚಿ ಕಾಂಗ್ರೆಸ್ ಟಾಂಗ್

BJP-JDS ಮೈತ್ರಿ ಬಗ್ಗೆ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದೇನು?

BJP-JDS ಮೈತ್ರಿ ಬಗ್ಗೆ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದೇನು?

vijayen

Cauvery ವಿಚಾರದಲ್ಲಿ ರಾಜ್ಯ ಸರಕಾರ ತಲೆ ಕೆಡಿಸಿಕೊಂಡಿರದಿರುವುದು ಅಕ್ಷಮ್ಯ:ವಿಜಯೇಂದ್ರ

11-chikkamagaluru

Chikkamagaluru: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ: ಮೂವರು ಪಾರು !

Bahrain: ನೂತನ ನಿಯೋಜಿತ ರಾಯಭಾರಿ ಭೇಟಿ

Bahrain: ನೂತನ ನಿಯೋಜಿತ ರಾಯಭಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.